ಹಾಸನ: ಪತಿಯನ್ನು ಕಳೆದುಕೊಂಡ ಬೇಸರದಿಂದ ಮಹಿಳೆಯೊಬ್ಬರು ಎರಡು ವರ್ಷದ ಮಗಳೊಂದಿಗೆ ನೇಣಿಗೆ ಶರಣಾಗಿರುವ ಘಟನೆ ಘಟನೆ ಸಕಲೇಶಪುರ ತಾಲ್ಲೂಕು, ಆನೆಮಹಲ್ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ದಾಖಲೆ ಬರೆದ ವಿರಾಟ್ ಕೊಹ್ಲಿ
ಪ್ರಜ್ವಲ (26), ಸಾಧ್ವಿ (2) ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಪ್ರಜ್ವಲ ಅವರ ಗಂಡ ಸುರೇಂದ್ರ ಸಾವನ್ನಪ್ಪಿದ್ದರು. ಈ ಆಘಾತದಿಂದ ಪ್ರಜ್ವಲ ಹೊರಬಂದಿರಲಿಲ್ಲ. ಪತಿಯ ನೆನಪಿನಲ್ಲಿಯೇ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಭಾನುವಾರದ ಬಾಡೂಟಕ್ಕೆ ಮಾಡಿ ಪೋರ್ಕ್ ಫ್ರೈ
ಪತಿಯನ್ನು ಕಳೆದುಕೊಂಡು ಬೇಸರದಲ್ಲಿದ್ದ ಮಗಳ ಸ್ಥಿತಿ ಕಂಡು ಪ್ರಜ್ವಲ ಪೋಷಕರು ಆನೆಮಹಲ್ ಗ್ರಾಮದ ಮೋಹನ್ ಎಂಬುವವರೊಂದಿಗೆ ಜೂನ್ 16 ರಂದು ಮತ್ತೊಂದು ವಿವಾಹ ಮಾಡಿದ್ದರು. ಆದರೆ ಮೊದಲ ಪತಿಯ ಸಾವಿನ ಆಘಾತದಿಂದ ಹೊರಬರಲಾಗದೆ, ಆನೆಮಹಲ್ ಗ್ರಾಮದ ಮನೆಯಲ್ಲಿಯೇ ಮಗು ಕೊಂದು ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಸಕಲೇಶಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.