ಪ್ರತ್ಯೇಕ ತುಳುನಾಡು ಬೇಡಿಕೆ ಕುಚೋದ್ಯ, ಸಾಂವಿಧಾನಿಕ ಮಾನ್ಯತೆಗೆ ನನ್ನ ಹೋರಾಟವಿದೆ: ಕರಂದ್ಲಾಜೆ

Public TV
1 Min Read
Shobha Karandlaje

ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದೇನೆ. ಎರಡು ಬಾರಿ ಸಂಸತ್ ನಲ್ಲಿ ಪ್ರಸ್ತಾಪ ಮಾಡಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: 8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್

MODI 4 medium

ನಾವು ಕರ್ನಾಟಕದವರು. ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಇಲ್ಲ. ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕಾದವರು. ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ. ತುಳುನಾಡು ಎಂಬ ಬೇಡಿಕೆ ಸರಿಯಲ್ಲ. ಯಾರೂ ಪ್ರತ್ಯೇಕತೆ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಗಾಗಿ ನಮ್ಮ ಹೋರಾಟ ಇದೆ. ತುಳು ಭಾಷಾ ಅಭಿಮಾನಿಗಳು, ಹೋರಾಟಗಾರರು ಕವಿಗಳು ಕೃತಿಕಾರರ ಮನಸ್ಸಿನ ಭಾವನೆ ಏನೆಂದು ನನಗೆ ತಿಳಿದಿದೆ. ತುಳು ಭಾಷಿಗಳಾಗಿ ಏನೆಲ್ಲ ಮಾಡಬೇಕು ಖಂಡಿತಾ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *