Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Bengaluru City

ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Public TV
Last updated: June 22, 2021 2:44 pm
Public TV
Share
3 Min Read
CD CASE
SHARE

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ ಸಿಆರ್ ಪಿಸಿ 164 ಅಡಿ ನೀಡಿರುವ ಸ್ವಇಚ್ಛಾ ಹೇಳಿಕೆಯನ್ನ ರದ್ದು ಮಾಡಬೇಕು ಅಂತಾ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಕಲಂ 164ರ ಅಡಿಯಲ್ಲಿ ಹೇಳಿಕೆಯನ್ನು ಹಾಗೂ ಅದರ ನ್ಯಾಯಬದ್ಧತೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಂತ್ರಸ್ತೆಯ ಪೋಷಕರು ಪ್ರಶ್ನಿಸಿದ್ರು. ಸಂತ್ರಸ್ತೆಯ ಹೇಳಿಕೆ ಅವಳ ಮನಸ್ಸಿಗೆ ವಿರುದ್ಧವಾಗಿ ಹಾಗೂ ಒತ್ತಾಯ ಪೂರ್ವಕವಾಗಿ ಪಡೆಯಲಾಗಿದೆ ಎಂದು ಆರೋಪಿಸಿದ್ದರು. ಕಲಂ 164 ಅಡಿಯಲ್ಲಿ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಪಡೆಯುವಾಗ ಸಂತ್ರಸ್ತೆಯ ಮನಸ್ಥಿತಿ ಸರಿ ಇರಲಿಲ್ಲ ಹಾಗೂ ಮಾನಸಿಕ ಒತ್ತಡದಲ್ಲಿದ್ದಳು ಎಂದು ಪೋಷಕರು ವಾದಿಸಿದ್ದರು.

cd lady parents sit ramesh jarkiholi dk shivakumar

ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಈ ರಿಟ್ ಅರ್ಜಿಯಲ್ಲಿ ಸಂತ್ರಸ್ತೆಯ ಪರವಾಗಿ ತಮ್ಮ ವಾದವನ್ನೂ ಆಲಿಸಬೇಕೆಂದು ಸುಪ್ರೀಂಕೋರ್ಟ್ ವಕೀಲರಾದ ಸಂಕೇತ್ ಏಣಗಿ ಅರ್ಜಿ ಸಲ್ಲಿಸಿದ್ದರು. ವಕೀಲ ಸಂಕೇತ್ ಏಣಗಿ ಅವರ ವಾದ ಆಲಿಸಿದ ನ್ಯಾಯಾಲಯ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಕಲಂ 164 ಸಿಆರ್ ಪಿಸಿ ಅಡಿಯಲ್ಲಿ ಹೇಳಿಕೆ ನ್ಯಾಯಬದ್ಧವಾಗಿದ್ದು, ಸುಪ್ರೀಂಕೋರ್ಟಿನ ನಿರ್ಭಯ ಅತ್ಯಾಚಾರ ಪ್ರಕರಣದ ತೀರ್ಪಿನ ಅನುಸಾರವಾಗಿದೆ. ತದನಂತರ ಹೊಸದಾಗಿ 2013ರಲ್ಲಿ ಕಲಂ 164 ಅಡಿ ತಿದ್ದುಪಡಿಯಾಗಿ ಸೇರ್ಪಡೆಯಾದ ಹೊಸ ಕಲಂ 164(5) & (5ಂ) ಸಿಆರ್ ಪಿಸಿ ಅಡಿಯಲ್ಲಿ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ಸ್ವಇಚ್ಛೆಯಿಂದ ಹಾಗೂ ಯಾವುದೇ ಒತ್ತಾಯವಿಲ್ಲದೆ ಹೇಳಿಕೆ ನೀಡಿದ್ದು ಅದು ನ್ಯಾಯಬದ್ಧವಾಗಿದೆ ಎಂದು ವಾದ ಮಂಡಿಸಿದ್ರು.  ಇದನ್ನೂ ಓದಿ: ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

CD LADY PARENTS 4

ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ವಾದ ಮಂಡನೆ ಮಾಡಿದ್ರು. ವಾದ ಪ್ರತಿವಾದ ಆಲಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ, ಸಂತ್ರಸ್ತೆಯು 2013ರಲ್ಲಿ ಕಲಂ 164 ಸಿಆರ್ ಪಿಸಿಯ ತಿದ್ದುಪಡಿಯಾಗಿ ಸೇರ್ಪಡೆಯಾದ ಹೊಸ ಕಲಂ 164(5) & (5ಂ) ಅಡಿ ಸಿಆರ್ ಪಿಸಿಯರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಎದುರಿಗೆ ಸ್ವಇಚ್ಛೆಯಿಂದ ಹಾಗೂ ಯಾವುದೇ ಒತ್ತಾಯವಿಲ್ಲದೆ ಹೇಳಿಕೆ ನೀಡಿದ್ದು, ಅದು ನ್ಯಾಯಬದ್ಧವಾಗಿದೆ ಎಂದು ಮಹತ್ವದ ತೀರ್ಪು ನೀಡಿ ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

CD LADY PARENTS 2

ಹೇಬಿಯಸ್ ಕಾರ್ಪಸ್ ಅರ್ಜಿ ಸಹ ವಜಾ:
ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ

CD LADY PARENTS 3

ಒಪ್ಪಿತ ಲೈಂಗಿಕ ಕ್ರಿಯೆನಾ?:
ಪ್ರಕರಣದ ಆರಂಭದಲ್ಲಿ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ. ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

TAGGED:CD caseCD LadyhighcourtPublic TVramesh jarkiholiಎಸ್‍ಐಟಿಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿಸಿಡಿ ಪ್ರಕರಣಸಿಡಿ ಲೇಡಿಹೈಕೋರ್ಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
24 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
24 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
46 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
49 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?