Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ ಜಿಲ್ಲೆ ಕ್ರೀಡಾಸಕ್ತ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ – ಬಾಲಕಿಯರ ಕ್ರೀಡಾ ವಸತಿನಿಲಯ ಮಂಜೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯ ಜಿಲ್ಲೆ ಕ್ರೀಡಾಸಕ್ತ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ – ಬಾಲಕಿಯರ ಕ್ರೀಡಾ ವಸತಿನಿಲಯ ಮಂಜೂರು

Districts

ಮಂಡ್ಯ ಜಿಲ್ಲೆ ಕ್ರೀಡಾಸಕ್ತ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ – ಬಾಲಕಿಯರ ಕ್ರೀಡಾ ವಸತಿನಿಲಯ ಮಂಜೂರು

Public TV
Last updated: June 22, 2021 3:59 pm
Public TV
Share
2 Min Read
narayanagowda
SHARE

ಮಂಡ್ಯ: ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದು ಕೊಟ್ಟ ಮಂಡ್ಯ ಜಿಲ್ಲೆಯವರಾದ ಮಮತಾ ಶೆಟ್ಟಿ, ಸವಿತಾ, ಪವಿತ್ರ, ಭವ್ಯ ಅವರಂತೆ, ನಾವೂ ಸಾಧಿಸಬೇಕು ಎಂಬ ಹಂಬಲದಲ್ಲಿರುವ ಮಂಡ್ಯದ ಕ್ರೀಡಾ ವಿದ್ಯಾರ್ಥಿನಿಯರಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾಲಕಿಯರ ಕ್ರೀಡಾ ವಸತಿ ನಿಲಯ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಕ್ರೀಡೆಯಲ್ಲಿ ಸಾಧನೆಯತ್ತ ನಿಮ್ಮ ಗುರಿ ಇರಲಿ. ಅದಕ್ಕೆ ಬೇಕಾದ ಎಲ್ಲ ಬೆಂಬಲ ನೀಡಲು ಸರ್ಕಾರ ಸಿದ್ಧ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಕ್ರೀಡಾಪಟುಗಳಿಗೆ ಆಶ್ವಾಸನೆ ನೀಡಿದ್ದರು. ಅದರಂತೆ ಮಂಡ್ಯ ಜಿಲ್ಲಾ ಕ್ರೀಡಾಂಗಣವನ್ನು 10 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾಡುತ್ತಿದ್ದಾರೆ. ಖೇಲೊ ಇಂಡಿಯಾ ಅಡಿ ಖೇಲೊ ಇಂಡಿಯಾ ಕೇಂದ್ರ ಕೂಡ ಸ್ಥಾಪನೆ ಆಗುತ್ತಿದೆ. ಇದೆಲ್ಲಕ್ಕಿಂತ ಪ್ರಮುಖವಾಗಿ ವೈಜ್ಞಾನಿಕವಾಗಿ ಕ್ರೀಡಾ ಪಟುಗಳಲ್ಲಿರುವ ಕ್ರೀಡಾ ಸಾಮರ್ಥ್ಯ ಗುರುತಿಸುವಂತ ಕ್ರೀಡಾ ವಿಜ್ಞಾನ ಕೇಂದ್ರ 2 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಪನೆಯಾಗುತ್ತಿದೆ.

MND NARAYANAGOWDA

ಜಿಲ್ಲೆಗೆ ಮಂಜೂರಾಗಿದೆ ಬಾಲಕಿಯರ ವಸತಿ ನಿಲಯ
ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೆ ವಸತಿ ನಿಲಯವೇ ಇಲ್ಲದ ಕಾರಣ ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳಿಗೆ ಅವಕಾಶ ಮರೀಚಿಕೆಯಾಗುತ್ತಿತ್ತು. ಅದರಲ್ಲು ವಿಶೇಷವಾಗಿದೆ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವುದಕ್ಕೆ ಬಹಳ ಕಠಿಣ ಪರಿಸ್ಥಿತಿ ಇತ್ತು. ಬಾಲಕಿಯರೂ ಕ್ರೀಡೆಯಲ್ಲಿ ಸಾಧನೆ ತೋರಿಸುವುದಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಆಗಿರುವ ಡಾ. ನಾರಾಯಣಗೌಡ ಮಂಡ್ಯ ಜಿಲ್ಲೆಗೆ 2 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯವನ್ನು ಮಂಜೂರು ಮಾಡಿಸಿದ್ದಾರೆ.

Narayan Gowda

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಂಡ್ಯದ ಕ್ರೀಡಾಪಟುಗಳ ಸಾಧನೆ
ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಪ್ರತಿಭೆಗಳಿಗೆ ಬರವಿಲ್ಲ ಎನ್ನುವುದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೋರಿಸಿದ ಸಾಧನೆಗಳೇ ಸಾಕ್ಷಿ. ವಾಲಿಬಾಲ್‍ನಲ್ಲಿ ಮಮತಾ ಶೆಟ್ಟಿ ಹಾಗೂ ಪವಿತ್ರ, ಬಾಸ್ಕೆಟ್ ಬಾಲ್ ನಲ್ಲಿ ಸವಿತಾ, ಕಬ್ಬಡ್ಡಿಯಲ್ಲಿ ಭವ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿ ಕೀರ್ತಿಪತಾಕೆ ಹಾರಿಸಿರುವ ಇವರೆಲ್ಲ ಮಂಡ್ಯ ಜಿಲ್ಲೆಯವರು. ವಿಪರ್ಯಾಸ ಎಂದರೆ ಇಂತಹ ಸಾಧಕರ ತವರು ಜಿಲ್ಲೆಯಲ್ಲೇ ಬಾಲಕಿಯರಿಗೆ ಕ್ರೀಡಾ ವಸತಿನಿಲಯ ಇರಲಿಲ್ಲ. ಈಗ ಸರ್ಕಾರ ವಸತಿನಿಲಯ ಮಂಜೂರು ಮಾಡಿದೆ. ಹೀಗಾಗಿ ಈ ಎಲ್ಲ ಕ್ರೀಡಾ ಸಾಧಕರಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ವಿದ್ಯಾರ್ಥಿನಿಯರು ಮಿಂಚಲು ಅವಕಾಶವಾಗಲಿದೆ.

NARAYAN GOWDA

ಮಂಡ್ಯ ಜಿಲ್ಲೆಯಲ್ಲಿ ಬಾಲಕರ ವಸತಿನಿಲಯ ಇದೆ. ಆದರೆ ಬಾಲಕಿಯರಿಗೆ ವಸತಿನಿಲಯ ಬೇಕು ಎನ್ನುವುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಈಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಬಾಲಕಿಯರ ವಸತಿನಿಲಯ ಮಂಜೂರು ಮಾಡಿಸಿರುವುದು ಶ್ಲಾಘನೀಯ. ಕ್ರೀಡೆಯಲ್ಲಿ ಸಾಧನೆ ತೋರುವ ಕನಸು ಹೊತ್ತಿರುವ ಅದೆಷ್ಟೋ ಬಾಲಕಿಯರಿಗೆ ಇದು ವರದಾನವಾಗಲಿದೆ ಎಂದು ಮಂಡ್ಯ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಅನಿತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೆ ಶಂಕುಸ್ಥಾಪನೆ
ಬಾಲಕಿಯರ ಕ್ರೀಡಾ ವಸತಿನಿಲಯ ಕಟ್ಟಡಕ್ಕೆ ಶೀಘ್ರದಲ್ಲೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಅಲ್ಲದೆ 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

TAGGED:girls hostelmandyanarayana gowdaPublic TVನಾರಾಯಾಣ ಗೌಡಪಬ್ಲಿಕ್ ಟಿವಿಬಾಲಕಿಯರ ಕ್ರೀಡಾ ವಸತಿ ನಿಲಯಮಂಡ್ಯ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Byrati Basavaraj 1
Bengaluru City

ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ

Public TV
By Public TV
49 minutes ago
bushra bibi imran khan
Latest

Toshakhana Case | ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಷ್ರಾ ಬಿಬಿಗೆ ತಲಾ 17 ವರ್ಷ ಜೈಲು

Public TV
By Public TV
1 hour ago
a bjp worker committed suicide by setting herself on fire in kalaburagi
Crime

ಕಲಬುರಗಿ | ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

Public TV
By Public TV
2 hours ago
DK Shivakumar 2 1
Bengaluru City

ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ ಹೇಳಿದ್ದೇನು?

Public TV
By Public TV
2 hours ago
Delhi airport 1
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪೈಲಟ್ ಅಮಾನತು

Public TV
By Public TV
2 hours ago
JCB
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?