Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಿನಸಿ ಕಿಟ್ ವಿತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಗೋಪಾಲಯ್ಯ

Public TV
Last updated: June 23, 2021 1:11 pm
Public TV
Share
3 Min Read
gopalaiah
SHARE

ಬೆಂಗಳೂರು: ಸಂಕಷ್ಟದಲ್ಲಿರುವ ಶಿಕ್ಷಕರಿಗೆ ದಿನಸಿ ಕಿಟ್‍ಗಳನ್ನು ವಿತರಿಸುವ ಮೂಲಕವಾಗಿ ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಗೋಪಾಲಯ್ಯ ಅವರು ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ: ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ

K Gopalaiah birthday 1 medium

ರಾಜ್ಯದಲ್ಲಿ ಎರಡನೆ ಕೊರೊನಾ ಅಲೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿ ಸಾವು-ನೋವು ಸಂಭವಿಸಿದ್ದರಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದೆ ಸುಮಾರು 2 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ದಿನಸಿ ಕಿಟ್‍ಗಳನ್ನು ವಿತರಿಸಿ ಮಾನವೀಯತೆ ಮೆರೆದರು. ಮಹಾಲಕ್ಷ್ಮಿಪುರಂನ ನಾಗಪುರ ವಾರ್ಡ್‍ನಲ್ಲಿರುವ ಬಿಜಿಎಸ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಸೇರಿದಂತೆ ಬೆಂಬಲಿಗರು, ಹಿತೈಷಿಗಳ ಸಮ್ಮುಖದಲ್ಲಿ ಶಿಕ್ಷಕರಿಗೆ ದಿನಸಿ ಕಿಟ್‍ಗಳನ್ನು ವಿತರಣೆ ಮಾಡಲಾಯಿತು.

MPL Sports ಫೌಂಡೇಷನ್ ವತಿಯಿಂದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇಂದು ನಡೆಸಿದ ಉಚಿತ ಲಸಿಕಾ ಅಭಿಯಾನದ ತುಣುಕುಗಳು. pic.twitter.com/ORMsDJ9BHv

— K Gopalaiah (@GopalaiahK) June 22, 2021

ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಅಶ್ವತ್ಥ ನಾರಾಯಣ್, ಕೊರೊನಾ ಸಂಕಷ್ಟದಲ್ಲಿ ಅಬಕಾರಿ ಸಚಿವರೂ ಆಗಿರುವ ಗೋಪಾಲಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಮಾಡಿರುವ ಸಾಮಾಜಿಕ ಸೇವೆಗಳು ನಮಗೆಲ್ಲರಿಗೂ ಮಾದರಿಯಾಗಿದ್ದಾರೆ. ಕ್ಷೇತ್ರದಲ್ಲಿರುವ ಪ್ರತಿಯೊಬ್ಬರಿಗೂ ಜಾತಿ, ಮತ, ಭೇದ ಯಾವುದನ್ನೂ ನೋಡದೆ ಸಂಕಷ್ಟದಲ್ಲಿರುವ ಜನರಿಗೆ ಔಷಧೋಪಚಾರ, ದಿನಸಿ ಕಿಟ್‍ಗಳು, ಆರ್ಥಿಕ ನೆರವು, ಕೊರೊನಾ ಸೋಂಕು ತಗುಲಿದವರಿಗೆ ಆಕ್ಸಿಜನ್, ವೆಂಟಿಲೇಟರ್ ಸೌಲಭ್ಯ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಹಲವು ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾರ್ವಜನಿಕರಿಗೆ ಉಚಿತ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಇಂದು ಕೂಡ ಮುಂದುವರೆದಿದ್ದು, ಮಹಾಲಕ್ಷ್ಮಿ ಲೇಔಟ್ ನ ಸಾರ್ವಜನಿಕರು ಬಹಳ ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ನಾಗಪುರ ವಾರ್ಡ್ ನ ವ್ಯಾಕ್ಸಿನೇಷನ್‌ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಲಾಯಿತು. ಹೆಚ್ಚಿನ ಜನರು ಲಸಿಕೆ ಪಡೆಯುವಂತೆ ಕರೆನೀಡಲಾಯಿತು#LargestVaccinationDrive pic.twitter.com/sPhKqSyH9a

— K Gopalaiah (@GopalaiahK) June 22, 2021

ಶಿಕ್ಷಣ, ಆರೋಗ್ಯ, ಅನ್ನ, ವಸತಿ ಕ್ಷೇತ್ರಗಳಿಗೆ ವಿಶೇಷವಾಗಿ ಗಮನ ಹರಿಸಿರುವ ಅವರು, ಕ್ಷೇತ್ರದಲ್ಲಿ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲೆಂದು ಮೂರು ಮಾದರಿ ಸರ್ಕಾರಿ ಶಾಲೆಗಳನ್ನು ನಿರ್ಮಿಸಿದ್ದಾರೆ. ಒಂದೊಂದು ಶಾಲೆಯಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಭಗವಂತ ಅವರಿಗೆ ಇನ್ನಷ್ಟು ಸಮಾಜಸೇವೆ ಮಾಡುವ ಅವಕಾಶ ನೀಡಲಿ ಎಂದಿದ್ದಾರೆ.

K Gopalaiah birthday2 1 medium

ಗೋಪಾಲಯ್ಯ ಮಾತನಾಡಿ, ಕೊರೊನಾ ಬಂದ ಸಂದರ್ಭದಲ್ಲಿ ನಾನು ಹುಟ್ಟುಹಬ್ಬ ಆಚರಿಸಬಾರದೆಂದು ನನ್ನ ಕ್ಷೇತ್ರದ ಜನತೆ, ಸಾರ್ವಜನಿಕರು, ಹಿತೈಷಿಗಳು, ಪಕ್ಷದ ಮುಖಂಡರಿಗೆ ಮನವಿ ಮಾಡಿಕೊಂಡಿದ್ದೆ. ಹಾರ, ತುರಾಯಿ, ಶಾಲು ಹಾಕಿಕೊಂಡರೆ ಅರ್ಥ ಬರುವುದಿಲ್ಲ. ಇದರ ಬದಲಿಗೆ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಕಿಟ್‍ಗಳನ್ನು ನೀಡಬೇಕೆಂದು ತೀರ್ಮಾನಿಸಿದ್ದೆನೆ. ಈಗಾಗಲೇ ಕ್ಷೇತ್ರದಲ್ಲಿ ಖಾಸಗಿ ಶಾಲೆಗಳಿಗೆ ಸ್ಪರ್ಧೆ ನೀಡುವಂತೆ ದೆಹಲಿಯಲ್ಲಿರುವ ಶಾಲೆಗಳಿಗಿಂತಲೂ ಉತ್ತಮ ಮೂಲಭೂತ ಸೌಕರ್ಯಗಳುಳ್ಳ ಮೂರು ಶಾಲೆಗಳನ್ನು ನಿರ್ಮಿಸಲಾಗಿದೆ. ಕೊರೊನಾ ಕಾರಣದಿಂದ ಅದು ಉದ್ಘಾಟನೆಯಾಗಲಿಲ್ಲ. ಶೀಘ್ರದಲ್ಲೇ ಶ್ರೀಗಳ ಆಶೀರ್ವಾದದೊಂದಿಗೆ ಪ್ರಾರಂಭಿಸುತ್ತೇವೆ ಎಂದಿದ್ದಾರೆ.

K Gopalaiah birthday3 medium

ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಕೊರೊನಾ ಬಂದಾಗ ಜನಪ್ರತಿನಿಗಳು ಜನರನ್ನು ಮರೆಯುವುದೇ ಹೆಚ್ಚು. ಆದರೆ, ಇದಕ್ಕೆ ವ್ಯತಿರಿಕ್ತವೆಂಬಂತೆ ತಮ್ಮ ಪ್ರಾಣ, ಕುಟುಂಬದ ಸದಸ್ಯರನ್ನೂ ಲೆಕ್ಕಿಸದೆ ಗೋಪಾಲಯ್ಯನವರು ಕ್ಷೇತ್ರದ ಜನತೆಗೆ ಸಂಜೀವಿನಿಯಾಗಿ ಪರಿಣಮಿಸಿದ್ದಾರೆ. ದೇವರು ಅವರಿಗೆ ಇನ್ನಷ್ಟು ಶಕ್ತಿಯನ್ನು ನೀಡಿ ಜನಸೇವೆ ಮಾಡುವ ಅವಕಾಶ ಕೊಡಲಿ. ಅದೇ ರೀತಿ ಕೊರೊನಾವೂ ನಮ್ಮಿಂದ ದೂರವಾಗಲಿ ಎಂದು ಶ್ರೀಗಳು ಹೇಳಿದ್ದಾರೆ.

K Gopalaiah birthday6 medium

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಒಬಿಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು ಮಾಜಿ ಉಪ ಮೇಯರ್ ಗಳಾದ ಹೇಮಲತ ಗೋಪಾಲಯ್ಯ ಹರೀಶ್ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಜಯರಾಮಯ್ಯ ಸೇರಿದಂತೆ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

TAGGED:birthdayGrocery KitK. Gopalaiahpublictvಕಿಟ್ಟ್ಕೊರೊನಾಗೊಪಾಲಯ್ಯಪಬ್ಲಿಕ್ ಟಿವಿಬೆಂಗಳೂರುಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood

You Might Also Like

MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
9 minutes ago
DK Shivakumar 7
Bengaluru City

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Public TV
By Public TV
11 minutes ago
Nirmalanandanatha Swamiji
Districts

ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಶಂಖನಾದ

Public TV
By Public TV
30 minutes ago
Shalini Rajneesh 1
Bengaluru City

ಹೂವುಗಳ ಮಾರಾಟದಂತೆ ಔಷಧೀಯ ಗಿಡಮೂಲಿಕೆಗಳಿಗೂ ಹರಾಜು ಅವಶ್ಯಕ – ಡಾ.ಶಾಲಿನಿ ರಜನೀಶ್

Public TV
By Public TV
37 minutes ago
modi stadium ahmedabad
Latest

ಅಹಮದಾಬಾದ್‌ನಲ್ಲಿ 2030ರ ಕಾಮನ್‌ವೆಲ್ತ್‌ ಗೇಮ್ಸ್‌ – ಈಗ ಅಧಿಕೃತ ಘೋಷಣೆ

Public TV
By Public TV
1 hour ago
Hong Kong Buildings Fire
Latest

ಹಾಂಕಾಂಗ್ ಏಳು ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ಅವಘಡ; 13 ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?