Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎನ್‍ಡಿಪಿಎಸ್ ಕಾಯ್ದೆ ಜಾರಿಗೆ ನಿಯಮ ರೂಪಿಸಲಾಗುವುದು: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎನ್‍ಡಿಪಿಎಸ್ ಕಾಯ್ದೆ ಜಾರಿಗೆ ನಿಯಮ ರೂಪಿಸಲಾಗುವುದು: ಬಸವರಾಜ ಬೊಮ್ಮಾಯಿ

Bengaluru City

ಎನ್‍ಡಿಪಿಎಸ್ ಕಾಯ್ದೆ ಜಾರಿಗೆ ನಿಯಮ ರೂಪಿಸಲಾಗುವುದು: ಬಸವರಾಜ ಬೊಮ್ಮಾಯಿ

Public TV
Last updated: June 26, 2021 5:21 pm
Public TV
Share
3 Min Read
Basavaraj Bommai
SHARE

ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣಕ್ಕೆ ರೂಪಿಸಲಾಗಿರುವ NDPS (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಇದರೊಂದಿಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

Basavaraj Bommai

ಬೆಂಗಳೂರಿನಲ್ಲಿ ಶನಿವಾರ ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ NDPS ಕಾನೂನನ್ನು ರೂಪಿಸಿದೆ. ಈ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಹಾಗೂ ಮತ್ತಷ್ಟು ಗಟ್ಟಿಯಾಗಿ ಜಾರಿಗೊಳಿಸಬೇಕೆಂಬುದು ನಮ್ಮ ದೃಢ ನಿರ್ಧಾರ.ಹೀಗಾಗಿ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡಲು ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ನ್ಯಾಷನಲ್ ಲಾ ಸ್ಕೂಲ್ ಜತೆ ಸಭೆ ನಡೆದಿದ್ದು ಕಾನೂನಿನನ್ವಯ ನಿಯಮ ರೂಪಿಸಿ ಜಾರಿಗೆ ತರಲು ಅಧ್ಯಯನ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ

drugs Molnupiravir

ಡಾರ್ಕ್ ವೆಬ್ ಮೂಲಕ ಸರಬರಾಜಾಗುತ್ತಿದ್ದ ಮಾದಕ ವಸ್ತುಗಳನ್ನು ನಮ್ಮ ಪೊಲೀಸರು ನಿಯಂತ್ರಿಸಿದ್ದಾರೆ. ಡಾರ್ಕ್ ವೆಬ್ ಅಪರಾಧ ಪತ್ತೆಯಿಂದ ಹಲವಾರು ಹೊಸ ವಿಚಾರಗಳು ಬೆಳಕಿಗೆ ಬಂದಿವೆ. ಅದರ ಆಧಾರದ ಮೇಲೆ ಹಲವಾರು ದಾಳಿಗಳು ನಡೆದಿವೆ. ಅಂತರಾಷ್ಟ್ರೀಯ ಮಟ್ಟದ ಪ್ಲೇಯರ್ ಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Basavaraja Bommai 1

ಕರ್ನಾಟಕ ಪೊಲೀಸರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ:

ಡ್ರಗ್ಸ್ ವಿರುದ್ಧದ ನಮ್ಮ ಹೋರಾಟದಲ್ಲಿ ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಕರ್ನಾಟಕ ಪೊಲೀಸರ ಡ್ರಗ್ ವಿರೋಧಿ ಕಾರ್ಯಾಚರಣೆಯಿಂದ ಬೇರೆ ಎಲ್ಲ ತನಿಖಾ ಏಜೆನ್ಸಿಗಳು ಜಾಗೃತವಾದವು ಅನ್ನುವುದು ಬಹಳ ಮುಖ್ಯ. ಸಾಮಾನ್ಯವಾಗಿ ಇದುವರೆಗೆ ಬೇರೆ ಏಜೆನ್ಸಿಗಳು ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದವು. ಆದರೆ ಈಗ ಕರ್ನಾಟಕ ಪೊಲೀಸರು ಅಪರಾಧ ಪತ್ತೆ ವಿಚಾರದಲ್ಲಿ ಬೇರೆ ಸಂಸ್ಥೆಗಳನ್ನು ಜಾಗೃತಗೊಳಿಸುತ್ತಿವೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

50 ಕೋಟಿ ಮೊತ್ತದ ಮಾದಕವಸ್ತುಗಳ ನಾಶ:
2020 21 ನೇ ಸಾಲಿನಲ್ಲಿ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿ ರುವ 3000 ಕೆಜಿ ಗಿಂತಲೂ ಹೆಚ್ಚು ತೂಕದ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಾಶಪಡಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮಾದಕ ವಸ್ತುಗಳು ಅಪಾರ ಪ್ರಮಾಣದ ಜನರ ಆರೋಗ್ಯವನ್ನು ಹಾಳು ಮಾಡುತ್ತಿದ್ದವು. ಆ ಅಪಾಯವನ್ನು ನಮ್ಮ ಪೊಲೀಸರು ತಪ್ಪಿಸಿದ್ದಾರೆ ಎಂಬುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು. ಇದನ್ನೂ ಓದಿ: 67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ

drugs medicine

ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೊಮ್ಮಾಯಿ ಪೊಲೀಸರಿಗೆ ಮಾದಕವಸ್ತು ತಡೆ ಮತ್ತು ನಾಶಪಡಿಸುವ ಕುರಿತು ಪ್ರಮಾಣ ವಚನ ಬೋಧಿಸಿದರು. ಇದುವರೆಗಿನ ಡ್ರಗ್ಸ್ ವಿರುದ್ಧದ ಹೋರಾಟದ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಮಾಣದ ವಿವಿಧ ರೀತಿಯ ಮಾದಕ ವಸ್ತುಗಳನ್ನು ಒಂದೇ ವರ್ಷದಲ್ಲಿ ವಶಪಡಿಸಿಕೊಂಡಿರುವುದು ಐತಿಹಾಸಿಕ. ಇದು ಕರ್ನಾಟಕ ಪೊಲೀಸರ ಸಣ್ಣ ಸಾಧನೆಯೇನಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿಗಳು ನಡೆದವು. ಇದರ ಜಾಡು ಹಿಡಿದು ರಾಜ್ಯದ ಇತರ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತುಗಳ ಜಾಲವನ್ನು ನಮ್ಮ ಪೊಲೀಸರು ಭೇದಿಸಿದರು. ಅದೆಷ್ಟೋ ಯುವಕರು, ಕುಟುಂಬಗಳು ಮಾದಕ ವಸ್ತುಗಳಿಂದ ಹಾಳಾಗುವುದನ್ನು ತಪ್ಪಿಸಿದರು ಎಂದು ಬಸರಾಜ್ ಬೊಮ್ಮಾಯಿ ಹೇಳಿದರು

TAGGED:Basavaraj S Bommaigovernmentpublictvಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಸರ್ಕಾರ
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

Pakistan Zindabad Naseer Hussain
Bengaluru City

ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ – 3 ವರ್ಷಗಳಲ್ಲಿ ಒಂದು ಕೇಸ್‌ಗೂ ಶಿಕ್ಷೆ ಕೊಡಿಸದ ಪೊಲೀಸ್ ಇಲಾಖೆ

Public TV
By Public TV
29 minutes ago
Vladimir Putin
Latest

4 ವರ್ಷಗಳ ಯುದ್ಧಕ್ಕೆ ಸಿಗುತ್ತಾ ಮುಕ್ತಿ? – ಶಾಂತಿ ಮಾತುಕತೆಗೆ ಉಕ್ರೇನ್‌ಗೆ ರಷ್ಯಾ ಆಹ್ವಾನ

Public TV
By Public TV
53 minutes ago
kollegala groom
Chamarajanagar

ಚಾ.ನಗರ| ಮದುವೆ ಮಂಟಪಕ್ಕೆ ತೆರಳುತ್ತಿದ್ದ ವರನಿಗೆ ಚಾಕು ಇರಿತ

Public TV
By Public TV
2 hours ago
Donald Trump
Latest

ಈಗ ಕೆನಡಾ ವಿಮಾನಗಳ ಮೇಲೆ ಟ್ರಂಪ್‌ ಸಮರ!

Public TV
By Public TV
2 hours ago
jail reel
Crime

ಜೈಲಲ್ಲಿ ಬಾಯ್‌ಫ್ರೆಂಡ್‌ ಜೊತೆ ರೀಲ್ಸ್‌ ಮಾಡಿದ ಯುವತಿ

Public TV
By Public TV
2 hours ago
RCB 7
Cricket

ಹ್ಯಾರಿಸ್‌, ಮಂಧಾನ ಆರ್ಭಟಕ್ಕೆ ವಾರಿಯರ್ಸ್‌ ಬರ್ನ್‌ – ಭರ್ಜರಿ ಜಯದೊಂದಿಗೆ ಫೈನಲ್‌ಗೆ RCB ಎಂಟ್ರಿ!

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?