Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂತ್ರಸ್ತರ ಸಂಕಟದ ಸಮಯದಲ್ಲಿ ನೆರವಿಗೆ ಧಾವಿಸದ ಕಾಂಗ್ರೆಸ್ಸಿನಿಂದ ಮೊಸಳೆ ಕಣ್ಣೀರು: ಗಣೇಶ್ ಕಾರ್ಣಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಸಂತ್ರಸ್ತರ ಸಂಕಟದ ಸಮಯದಲ್ಲಿ ನೆರವಿಗೆ ಧಾವಿಸದ ಕಾಂಗ್ರೆಸ್ಸಿನಿಂದ ಮೊಸಳೆ ಕಣ್ಣೀರು: ಗಣೇಶ್ ಕಾರ್ಣಿಕ್

Bengaluru City

ಕೋವಿಡ್ ಸಂತ್ರಸ್ತರ ಸಂಕಟದ ಸಮಯದಲ್ಲಿ ನೆರವಿಗೆ ಧಾವಿಸದ ಕಾಂಗ್ರೆಸ್ಸಿನಿಂದ ಮೊಸಳೆ ಕಣ್ಣೀರು: ಗಣೇಶ್ ಕಾರ್ಣಿಕ್

Public TV
Last updated: June 27, 2021 3:18 pm
Public TV
Share
2 Min Read
Capt Ganesh Karnik 1
SHARE

ಬೆಂಗಳೂರು: ತಾವು ಆಯ್ಕೆಯಾದ ಕ್ಷೇತ್ರದ ಜನರ ಸಹಾಯಕ್ಕೆ ಕೋವಿಡ್ ಸಂಕಟದ ಸಂದರ್ಭದಲ್ಲಿ ಧಾವಿಸದ ಕಾಂಗ್ರೆಸ್ಸಿನ ಮಹಾನ್ ನಾಯಕರುಗಳು ಈಗ ಡೆತ್ ಆಡಿಟ್‍ನ ಕುರಿತಾಗಿ ಮಾತನಾಡುತ್ತ ರಾಜ್ಯಾದ್ಯಂತ ಪ್ರವಾಸ ಮಾಡುವ ಹೇಳಿಕೆ ನೀಡಿರುವುದು ರಾಜಕೀಯ ಸೋಗಲಾಡಿತನಕ್ಕೆ ಒಂದು ಸ್ಪಷ್ಟ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಟೀಕಿಸಿದ್ದಾರೆ.

ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಸಂತ್ರಸ್ತ ಜನರ ನೆರವಿಗೆ ಧಾವಿಸದ ಕಾಂಗ್ರೆಸ್ ಕೇವಲ ಟ್ವಿಟರ್ ಅಭಿಯಾನದ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವುದಕ್ಕಷ್ಟೇ ಸೀಮಿತವಾಗಿದ್ದುದು ಅವರ ರಾಜಕೀಯ ಬೇಜವಾಬ್ದಾರಿತನಕ್ಕೆ ಉದಾಹರಣೆಯಾಗಿದೆ. ತಾವು ಆಯ್ಕೆಗೊಂಡ ಕ್ಷೇತ್ರಗಳನ್ನೂ ಭೇಟಿ ಮಾಡದಿರುವ ಅವರ ಹೊಣೆಗೇಡಿತನದಿಂದ ಜನರು ಬೇಸತ್ತಿದ್ದು, ಈಗ ರಾಜಕೀಯ ಕಾರಣಕ್ಕಾಗಿ ಅವರ ರಾಜ್ಯ ಪ್ರವಾಸದ ಚಿಂತನೆ ಮೊಸಳೆ ಕಣ್ಣೀರಿಟ್ಟಂತಾಗಿದೆ ಎಂದು ತಿಳಿಸಿದ್ದಾರೆ.

DK Shivakumar Congress Price Hike Petro Protest 7 medium

ಕೋವಿಡ್‍ಗೆ ಸಂಬಂಧಪಟ್ಟಂತೆ ಪ್ರತಿಯೊಂದು ಪ್ರಕರಣವೂ ಆಧಾರ್ ಸಂಖ್ಯೆಯೊಂದಿಗೆ ದಾಖಲಿಸಲ್ಪಟ್ಟಿದ್ದು, ಪ್ರತಿಯೊಂದು ಕೋವಿಡ್ ಸಾವು ಸರಕಾರಿ ಅಂಕಿ ಅಂಶಗಳಲ್ಲಿ ಲಭ್ಯವಿರುವ ಸಾಮಾನ್ಯ ಸಂಗತಿಯು ಕೂಡ ಕಾಂಗ್ರೆಸ್ ಮಹಾ ನಾಯಕರಿಗೆ ಅರ್ಥವಾಗದಿರುವುದು ದೊಡ್ಡ ದುರಂತ. ಆಧುನಿಕ ತಂತ್ರಜ್ಞಾನವನ್ನು ಬಳಸಿ ಕೋವಿಡ್ ಸಂತ್ರಸ್ತರ ಮತ್ತು ಕೋವಿಡ್‍ನಿಂದ ಮೃತಪಟ್ಟವರ ವಿವರಗಳನ್ನು ಅತ್ಯಂತ ವ್ಯವಸ್ಥಿತವಾಗಿ ಪತ್ತೆ ಹಚ್ಚಿ ದಾಖಲಿಸಲಾಗುತ್ತಿದ್ದು, ಈ ಎಲ್ಲಾ ಅಂಕಿಅಂಶಗಳು ಅಂತರ್ಜಾಲದಲ್ಲಿ ಲಭ್ಯವಿರುತ್ತವೆ ಎಂದರು. ಇದನ್ನೂ ಓದಿ: ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ – 2 ಸ್ಫೋಟ, ಇಬ್ಬರಿಗೆ ಗಾಯ

ಕೇಂದ್ರ ಸರ್ಕಾರ ಕೋವಿಡ್‍ನಿಂದ ನಿಂದ ಹೆತ್ತವರನ್ನು ಕಳೆದುಕೊಂಡ ಅನಾಥ ಮಕ್ಕಳಿಗಾಗಿ ನೀಡಿರುವ ವಿಶೇಷ ಯೋಜನೆ ಹಾಗೂ ಕರ್ನಾಟಕದಲ್ಲಿ ಕುಟುಂಬದ ಆಧಾರಸ್ತಂಭವಾಗಿದ್ದ ವ್ಯಕ್ತಿ ಕೋವಿಡ್‍ನಿಂದಾಗಿ ಮೃತಪಟ್ಟಲ್ಲಿ ಆ ಕುಟುಂಬದ ರಕ್ಷಣೆಗಾಗಿ ನೀಡಿರುವ ವಿಶೇಷ ಆರ್ಥಿಕ ಸಹಾಯದಿಂದ ವಿಚಲಿತರಾಗಿರುವ ಕಾಂಗ್ರೆಸ್ ಮುಖಂಡರು ಡೆತ್ ಆಡಿಟ್ ಎನ್ನುವ ಪ್ರಹಸನದೊಂದಿಗೆ ರಾಜ್ಯ ಪ್ರವಾಸ ಮಾಡಲು ಹೊರಟಿರುವುದು ಊರು ಸೂರೆಗೊಂಡ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಆಗಿದೆ ಎಂದು ವ್ಯಂಗ್ಯವಾಡಿದರು.

CONGRESS 1

ಕೋವಿಡ್ ಮಹಾಮಾರಿಯ ಎರಡನೇ ಅಲೆಯ ಪ್ರಾರಂಭದ ದಿನಗಳಲ್ಲಿ ಲಸಿಕೆ ಮತ್ತು ಲಸಿಕಾ ಅಭಿಯಾನದ ಬಗ್ಗೆ ಹಾಗೂ ಯುದ್ಧೋಪಾದಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೆಲಸ ಮಾಡಿವೆ. ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಜನಮಾನಸದಲ್ಲಿ ಸಂದೇಹ ಮೂಡಿಸಿ ಕೋವಿಡ್ ನಿಯಂತ್ರಣದ ಚಟುವಟಿಕೆಗಳಿಗೆ ತೊಂದರೆ ಉಂಟು ಮಾಡಿರುವ ಕಾಂಗ್ರೆಸ್ಸಿನ ಕ್ಷುಲ್ಲಕ ಪ್ರವೃತ್ತಿಯನ್ನು ನಾಡಿನ ಜನತೆ ಗಂಭೀರವಾಗಿ ಪರಿಗಣಿಸಿದ್ದು ಒಂದು ರಾಜಕೀಯ ಪಕ್ಷದ ಈ ರೀತಿಯ ಬೇಜವಾಬ್ದಾರಿ ವರ್ತನೆಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು.

Congress 1

 

ಸರಕಾರ ನೀಡುವ ಸಂಸದರ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು ಲಸಿಕಾ ಅಭಿಯಾನಕ್ಕೆ ನೀಡುವ ಕಾಂಗ್ರೆಸ್ಸಿನ ಪೊಳ್ಳು ಘೋಷಣೆ ಈಗಾಗಲೇ ಅವರ ಡೋಂಗಿತನವನ್ನು ಬಯಲುಗೊಳಿಸಿದೆ. ಇದಕ್ಕೆ ವಿರುದ್ಧವಾಗಿ ಭಾರತೀಯ ಜನತಾ ಪಾರ್ಟಿಯ ಲಕ್ಷಾಂತರ ಕಾರ್ಯಕರ್ತರ ಸೇವಾ ಹೀ ಸಂಘಟನ್‍ನ ಜನಪರ ಸೇವಾ ಕಾರ್ಯಕ್ರಮಗಳು ಜನಮಾನಸದಲ್ಲಿ ಸದಭಿಪ್ರಾಯವನ್ನು ಮೂಡಿಸಿದ್ದು ಕಷ್ಟಕಾಲದಲ್ಲಿ ರಕ್ಷಣೆಗೆ ಧಾವಿಸಿರುವ ಭಾಜಪವನ್ನು ನಾಡಿನ ಜನತೆ ಪುರಸ್ಕರಿಸುತ್ತಿರುವುದು ಕಾಂಗ್ರೆಸ್ಸಿನ ಮಹಾ ನಾಯಕರುಗಳ ನಿದ್ರೆಕೆಡಿಸಿದ್ದು ಈ ರೀತಿಯ ಬೂಟಾಟಿಕೆಯ ಹೇಳಿಕೆಗಳನ್ನು ನೀಡುವಂತೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಡೆತ್ ಆಡಿಟ್ ಸೋಗಲಾಡಿತನದ ನಾಟಕ. ಪ್ರಹಸನ ಒಂದು ಹಾಸ್ಯಾಸ್ಪದ ಘಟನೆಯಾಗಿದ್ದು ನಾಡಿನ ಜನತೆಯ ಗಮನವವನ್ನು ದಾರಿ ತಪ್ಪಿಸುವ ಒಂದು ವ್ಯರ್ಥ ಪ್ರಯತ್ನ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಟೀಕಿಸಿದ್ದಾರೆ.

TAGGED:congressCoronaCovid 19crocodileGanesh Karnikಕಾಂಗ್ರೆಸ್ಕೊರೊನಾಕೊರೊನಾ ವೈರಸ್ಕೋವಿಡ್ 19ಗಣೇಶ್ ಕಾರ್ನಿಕ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
8 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
20 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
33 minutes ago
LPG vs PNG 2
Bengaluru City

PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

Public TV
By Public TV
46 minutes ago
Annamalai
Latest

ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ

Public TV
By Public TV
52 minutes ago
Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?