Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಡೆಲ್ಟಾ ಪ್ಲಸ್ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ಡೆಲ್ಟಾ ಪ್ಲಸ್ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್: ಸುಧಾಕರ್

Bengaluru City

ಹೊಸ ಡೆಲ್ಟಾ ಪ್ಲಸ್ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್: ಸುಧಾಕರ್

Public TV
Last updated: June 27, 2021 7:20 pm
Public TV
Share
3 Min Read
sudhakar cm web
SHARE

– ಗಡಿ ಭಾಗಗಳಲ್ಲಿ ಸಾಧ್ಯವಾದಷ್ಟು ಪರೀಕ್ಷೆ

ಬೆಂಗಳೂರು/ಚಿಕ್ಕಬಳ್ಳಾಪುರ: ಕೋವಿಡ್ ಹೊಸ ಡೆಲ್ಟಾ ಪ್ಲಸ್ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ, ಈ ವರದಿ ಇಂದು ಬರಲಿದೆ. ಮಹಾರಾಷ್ಟ್ರ, ಮಧ್ಯಪ್ರದೇಶಗಳಲ್ಲಿರುವ ಕೊರೊನಾ ಆತಂಕ ನಮ್ಮಲ್ಲಿ ಇನ್ನೂ ಬಂದಿಲ್ಲ. ಆದರೆ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ರಾಜ್ಯಕ್ಕೆ ಪ್ರವೇಶಿಸುವವರಿಗೆ ರ್ಯಾಂಡಮ್ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದರು.

sudhakar cm 4 medium

ಬೇರೆ ರಾಜ್ಯಗಳಿಂದ ಬರುವವರನ್ನು ನೂರಕ್ಕೆ ನೂರು ವೈದ್ಯಕೀಯ ತಪಾಸಣೆ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಸಾಧ್ಯವಾದಷ್ಟು ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಕೇರಳ ಒಂದರಿಂದಲೇ ಕೆಲವು ಲಕ್ಷ ಜನರು ರಾಜ್ಯದೊಳಗೆ ಬರುತ್ತಿದ್ದಾರೆ. ಆದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಧ್ಯವಾದಷ್ಟು ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ. ಜನರು ಲಸಿಕೆ ಪಡೆಯಲೇಬೇಕು. ಪಡೆದ ನಂತರವೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಇದರಿಂದಲೇ ಕೋವಿಡ್ ನಿಂದ ದೂರವಿರಲು ಸಾಧ್ಯ ಎಂದರು.

ಬೆಂಗಳೂರಿನಲ್ಲಿ 50 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದ ಯಾವುದೇ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿಲ್ಲ. ಹೀಗಾಗಿ ಇದೊಂದು ದಾಖಲೆಯಾಗಿದೆ. ರಾಜ್ಯದಲ್ಲಿ ಮೊದಲನೇ ಡೋಸ್ ಪಡೆದವರ ಪ್ರಮಾಣ ಶೇ.40ರಷ್ಟಿದೆ(1.85 ಕೋಟಿ). 45 ಲಕ್ಷಕ್ಕೂ ಹೆಚ್ಚು ಜನರು ಎರಡೂ ಡೋಸ್ ಪಡೆದಿದ್ದಾರೆ. ಲಸಿಕೆ ನೀಡಲು ಆದ್ಯತೆಯಲ್ಲಿ ಕೆಲ ಗುಂಪುಗಳನ್ನು ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಯ ಕುಟುಂಬದವರು, ಪೊಲೀಸರ ಕುಟುಂಬದವರು, ಮಾಧ್ಯಮದವರು ಹೀಗೆ ಜನಸಂಪರ್ಕ ಹೆಚ್ಚು ಇರುವವರನ್ನು ರಕ್ಷಣೆ ಮಾಡಲು ಆದ್ಯತೆ ನೀಡಲಾಗಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಲಕರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.

sudhakar cm 1 medium

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಜಟಾಪಟಿ ಹೊಸದಲ್ಲ. ಅದು ಹುಟ್ಟಿದಾಗಿನಿಂದಲೂ ಇದೆ. ದಲಿತ ಸಿಎಂ ಬಗ್ಗೆ ಅವರು ಹೇಳುತ್ತಾರೆ ಹೊರತು, ಅವರು ಮಾಡುವುದಿಲ್ಲ. ಕಾಂಗ್ರೆಸ್ ನವರು ಪ್ರಧಾನಿ, ಮುಖ್ಯಮಂತ್ರಿ ಸ್ಥಾನಕ್ಕೆ ದಲಿತರನ್ನು ಆರಿಸುವುದಿಲ್ಲ. ಅಲ್ಪಸಂಖ್ಯಾತರ ಶೈಕ್ಷಣಿಕ ಆರ್ಥಿಕ, ಸಾಮಾಜಿಕ ಉದ್ಧಾರಕ್ಕೂ ಕಾಂಗ್ರೆಸ್ ನವರು ಏನೂ ಮಾಡಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಶಿಸ್ತುಬದ್ಧವಾಗಿ ಪ್ರತಿ ಸಮುದಾಯಕ್ಕೆ ಕಾರ್ಯಕ್ರಮ ನೀಡಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಮಕ್ಕಳ ದತ್ತು
ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಚಿಕ್ಕಬಳ್ಳಾಪುರ ಜಿಲ್ಲೆಯ 9 ಮಕ್ಕಳನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದತ್ತು ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಜಿಲ್ಲಾಡಳಿತಕ್ಕೆ ಈ ಕುರಿತು ಮಾಹಿತಿ ನೀಡಲಾಗಿದೆ. ಈ ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರತಿ ಮಕ್ಕಳಿಗೆ ತಲಾ 1 ಲಕ್ಷ ರೂ. ನೀಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಈ ರೀತಿ ದತ್ತು ಪಡೆಯುವ ಅಗತ್ಯವಿದೆ. ಮುಖ್ಯಮಂತ್ರಿಗಳು ಇದಕ್ಕಾಗಿ ಯೋಜನೆಯನ್ನು ಈಗಾಗಲೇ ಜಾರಿ ಮಾಡಿದ್ದಾರೆ ಎಂದರು.

corona virus 1 medium

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು. ಇದೇ ವೇಳೆ ಶ್ರೀ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ನಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು 47 ಲ್ಯಾಪ್ ಟಾಪ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಾಡಪ್ರಭು ಕೆಂಪೇಗೌಡರು ಜಾತಿ, ಸಮುದಾಯ ನೋಡದೆ ಲೋಕಕಲ್ಯಾಣಕ್ಕಾಗಿ ಕ್ರಮ ಕೈಗೊಂಡರು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಉದ್ದೇಶದ ಆಡಳಿತವನ್ನು ಕೆಂಪೇಗೌಡರು ಆರಂಭಿಸಿದರು. ವೈಜ್ಞಾನಿಕವಾಗಿ ಬೆಂಗಳೂರು ನಗರವನ್ನು ನಿರ್ಮಿಸಿ ಬೆಳೆಸಿದರು. ಒಂದೊಂದು ವರ್ಗಕ್ಕೂ ಒಂದೊಂದು ಪೇಟೆಗಳನ್ನು ಕಟ್ಟಿದರು. ಅವರ ಆಶಯಗಳಿಗೆ ತಕ್ಕಂತೆ ಜಾತ್ಯತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ckb sudhakar medium

ಬೆಂಗಳೂರಿಗೆ ಪರ್ಯಾಯವಾಗಿ ಚಿಕ್ಕಬಳ್ಳಾಪುರವನ್ನು ಬೆಳೆಸಬೇಕು. ಕೆಲ ಪ್ರಮುಖ ಕೈಗಾರಿಕೆಗಳನ್ನು ಇಲ್ಲಿಗೆ ತರಲಾಗುತ್ತಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸುತ್ತಿದ್ದು, ಮುಂದಿನ ವರ್ಷ ಉದ್ಘಾಟನೆಯಾಗಲಿದೆ. ಜಿಲ್ಲೆಯಲ್ಲಿ ಮೂರು ಕಡೆ 28 ಕೋಟಿ ರೂ. ಖರ್ಚು ಮಾಡಿ ಅಂತಾರಾಷ್ಟ್ರೀಯ ದರ್ಜೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

TAGGED:bengaluruCorona VirusMinister Dr K SudhakarPublic TVಕೊರೊನಾ ವೈರಸ್ಪಬ್ಲಿಕ್ ಟಿವಿಬೆಂಗಳೂರುಸಚಿವ ಡಾ.ಕೆ ಸುಧಾಕರ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
7 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
25 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
35 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
40 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
1 hour ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?