ಹುಲಿಗೆಮ್ಮ ದೇವಸ್ಥಾನದ ಸುತ್ತಲು 144 ಸೆಕ್ಷನ್ ಜಾರಿ

Public TV
2 Min Read
temple 1

ಕೊಪ್ಪಳ: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳವಾಗಿರುವ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿಯ ಸಾರ್ವಜನಿಕ ದರ್ಶನ ಈ ವಾರವು ಸ್ಥಗಿತಗೊಳಿಸಲಾಗಿದೆ. ಇಂದಿನಿಂದ ನಾಳೆ ಮಧ್ಯರಾತ್ರಿಯವರೆಗೂ ಹುಲಿಗೆಮ್ಮ ದೇವಸ್ಥಾನದ ಸುತ್ತಲು ಕಲಂ 144ರ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

temple 4 medium

ಈ ಮಧ್ಯೆ ಲಾಕ್ ಡೌನ್ ನಿಂದಾಗಿ ದೇವಸ್ಥಾನಕ್ಕೆ ಮೂರು ತಿಂಗಳಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಆದಾಯಕ್ಕೆ ಖೋತಾ ಬಿದ್ದಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಹಾಗೂ ತೆಲಂಗಾಣದ ಲಕ್ಷಾಂತರ ಭಕ್ತರನ್ನು ಹೊಂದಿರುವ ಕೊಪ್ಪಳ ಜಿಲ್ಲೆಯ ತುಂಗಭದ್ರಾ ತಟದಲ್ಲಿರುವ ಹುಲಿಗಿಯ ಹುಲಿಗೆಮ್ಮ ದೇವಸ್ಥಾನವು ಏಪ್ರಿಲ್ 24 ರಿಂದ ಭಕ್ತರಿಗೆ ದೇವಿ ದರ್ಶನ ಬಂದ್ ಮಾಡಲಾಗಿದೆ.

temple 2 medium

ಪ್ರತಿ ಹುಣ್ಣಿಮೆ ಹಾಗೂ ಮಂಗಳವಾರ, ಶುಕ್ರವಾರ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ರಾತ್ರಿ 12 ಗಂಟೆಯವರೆಗೂ ದೇವಸ್ಥಾನದಿಂದ 2 ಕಿ.ಮೀ ದೂರದವರೆಗೂ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಭಕ್ತರು ದೇವಿಯ ದರ್ಶನಕ್ಕೆ ಹುಲಿಗಿಗೆ ಬಾರದಂತೆ ಸೂಚನೆ ನೀಡಿ ಸಹಾಯಕ ಆಯುಕ್ತ ನಾರಾಯಣ ಕನಕರಡ್ಡಿ ಆದೇಶ ಹೊರಡಿಸಿದ್ದಾರೆ.

temple 3 medium

ಪ್ರತಿ ತಿಂಗಳ ಒಂದು ಕೋಟಿ ರೂಪಾಯಿಗೂ ಅಧಿಕ ಆದಾಯ ಹೊಂದಿರುವ ಹುಲಿಗೆಮ್ಮ ದೇವಸ್ಥಾನದಲ್ಲಿ ಈ ಮೂರು ತಿಂಗಳಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿಗೂ ಅಧಿಕ ಆದಾಯ ನಷ್ಟವಾಗಿದೆ. ಕಳೆದ ತಿಂಗಳು ಮೇ 1 ರಿಂದ ಮೂರು ದಿನಗಳ ಕಾಲ ದೇವಿಯ ಜಾತ್ರೆ ನಡೆಯಬೇಕಿತ್ತು, ಆದರೆ ಕೊರೊನಾ ಲಾಕ್ ಡೌನ್ ನಿಂದಾಗಿ ಜಾತ್ರೆಯನ್ನು ದೇವಸ್ಥಾನದ ಆವರಣದಲ್ಲಿ ಸಂಪ್ರಾದಾಯಕವಾಗಿ ಆಚರಿಸಲಾಯಿತು. ಜಾತ್ರೆಯ ಮೂರು ದಿನಗಳಲ್ಲಿಯೇ ಸರಿಸುಮಾರು ಒಂದು ಕೋಟಿ ಆದಾಯ ಬರುತ್ತಿತ್ತು, ಆದರೆ ಈ ಬಾರಿ ಜಾತ್ರೆ ಇಲ್ಲದೆ ಆದಾಯ ಬಂದಿಲ್ಲ, ಕಳೆದ ಬಾರಿಯೂ ಜಾತ್ರೆಯ ಸಂದರ್ಭದಲ್ಲಿ ಲಾಕ್ ಡೌನ್ ಆಗಿ ಆಗಲೂ ಆದಾಯಕ್ಕೆ ಖೋತಾ ಬಿದ್ದಿತ್ತು. ನವೆಂಬರ್ ತಿಂಗಳಿನಿಂದ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಿದ್ದರಿಂದ ಮೂರೂವರೆ ತಿಂಗಳಲ್ಲಿ 4 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕಾಧಿಕಾರಿ ಅರವಿಂದ ಸುತಗಟ್ಟಿ ತಿಳಿಸಿದ್ದಾರೆ.

money web

ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆದಾಯವಿರಲಿಲ್ಲಕ್ಕಿಲ್ಲ, ಆದರೆ ಜನರು ಆರೋಗ್ಯವಾಗಿರಬೇಕು, ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಿಕೊಳ್ಳಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನೆಟ್‍ವರ್ಕ್ ಸಮಸ್ಯೆ – ಆನ್‍ಲೈನ್ ಶಿಕ್ಷಣ ಪಡೆಯಲಾಗದೇ ವಿದ್ಯಾರ್ಥಿಗಳ ಪರದಾಟ

Share This Article
Leave a Comment

Leave a Reply

Your email address will not be published. Required fields are marked *