Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಹಣ ಮಾಡಲು BDA ಅಧ್ಯಕ್ಷರಿಂದ ಹೊಸ ಹೊಸ ಯೋಜನೆ: ಆಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ರಮ ಹಣ ಮಾಡಲು BDA ಅಧ್ಯಕ್ಷರಿಂದ ಹೊಸ ಹೊಸ ಯೋಜನೆ: ಆಪ್

Bengaluru City

ಅಕ್ರಮ ಹಣ ಮಾಡಲು BDA ಅಧ್ಯಕ್ಷರಿಂದ ಹೊಸ ಹೊಸ ಯೋಜನೆ: ಆಪ್

Public TV
Last updated: June 30, 2021 4:59 pm
Public TV
Share
2 Min Read
AAP 3
SHARE

– ಸಾವಿರಾರು ಕೋಟಿ ಮೌಲ್ಯದ ಮೌಲ್ಯದ ಭೂ ಕಬಳಿಕೆ ಆರೋಪ
– ಈ ಹಿಂದೆ ವಿರೋಧಿಸಿದ್ದ ಯೋಜನೆಗೆ ಬಿಜೆಪಿ ಮುಂದಾಗಿದ್ದೇಕೆ?

ಬೆಂಗಳೂರು: ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ರವರು ಅಕ್ರಮವಾಗಿ ಹಣ ಮಾಡಲು ಒಂದಿಲ್ಲೊಂದು ಯೋಜನೆ ರೂಪಿಸುತ್ತಲೇ ಇದ್ದಾರೆ. ಈಗ ಏಳು ಬಿಡಿಎ ಕಾಂಪ್ಲೆಕ್ಸ್ ಗಳ ಮರು ನಿರ್ಮಾಣ ಮಾಡುವ ಉದ್ದೇಶ ಕೂಡ ದೊಡ್ಡ ಪ್ರಮಾಣದಲ್ಲಿ ಲೂಟಿ ಮಾಡುವುದೇ ಆಗಿದೆ. ಇಂದಿರಾನಗರ, ಆಸ್ಟಿನ್ ಟೌನ್, ವಿಜಯನಗರ, ಸದಾಶಿವನಗರ ,ದೊಮ್ಮಲೂರು, ಎಚ್.ಎಸ್. ಆರ್ ಬಡಾವಣೆ ಸೇರಿದಂತೆ ಸೇರಿದಂತೆ ಯಾವುದೇ ಕಾರಣಕ್ಕೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಂಪ್ಲೆಕ್ಸ್ ಗಳನ್ನು ಒಡೆಯಲು ಹಾಗೂ ಅವು ಖಾಸಗಿಯವರ ಪಾಲಾಗಲು ಬಿಡುವುದಿಲ್ಲ ಎಂದು ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಹೇಳಿದರು.

sr vishwanath

ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರ ಕೂಡ ಇದೇ ಯೋಜನೆಗೆ ಕೈಹಾಕಿತ್ತು. ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಯನ್ನು ಜಾರಿಗೆ ತಂದಿರಲಿಲ್ಲ. ಆಗ ವಿರೋಧಿಸಿದ್ದ ಬಿಜೆಪಿಯವರೇ ಈಗ ಮರುನಿರ್ಮಾಣದ ಹೆಸರಿನಲ್ಲಿ ದುಡ್ಡು ಮಾಡಲು ಹೊರಟಿದ್ದಾರೆ. ವಿರೋಧ ಪಕ್ಷದಲ್ಲಿದ್ದಾಗ ಒಂದು ನಿಲುವು, ಅಧಿಕಾರದಲ್ಲಿದ್ದಾಗ ಮತ್ತೊಂದು ನಿಲುವು ತೆಗೆದುಕೊಳ್ಳುವ ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

S R Vishwanath

ಬಿಡಿಎ ಕಾಂಪ್ಲೆಕ್ಸ್‍ಗಳು ಅಮೂಲ್ಯ ಸರ್ಕಾರಿ ಸ್ವತ್ತುಗಳು. ಮರುನಿರ್ಮಾಣದ ಹೆಸರಿನಲ್ಲಿ ಬರೋಬ್ಬರಿ 5,000 ಕೋಟಿ ರೂಪಾಯಿ ಮೌಲ್ಯದ ಅವುಗಳನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಖಾಸಗಿಯವರಿಂದ ಬಿಡಿಎ ಅಧ್ಯಕ್ಷರಿಗೆ ಭಾರೀ ಪ್ರಮಾಣದ ಕಿಕ್‍ಬ್ಯಾಕ್ ಸಿಗಲಿದೆ. ಈಗ 30 ವರ್ಷಗಳ ಅವಧಿಗೆ ಖಾಸಗಿಯವರಿಗೆ ಬಿಟ್ಟುಕೊಟ್ಟು, ನಂತರ ಅದನ್ನು ಮತ್ತೆ 30 ವರ್ಷ ವಿಸ್ತರಿಸಲೂ ಅವಕಾಶ ನೀಡಲಾಗುತ್ತಿದೆ. ಆದರೆ 60 ವರ್ಷಗಳ ಬಳಿಕವೂ ಅವು ಸರ್ಕಾರದ ಸುಪರ್ದಿಗೆ ಮರಳುವುದಿಲ್ಲ. ದಿವ್ಯಶ್ರೀ ಚೇಂಬರ್ಸ್, ಚಿಕ್ಕಪೇಟೆಯಲ್ಲಿರುವ ಕೆಂಪೇಗೌಡ ಮಹಾರಾಜ ಕಾಂಪ್ಲೆಕ್ಸ್, ಗಾಂಧಿನಗರದಲ್ಲಿರುವ ಗುಪ್ತಾ ಮಾರುಕಟ್ಟೆಯು ಈಗಾಗಲೇ ಖಾಸಗಿಯವರ ಪಾಲಾಗಿದ್ದು, ಇವುಗಳನ್ನು ವಾಪಸ್ ಪಡೆಯಲು ಬಿಬಿಎಂಪಿಗೆ ಸಾಧ್ಯವಾಗುತ್ತಿಲ್ಲ ಎಂದು ಎಂದು ಮೋಹನ್ ದಾಸರಿ ಹೇಳಿದರು.

bda

ಯೋಜನೆಯ ಗುತ್ತಿಗೆ ಪಡೆದಿರುವ ಎಂಬೆಸ್ಸಿ, ಮೇವರಿಕ್ ಹಾಗೂ ಎಂ-ಫಾರ್ ಸಂಸ್ಥೆಗಳೊಂದಿಗೆ ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್‍ಗೆ ಲಿಂಕ್ ಇದೆ. ಕಾಂಗ್ರೆಸ್ ಪಕ್ಷದ ಮಾಜಿ ಮಂತ್ರಿ ಕೆ.ಜೆ.ಜಾರ್ಜ್ ಮಾಲೀಕತ್ವದ ಎಂಬೆಸ್ಸಿ ಕಂಪನಿಯು ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಉದಯ್ ಗರುಡಾಚಾರ್ ರವರ ಮೇವರಿಕ್ ಹಾಗೂ ಎಂ-ಫಾರ್ ಕಂಪನಿಗಳೊಂದಿಗೆ ಹಿಂದೆಯೂ ಅನೇಕ ಪ್ರಾಜೆಕ್ಟ್ ಗಳಲ್ಲಿ ಪಾಲುದಾರಿಕೆ ಹೊಂದಿತ್ತು. ಈಗಾಗಲೇ ಬಿಬಿಎಂಪಿ ಆಸ್ತಿಯಾಗಿದ್ದ ಎಂಜಿ ರಸ್ತೆಯ ಗರುಡಾಮಾಲ್ ಇವರುಗಳ ಪಾಲಾಗಿದೆ.

In name of PPP Model of development of BDA complexes in Namma Bengaluru, a big LOOT planned by @BJP4Karnataka lead by CM @BSYBJP. BJP & @INCKarnataka r same in selling properties 2 pvt builders wid throwaway price @tv9kannada @prajavani @TV5kannada @publictvnews @Vijaykarnataka pic.twitter.com/iYDSxdKi14

— ಮೋಹನ್ ದಾಸರಿ – Mohan Dasari (@MohanDasari_) June 30, 2021

ಪಿಪಿಪಿ ಮಾದರಿಯಲ್ಲಿ ಮರುನಿರ್ಮಾಣ ಎಂಬುದು ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಒಟ್ಟಾಗಿ ಮಾಡುತ್ತಿರುವ ಗೋಲ್‍ಮಾಲ್ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:ಗಾಜಿಪುರ ಗಡಿಯಲ್ಲಿ ಧರಣಿ ನಿರತ ರೈತರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ

ಮುಖ್ಯಮಂತ್ರಿ ಯಡಿಯೂರಪ್ಪನವರು ಕಾಂಗ್ರೆಸ್- ಬಿಜೆಪಿ ಪಕ್ಷಗಳ ಪ್ರಭಾವಿ ನಾಯಕರುಗಳ ಒಡೆತನದ ಬಿಲ್ಡರ್ ಕಂಪೆನಿಗಳಿಗೆ ಬೆಂಗಳೂರಿನ ಸಾವಿರಾರು ಕೋಟಿ ಬೆಲೆಬಾಳುವ ಆಸ್ತಿಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ಸಾರಾಸಗಟಾಗಿ ನುಂಗಲು ಹೊರಟಿರುವುದು ಬೆಂಗಳೂರಿಗರ ಪಾಲಿಗೆ ದುರ್ದೈವದ ಸಂಗತಿ.ಸಾರ್ವಜನಿಕರ ಆಸ್ತಿಯನ್ನು ಕೊಳ್ಳೆ ಹೊಡೆಯುವ ಈ ನಿರ್ಧಾರದಿಂದ ತಕ್ಷಣವೇ ಹಿಂದೆಸರಿಯದಿದ್ದರೆ ಆಮ್ ಆದ್ಮಿ ಪಾರ್ಟಿ ಭಾರೀ ಪ್ರತಿಭಟನೆ ಮಾಡಲಿದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ರಾಯಚೂರು ನಗರಸಭೆಯಲ್ಲಿ ತಿಂಗಳ ಮಾಮೂಲಿ ಜಗಳ-ಅಧ್ಯಕ್ಷನ ವಿರುದ್ಧ ಜೀವಬೆದರಿಕೆ ದೂರು

TAGGED:aapBDAMohan DasariPublic TVsr vishwanathಆಪ್ಎಸ್.ಆರ್ ವಿಶ್ವನಾಥ್ಪಬ್ಲಿಕ್ ಟಿವಿಬಿಡಿಎಬೆಂಗಳೂರುಮೋಹನ್ ದಾಸರಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
30 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
39 minutes ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
44 minutes ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?