Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೇಂದ್ರದ ವಿವಿಧ ಯೋಜನೆಗಳ ಅನುದಾನವನ್ನು ಅಧಿಕಾರಿಗಳು ಎಚ್ಚರಿಕೆಯಿಂದ ವಿನಿಯೋಗಿಸ್ಬೇಕು: ಅನಂತ್‍ಕುಮಾರ್ ಹೆಗ್ಡೆ

Public TV
Last updated: July 3, 2021 6:44 pm
Public TV
Share
3 Min Read
KWR
SHARE

ಕಾರವಾರ: ಜಲ ಜೀವನ ಮಿಷನ್, ನರೇಗಾ, ವಸತಿ, ಆರೋಗ್ಯ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ನೇರವಾಗಿ ನೀಡುತ್ತಿರುವ ವಿಶೇಷ ಅನುದಾನದ ಬಳಕೆ ಬಗ್ಗೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದರು.

ಜಿಲ್ಲಾ ಪಂಚಾಯತ್‍ನ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಂತಹ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕೋಟ್ಯಂತರ ರೂಪಾಯಿ ವಿಶೇಷ ಅನುದಾನ ನೀಡುತ್ತಿದೆ. ಆದರೆ ಜಲ ಜೀವನ ಮಿಷನ್‍ನಡಿ ಜಿಲ್ಲೆಯಾದ್ಯಂತ ಕೈಗೊಂಡಿರುವ ಕಾಮಗಾರಿಯ ಬಗ್ಗೆ ಶಾಸಕರು ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಗಳಿಗೂ ಮಾಹಿತಿಯೇ ಇಲ್ಲ. ಜನಪ್ರತಿನಿಧಿಗಳಿಗೆ ತಿಳಿಸದನೇ ಅಧಿಕಾರಿಗಳು ನೇರವಾಗಿ ತಮಗೆ ತಿಳಿದಂತೆ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದಿರಿ. ಅಧಿಕಾರಿಗಳ ಈ ನಡವಳಿಕೆಯಿಂದ ಮುಂಬರುವ ದಿನಗಳಲ್ಲಿ ಯೋಜನೆ ವಿಫಲವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪದ ಬಗ್ಗೆ ಶಾಸಕಿ ರೂಪಾಲಿ ನಾಯ್ಕ್ ಮಾತನಾಡಿದರು.

ananth kumar hegde

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಹೆಗ್ಡೆ, ಶಾಸಕರು ಹೆಳಿರುವುದು ಸತ್ಯವಾಗಿದೆ. ಮನೆ ಮನೆಗೆ ನೀರನ್ನು ಒದಗಿಸಬೇಕು. ಜನರ ದಾಹವನ್ನು ತಣಿಸಬೇಕು ಎಂಬು ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ ಮಿಷನ್ ಜಾರಿಗೆ ತಂದಿದೆ. ಇಂತಹ ಮಹತ್ವಾಕಾಂಕ್ಷೆ ಯೋಜನೆಯನ್ನು ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಅನುಷ್ಠಾನಕ್ಕೆ ತರಬೇಕು. ಆಗ ಯೋಜನೆಯ ಬಗ್ಗೆ ಜನರಿಗೆ ತಿಳಿಯುವುದರ ಜೊತೆಗೆ ಹೆಚ್ಚಿನ ಪ್ರಚಾರವೂ ಸಿಗುತ್ತದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿದ್ದು, ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಗಮನಕ್ಕೆ ತರದೇ ನೇರವಾಗಿ ಅಧಿಕಾರ ಚಲಾಯಿಸಲು ಯಾವುದೇ ಅವಕಾಶವಿಲ್ಲ. ಅಧಿಕಾರಿಗಳು ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು. ಇಂತಹ ಘಟನೆಗೆಳು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಪ್ರಳಯವಾದರೂ ಆ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದಿದ್ದು ನಿಜ: ಸಿದ್ದರಾಮಯ್ಯ

ಜನರ ಒಳಿತಿಗಾಗಿ ತಂದಿರುವ ಯೋಜನೆಯ ಬಗ್ಗೆ ಶಾಸಕರು ಸೇರಿದಂತೆ ಸಂಬಂಧಿಸಿದ ಎಲ್ಲ ಜನಪ್ರತಿನಿಧಿಗಳಿಗೆ ತಿಳಿಸಬೇಕು. ನಂತರ ಅವರ ಸಹಭಾಗಿತ್ವದಲ್ಲಿ ಕಾಮಗಾರಿ ಕೈಗೊಂಡು ಜನಪ್ರತಿನಿಧಿಗಳಿಂದ ಉದ್ಘಾಟನೆ ಮಾಡಿಸಬೇಕು. ಜನಪರ ಯೋಜನೆಗಳಿಗೆ ವಿಶೇಷ ಅನುದಾನ ನೀಡುತ್ತಿರುವ ಕೇಂದ್ರ ಸರ್ಕಾರ ಆ ಅನುದಾನದ ಬಳಕೆ ಹೇಗೆಲ್ಲ ಆಗುತ್ತಿದೆ ಎಂಬುವುದನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಇದು ಅಧಿಕಾರಿಗಳ ವರ್ಗದ ಗಮನಕ್ಕಿರಬೇಕು. ಒಂದುವೇಳೆ ಅನುದಾನ ಬಳಕೆಯಲ್ಲಿ ಅಕ್ರಮವೇನಾದರೂ ನಡೆದರೆ ಅದನ್ನು ಸೂಕ್ತ ರೀತಿಯಲ್ಲಿ ತನಿಖೆಗೆ ಒಳಪಡಿಸಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂದೆ ಅಂತವರಿಗೆ ನಿವೃತ್ತಿ ವೇತನವೂ ಸಿಗದಂತ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಅಧಿಕಾರಿ ವರ್ಗದವರು ತುಂಬಾ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು.

b432172a 92a6 4151 80a4 1a594e79ae8e medium

ಜಿಲ್ಲೆಯಲ್ಲಿ ಜೇನು ಕೃಷಿಗೆ ಉತ್ತಮ ಅವಕಾಶಗಳಿದ್ದು, ಜೇನು ಅತೀ ಹೆಚ್ಚು ಗೂಡು ಕಟ್ಟುವಂತ ಮರಗಳನ್ನು ಪಟ್ಟಿ ಮಾಡಿ ವರದಿ ನೀಡುವಂತೆ ತೋಟಗಾರಿಕೆ ಇಲಾಖೆಗೆ ಈ ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು. ಅದರಂತೆ ಇಲಾಖೆ ಅಧಿಕಾರಿಗಳು ಜೇನು ಕೃಷಿಗೆ ಪೂರಕವಾಗುವಂತ ಸುಮಾರು 10 ತಳಿಯ ಮರಗಳ ಪಟ್ಟಿಯನ್ನು ಮಾಡಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಮರಗಳ ಸಸಿಗಳನ್ನು ಬೆಳಸಿ ಅರಣ್ಯ ಪ್ರದೇಶದಲ್ಲಿ ಅವಗಳನ್ನು ನೆಡುವಂತ ಕಾರ್ಯವಾಗಬೇಕು. ಇದರಿಂದ ಪರಿಸರ ವೃದ್ಧಿ ಜೊತೆಗೆ ಜೇನು ಕೃಷಿಕರಿಗೆ ಸಹಕಾರಿಯಾಗಲಿದೆ ಎಂದರು.

ಮುಂಬರುವ 2023-24ರ ಸಮಯಕ್ಕೆ ಜಿಲ್ಲೆಯಲ್ಲಿ ವಿಮಾನ, ಹಡಗು ನಿಲ್ದಾಣ ಸೇರಿದಂತೆ ವಿವಿಧ ಕೈಗಾರಿಕಾ ಉದ್ಯಮಗಳು ಕಾಲಿಡಲಿವೆ. ಹೀಗಾಗಿ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಸ್ಥಳೀಯ ಪ್ರತಿಭೆಗಳಿಗೆ ಮುಂದುವರಿದ ತಂತ್ರಜ್ಞಾನಕ್ಕೆ ಪೂರಕವಾದ ವಿವಿಧ ಕೌಶಲ್ಯಗಳ ಕುರಿತು ತರಬೇತಿ ನೀಡಬೇಕಿದೆ. ಇದರಿಂದ ಜಿಲ್ಲೆಯಲ್ಲಿ ನಿರುದ್ಯೋಗದ ಸಮಸ್ಯೆ ನಿವಾರಣೆ ಸಾಧ್ಯವಿದೆ ಎಂದು ತಿಳಿಸಿದರು.

ananthkumar hegde 3

ಕೃಷಿ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸ್ವಚ್ಛ ಭಾರತ್ ಅಭಿಯಾನ್, ನರೇಗಾ, ಕುಡಿಯುವ ನೀರು, ಅಕ್ಷರದಾಸೋಹ ಸೇರಿದಂತೆ ವಿವಿಧ 21ಕ್ಕೂ ಅಧಿಕ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಸಂಸದರು ಈ ಸಂದರ್ಭದಲ್ಲಿ ನಡೆಸಿದರು.

ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ಬ್ಯಾಗ್ ಬಳಕೆ ನಿಷೇಧ ದಿನಾಚರಣೆ ನಿಮಿತ್ತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರತಂದ ಸ್ವಚ್ಛ ಸಂಕೀರ್ಣ ಕೈಪಿಡಿ, ಕರ್ನಾಟಕ ಗ್ರಾಮೀಣ ಘನ ಮತ್ತು ದ್ರವ ತ್ಯಾಜ್ಯ ಉಪ ವಿಧಿಯ ಪರಿಹಾರ ಹೆಲ್ಪ್‍ಲೈನ್ ನಂಬರ್, ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ‘ಜನಸಂಖ್ಯಾ ಸ್ಥಿರತೆ ನಿಮಿಂದ ಮಾತ್ರ ಸಾಧ್ಯ’ ಎಂಬ ಕರಪತ್ರವನ್ನು ಸಂಸದರು ಬಿಡುಗಡೆ ಮಾಡಿದರು.

ananth kumar hegde

ಸಭೆಯಲ್ಲಿ ಶಾಸಕರಾದ ದಿನಕರ್ ಶೆಟ್ಟಿ, ಸುನಿಲ್ ನಾಯ್ಕ್, ರೂಪಾಲಿ ನಾಯ್ಕ್, ವಿದಾನ ಪರಿಷತ್ ಸದಸ್ಯ ಶಾಂತರಾಮ ಸಿದ್ಧಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್‍ನ ಸಿಇಒ ಪ್ರಿಂಯಾಂಗಾ ಮುಂತಾದವರು ಉಪಸ್ಥಿತರಿದ್ದರು.

TAGGED:ananth kumar hegdeCentral govtkarwarPublic TVಅನಂತ್ ಕುಮಾರ್ ಹೆಗ್ಡೆಕಾರವಾರಕೇಂದ್ರ ಸರ್ಕಾರಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories
Actor Darshan
ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ – ಗುರುವಾರ ಜಾಮೀನು ಭವಿಷ್ಯ
Cinema Court Latest Main Post Sandalwood
darshan renukaswamy pavithra gowda
ಥಾಯ್ಲೆಂಡ್‌ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್‌ ಬೇಲ್‌ ಭವಿಷ್ಯ ಇಂದು?
Cinema Court Karnataka Latest Main Post
Prakash Raj Vijay Deverakonda
ಬೆಟ್ಟಿಂಗ್‌ ಆ್ಯಪ್‌ ಕೇಸ್‌; ನಟ ಪ್ರಕಾಶ್‌ ರಾಜ್‌ ಸೇರಿ ನಾಲ್ವರಿಗೆ ಇ.ಡಿ ಸಮನ್ಸ್‌
Cinema Latest South cinema Top Stories

You Might Also Like

supreme Court 1
Court

ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ – ಆದೇಶ ಎತ್ತಿ ಹಿಡಿದ ಸುಪ್ರೀಂ

Public TV
By Public TV
8 seconds ago
Uncle brutally kills child Hungund Bagalkote
Bagalkot

ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ

Public TV
By Public TV
15 seconds ago
Apache attack choppers
Latest

ಅಮೆರಿಕದಿಂದ ಮೂರು ಅಪಾಚೆ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಆಗಮನ

Public TV
By Public TV
13 minutes ago
daily horoscope dina bhavishya
Astrology

ದಿನಭವಿಷ್ಯ 21-07-2025

Public TV
By Public TV
37 minutes ago
G Parameshwar
Bengaluru City

ಶೀಘ್ರವೇ ಧರ್ಮಸ್ಥಳ ಪ್ರಕರಣಗಳ ತನಿಖೆ ಆರಂಭ; ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ: ಪರಮೇಶ್ವರ್

Public TV
By Public TV
39 minutes ago
ct ravi 3
Bengaluru City

GST ನೋಟಿಸ್‌ ಕೊಟ್ಟ ಕೋತಿ ಕೆಲಸ ರಾಜ್ಯ ಸರ್ಕಾರದ್ದು- ನೋಟಿಸ್ ವಾಪಸ್ ಪಡೆಯಬೇಕು: ಸಿ.ಟಿ.ರವಿ

Public TV
By Public TV
50 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?