ಯಾದಗಿರಿ: ದೋರನಹಳ್ಳಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಕಾರಣ ಅಂತ ಶಹಪುರ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಸಮಯದಲ್ಲಿ ಸರ್ಕಾರ ರೈತರಲ್ಲಿ ಮೂಡಿಸಿದ ದಂದ್ವ ನೀತಿ ಮತ್ತು ನಿರ್ಲಕ್ಷ್ಯ ರಾಜ್ಯದ ರೈತರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಲ್ಲಿ ದೋರನಹಳ್ಳಿಯ ರೈತರ ಕುಟುಂಬವೂ ಕೂಡ ಒಂದು. ಒಂದು ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದಾಗ ಮನುಷ್ಯ, ಆತ್ಮಹತ್ಯೆಯ ನಿರ್ಧಾರ ತೆಗೆದುಕೊಳ್ಳುತ್ತಾನೆ. ಇಂತಹ ಪರಿಸ್ಥಿತಿ ಆ ಕುಟುಂಬ ಎದುರಿಸಿದ ಪರಿಣಾಮ ಆತ್ಮಹತ್ಯೆಗೆ ಶರಣಾಗಿದೆ. ಇದಕ್ಕೆ ಸರ್ಕಾರದ ದಂದ್ವ ನೀತಿ ಕಾರಣ ಎಂದಿದ್ದಾರೆ. ಇದನ್ನೂ ಓದಿ: ಲಾಕ್ಡೌನ್ ಸಂಕಷ್ಟ – ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ
ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಗ್ರಾಮದ ರೈತ ಭೀಮರಾಯ ಶಿವಪ್ಪ ಸುರುಪುರ ದಂಪತಿ ನಾಲ್ಕು ಮಕ್ಕಳ ಸಮೇತವಾಗಿ ಜೂನ್ 28ರಂದು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.