ಬಳ್ಳಾರಿ: ನಗರದಲ್ಲಿ ಸಂಜೆ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂಜಾನೆಯಿಂದ ಚಿಟಿ ಚಿಟಿ ಮಳೆ ಸುರಿದರೆ, ಸಂಜೆ 5 ಗಂಟೆಯ ವೇಳೆಗೆ ಒಂದು ಗಂಟೆಗಳ ಕಾಲ ಜೋರಾಗಿ ಸುರಿದಿದೆ.
ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ನಗರದ ಕೈಲ್ ಬಾಜಾರಗೆ ಸಂಪರ್ಕ ಕಲ್ಪಿಸುವ ರಸ್ತೆಯ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ನಿಂತು ಸಂಪೂರ್ಣ ಜಲಾವೃತವಾಗಿತ್ತು. ಕೆಲ ಕಾಲ ವಾಹನ ಸಂಚಾರವನ್ನು ಸಹ ಬಂದ್ ಮಾಡಲಾಗಿತ್ತು. ನೀರಿನ ಪ್ರಮಾಣ ಕಡಿಮೆ ಆದ ಬಳಿಕ ವಾಹನ ಸಂಚಾರ ಮತ್ತೆ ಆರಂಭವಾಯಿತು.
ಜಿಲ್ಲೆಯ ಬಹುತೇಕ ತಾಲೂಕಿನಲ್ಲಿ ಮಳೆಯಾಗಿದ್ದು, ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ, ಎರಡು ದಿನದಿಂದ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.