ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ

Public TV
1 Min Read
agumbe 1

ಶಿವಮೊಗ್ಗ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

agumbe 20 medium

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಉಡುಪಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಆಗುಂಬೆ ಘಾಟಿಯ ರಸ್ತೆಯು ಕಿರಿದಾದ ಪರಿಣಾಮ ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿತ್ತು. ಭಾರೀ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆಯ ಬದಿಯ ಮಣ್ಣು ಕುಸಿತ ಉಂಟಾಗಿ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಸಾಕಷ್ಟು ಅಪಘಾತಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅಕ್ಟೋಬರ್ 15 ರವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.

agumbe 13 medium

ಇದೀಗ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಮಗ ಸಂಚಾರಕ್ಕಾಗಿ ಈಗ ಭಾರೀ ವಾಹನಗಳಿಗೆ ಅವಕಾಶ ನೀಡಲಾಗಿದೆ. ಈ ಮಾರ್ಗದಲ್ಲಿ ಅಧಿಕ ಮಳೆ ಪ್ರಮಾಣ ಇರುವ ದಿನಗಳಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು. ಮಳೆ ಕಡಿಮೆ ಇರುವ ದಿನಗಳಲ್ಲಿ ಎಲ್ಲ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

smg dc kb shivakumar

ಪರ್ಯಾಯ ಮಾರ್ಗಗಳು
* ಶಿವಮೊಗ್ಗ- ತೀರ್ಥಹಳ್ಳಿ- ಆಗುಂಬೆ – ಉಡುಪಿ.
* ಶಿವಮೊಗ್ಗ-ತೀರ್ಥಹಳ್ಳಿ-ಉಂಟೂರುಕಟ್ಟೆ ಕೈಮರ – ಮಾಸ್ತಿಕಟ್ಟೆ- ಹುಲಿಕಲ್ – ಕುಂದಾಪುರ
* ಶಿವಮೊಗ್ಗ – ತೀರ್ಥಹಳ್ಳಿ – ಕಮ್ಮರಡಿ – ಶೃಂಗೇರಿ- ಕೆರೆಕಟ್ಟೆ- ಕಾರ್ಕಳ

Share This Article
Leave a Comment

Leave a Reply

Your email address will not be published. Required fields are marked *