ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಸಮಸ್ಯೆಗಳು ಶೀಘ್ರ ಪರಿಹಾರ: ಆರ್. ಅಶೋಕ್

Public TV
1 Min Read
ashok 1

ಬೆಂಗಳೂರು: ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಶೀಘ್ರವಾಗಿ ಸರಿಪಡಿಸಬೇಕು, ಸರ್ವರ್ ಮತ್ತು ಒಟಿಪಿ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ashok 3 medium

ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯ ಸಮಯದಲ್ಲಿ ಸರ್ವರ್ ಮತ್ತು ಒಟಿಪಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿನ ಸಮಸ್ಯೆಗಳ ಬಗ್ಗೆ ವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ.

ashok 2 medium

ಶಿವರಾಮ್ ಕಾರಂತ್ ಬಡಾವಣೆಯಲ್ಲಿನ ಸರ್ಕಾರಿ ಜಮೀನನ್ನು ಬಿಡಿಎಗೆ ಹಸ್ತಾಂತರಿಸುವ ಕುರಿತಂತೆ ಚರ್ಚೆ:
ಶಿವರಾಮ್ ಕಾರಂತ್ ಬಡಾವಣೆಯ ಮಧ್ಯೆ ಇರುವ ಸುಮಾರು 400 ಎಕರೆಗೂ ಹೆಚ್ಚು ಸರ್ಕಾರಿ ಜಮೀನುಗಳನ್ನು ಬಿಡಿಎಗೆ ಹಸ್ತಾಂತರಿಸುವ ಕುರಿತಂತೆ ಚರ್ಚೆ ನಡೆಸಿ, ಅದಕ್ಕೆ ಸರಿಯಾದ ರಸ್ತೆ ಸಂಪರ್ಕ ಕಲ್ಪಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಆದೇಶ ನೀಡಿದರು. ಸರಿಯಾದ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಿದರೆ ಮಾತ್ರ ಬಡಾವಣೆಯ ಅಭಿವೃದ್ಧಿ ಸಾಧ್ಯ, ಆ ಕಾರಣಕ್ಕೆ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ashok 4 medium

ಈ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಬಿಡಿಎ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಮನ್ ಸೆನ್ಸ್ ಇಲ್ಲವಾ? – ಬೆಂಬಲಿಗನ ತಲೆಗೆ ಡಿಕೆಶಿ ಏಟು

Share This Article
Leave a Comment

Leave a Reply

Your email address will not be published. Required fields are marked *