Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ

Districts

ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ

Public TV
Last updated: July 12, 2021 6:10 pm
Public TV
Share
3 Min Read
NARAYANA GOWDA 4
SHARE

ಮಂಡ್ಯ: ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಇನ್ನೊಬ್ಬರ ಭಿಕ್ಷೆಯಲ್ಲಿ ಬದುಕಬೇಕಿಲ್ಲ: ಉಮಾಪತಿ

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಲು ಗಣಿಗಾರಿಕೆ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕೆಆರ್‍ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.

NARAYANA GOWDA 3

ಕನ್ನಂಬಾಡಿ ಅಣೆಕಟ್ಟಿನ ವಿಚಾರ ಸದ್ಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಣಿ ಪ್ರದೇಶದಲ್ಲಿ ಬ್ಲಾಸ್ಟ್ ಮಾಡುವುದರಿಂದ ಡ್ಯಾಂಗೆ ಡ್ಯಾಮೇಜ್ ಆಗತ್ತದೆ ಎಂಬ ಕೂಗು ಬಹಳದಿನಗಳಿಂದ ಇದೆ. ಹೀಗಾಗಿ ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನೇ ಸ್ಥಗಿತಮಾಡುವುದು ಉತ್ತಮ. ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳುವುದು ಉತ್ತಮ. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳೋಣ. ಅಲ್ಲದೆ ಬೇಬಿ ಬೆಟ್ಟದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಯೋಜನೆ ರೂಪಿಸಿ ಎಂದಿದ್ದಾರೆ. ಇದನ್ನೂ ಓದಿ: ಬಿಗ್ ಮನೆಯಿಂದ ಬರುತ್ತಿದ್ದಂತೆ ನಿಧಿ ಮನೆಗೆ ಹೊರಟ ರಘು

KRS 1 medium

ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವರು:
ಗಣಿಗಾರಿಕೆ ನಡೆಸುವ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ಕೊಡುವುದೇ ಇಲ್ಲ. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಕಲ್ಲು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿಯೆ ಇಲ್ಲ. ಕೆಲ ಅಧಿಕಾರಿಗಳ ಶಾಮೀಲಾತಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಕೆ.ಆರ್.ಎಸ್. ಡ್ಯಾಂ ಸುತ್ತ ಗಣಿಗಾರಿಕೆ ಇದೆ. ಅಲ್ಲಿ ಬ್ಲಾಸ್ಟ್ ಮಾಡಿದಾಗ ಸುತ್ತಲ ಪ್ರದೇಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೆ ಎದ್ದು ಹೊಲ ಮೇಯ್ದ ರೀತಿಯಂತಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇನ್ನುಮುಂದೆ ಕಡ್ಡಾಯವಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಬೇಕು. ಸರಿಯಾಗಿ ರಾಜಧನ ಸಂಗ್ರಹ ಮಾಡಬೇಕು ಎಂದು ಸೂಚಿಸಿದರು. ನಮ್ಮ ಜಿಲ್ಲೆಯಲ್ಲಿ 95 ಕ್ಕೂ ಹೆಚ್ಚು ಕಲ್ಲುಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಅಧಿಕಾರಿಗಳು ತಕ್ಷಣ ಎಲ್ಲ ಲೊಪ ದೋಷ ಸರಿಪಡಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

NARAYANA GOWDA

ಅಕ್ರಮ ತಡೆಗೆ ಸಹಾಯವಾಣಿ ಆರಂಭ:
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜೊತೆಗೆ ಜನಸಾಮಾನ್ಯರ ನೆರವನ್ನೂ ಪಡೆಯಬೇಕು. ಜಿಲ್ಲೆಯಲ್ಲಿ ಎಲ್ಲೇ ಅಕ್ರಮವಾಗಿ ಗಣಿಗಾರಿಕೆ ನಡೆದರೆ, ಬ್ಲಾಸ್ಟ್ ಮಾಡಿದರೆ ತಕ್ಷಣ ಆ ಪ್ರದೇಶದ ಜನಸಾಮಾನ್ಯರಿಗೆ ತಿಳಿಯುತ್ತದೆ. ಸಹಾಯವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಹಾಯವಾಣಿ ಕೇಂದ್ರ ತೆರೆದು ಜನಸಾಮಾನ್ಯರಿಗೆ ಆ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು.

krs dam 4

ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಆರ್ ಟಿ ಓ, ಕಂದಾಯ, ಪಂಚಾಯತರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ತಕ್ಷಣವೆ ಸರ್ವೆ ನಡೆಸಿ, ವರದಿ ನೀಡಬೇಕು. ಎಲ್ಲ ಕಡೆ ತಪಾಸಣಾ ಕೇಂದ್ರ ಮಾಡಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಪಟ್ಟಿಯನ್ನು ತಕ್ಷಣ ನೀಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಕೋಟಿ ಕೋಟಿ ರೂಪಾಯಿ ಆದಾಯ ನಷ್ಟವಾಗುತ್ತಿದೆ. ತಪಾಸಣಾ ಕೇಂದ್ರದಲ್ಲಿ ಸಿಸಿಕ್ಯಾಮೆರಾ ಅಳವಡಿಕೆ ಆಗಬೇಕು. ಕಲ್ಲು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾ ಇಡಬೇಕು ಎಂದು ಹೇಳಿದರು.

KRS

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್. ಅಶ್ವಥಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ, ಸಿಇಯೋ ದಿವ್ಯ ಪ್ರಭು, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿ ಪದ್ಮಜಾ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:bengalurukannambadi damMiningnarayana gowda
Share This Article
Facebook Whatsapp Whatsapp Telegram

Cinema news

Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories

You Might Also Like

Bombardier Learjet 45 Ajit Pawars Private Jet
Latest

ಮೂರು ವರ್ಷದ ಒಳಗಡೆ ಎರಡನೇ ಬಾರಿ ವಿಎಸ್‌ಆರ್‌ ಕಂಪನಿಯ ವಿಮಾನ ಪತನ

Public TV
By Public TV
11 minutes ago
delta beach boat accident disha death
Latest

ಉಡುಪಿಯ ಪ್ರವಾಸಿ ಬೋಟ್ ದುರಂತ ಕೇಸ್; ಯೂಟ್ಯೂಬರ್ ನಿಶಾ, ಮಧು ಗೌಡ ಸ್ನೇಹಿತೆ ಸಾವು

Public TV
By Public TV
36 minutes ago
ajit pawars plane crashes during second landing attempt
Latest

2ನೇ ಬಾರಿ ಲ್ಯಾಂಡಿಂಗ್‌ ಪ್ರಯತ್ನದಲ್ಲಿದ್ದಾಗ ಅಜಿತ್‌ ಪವಾರ್‌ ವಿಮಾನ ಪತನ

Public TV
By Public TV
50 minutes ago
sanjay gandhi ajit pawar vijay rupani
Latest

ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾದ ಪ್ರಮುಖ ರಾಜಕಾರಣಿಗಳು..!

Public TV
By Public TV
1 hour ago
Ajit Pawar Dies Plane plane was headed towards the runway but it fell down a 100 feet before it Eyewitness
Latest

Ajit Pawar Dies | ಲ್ಯಾಂಡ್‌ ಆಗಲು ಇನ್ನೇನು 100 ಅಡಿ ಬಾಕಿಯಿದ್ದಾಗ ಪತನಗೊಂಡು ಸ್ಫೋಟ: ಪ್ರತ್ಯಕ್ಷದರ್ಶಿ

Public TV
By Public TV
2 hours ago
Narendra Modi Ajit Pawar
Latest

ಅಜಿತ್ ಪವಾರ್ ಮಹಾರಾಷ್ಟ್ರದ ಜನರ ಸೇವೆಗೆ ಮುಂಚೂಣಿಯಲ್ಲಿದ್ದರು: ಮೋದಿ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?