ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್

Public TV
2 Min Read
Sadananda Gowda GOPALAIAH e1626617864557

ಬೆಂಗಳೂರು: ಸರ್ಕಾರ ನಿಯಮಗಳನ್ನು ಜಾರಿ ಮಾಡಿದ ತಕ್ಷಣ ಸೋಂಕು ನಿಯಂತ್ರಣಕ್ಕೆ ಬಂದುಬಿಡುತ್ತದೆ ಎಂದುಕೊಳ್ಳಬೇಡಿ. ಪ್ರತಿಯೊಬ್ಬರು ಎಚ್ಚೆತ್ತುಕೊಂಡು ನಿಮ್ಮ ನಿಮ್ಮ ಮನೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಅನಗತ್ಯವಾಗಿ ಹೊರಗೆ ಹೋಗದಿರುವುದು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ತಡೆಗಟ್ಟುವುದಾದರೆ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.

corona 1 medium

ದೇಶದಲ್ಲಿ ಪ್ರಧಾನಿ ನರೇಂದ್ರಮೋದಿ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ನಿಯಂತ್ರಣವನ್ನು ಅತ್ಯಂತ ಸಮರ್ಪಕವಾಗಿ ನಿಯಂತ್ರಿಸಿದ್ದಾರೆ. ಅತ್ಯಂತ ಸೋಂಕು ಹೊಂದಿರುವ ಅಪಖ್ಯಾತಿಗೆ ಗುರಿಯಾಗಿದ್ದ ಭಾರತ ಇಂದು ವಿಶ್ವವೇ ನಿಬ್ಬೆರಗಾಗುವಂತೆ ಕೊರೊನಾ ನಿಯಂತ್ರಣ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆ ಸಚಿವ ಗೋಪಾಲಯ್ಯನವರು ಹಾಸನ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಆಹಾರದ ಕಿಟ್ ವಿತರಣೆ, ಸಾರ್ವಜನಿಕರಿಗೆ ಉಚಿತವಾಗಿ ಆಹಾರಧಾನ್ಯಗಳ ವಿತರಣೆ, ಮಾಸ್ಕ್ ಸ್ಯಾನಿಟೈಸರ್, ಲಸಿಕೆ, ಔಷಧಿಗಳನ್ನು ಕೊಡುವ ಮೂಲಕ ನೊಂದವರ ಕಣ್ಣೀರನ್ನು ಒರೆಸಿದ್ದಾರೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.1.09ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,708 ಕೊರೊನಾ ಕೇಸ್

BSY MODI MEETING

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ದೇಗುಲವಿದ್ದಂತೆ. ಇದು ನೊಂದವರ ಪಾಲಿಗೆ ಕಣ್ಣೀರು ಒರೆಸುವ ಆಲಯ. ಹಸಿದವರ ಪಾಲಿಗೆ ದೇಗುಲವಿದ್ದಂತೆ. ಇದನ್ನು ಮಾಡಿ ತೋರಿಸಿದ್ದು ಗೋಪಾಲಯ್ಯನವರ ಹೆಗ್ಗಳಿಕೆ ಎಂದು ಪ್ರಶಂಸಿದರು.

ಲಾಕ್ ಡೌನ್ ಸಂದರ್ಭದಲ್ಲೂ ನಂಬಿದವರನ್ನು ಕೈಬಿಡದೆ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದಷ್ಟು ಶೀಘ್ರ ಎಲ್ಲರೂ ಕೊರೊನಾ ಮುಕ್ತರಾಗಿ ಎಲ್ಲರಿಗೂ ಉದ್ಯೋಗ ಸಿಗುವಂತಾಗಲಿ ಎಂದು ಸದಾನಂದಗೌಡ ಆಶಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ರೈತ ನಾಯಕ ಜಿ.ಮಾದೇಗೌಡ ಅವರು ಕಾವೇರಿ ನದಿನೀರಿಗಾಗಿ ನಡೆಸಿದ ಹೋರಾಟವನ್ನು ಅವರು ಸ್ಮರಿಸಿದರು.

ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡಿ, ಕೊರೊನಾದಂತಹ ಕಷ್ಟದ ಸಂದರ್ಭದಲ್ಲೂ ನನ್ನ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ ಇಂದು ನಾನು ಈ ಮಟ್ಟಕ್ಕೆ ಬೆಳೆಯಬೇಕಾದರೆ ನಿಮ್ಮ ಆಶೀರ್ವಾದವೇ ಕಾರಣ. ನನಗೆ ಎಷ್ಟೇ, ಕಷ್ಟ ನೋವುಗಳಿದ್ದರೂ ಇಂತಹ ಸಂದರ್ಭದಲ್ಲಿ ನಿಮ್ಮನ್ನು ಕೈಬಿಡುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕರು ಕೊರೊನಾ ನಮ್ಮನ್ನು ಬಿಟ್ಟು ಹೋಗಿದೆ ಎಂದು ಭಾವಿಸಿಕೊಳ್ಳಬೇಡಿ. ಅದು ಈಗಲೂ ಇದೆ. ಮೂರನೇ ಅಲೆ ಬರಬಹುದೆಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಎಚ್ಚೆತ್ತುಕೊಂಡು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕ್ಷೇತ್ರದ ಜನರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ .ಮಾಜಿ ಉಪ ಮೇಯರ್ ಹರೀಶ್. ಮುಖಂಡರುಗಳಾದ ಜಯರಾಮಯ್ಯ ವೆಂಕಟೇಶ ಮೂರ್ತಿ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *