Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

Public TV
Last updated: July 28, 2021 12:56 pm
Public TV
Share
3 Min Read
Basavaraj Bommai thawar chand gehlot 3 e1627456447360
SHARE

ಬೆಂಗಳೂರು:  ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬಸವರಾಜ ಸೋಮಪ್ಪ ಬೊಮ್ಮಾಯಿ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಬುಧವಾರ ಬೆಳಿಗ್ಗೆ ನಿಗದಿತ ಸಮಯಕ್ಕಿಂತಲೂ ಮೂರು ನಿಮಿಷಗಳ ಮುನ್ನವೇ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್  ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸಚರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.

Basavaraj Bommai 3 1

ಗಣ್ಯಾತಿಗಣ್ಯರು, ಉನ್ನತ ಅಧಿಕಾರಿಗಳು, ಕುಟುಂಬದ ಸದಸ್ಯರು, ಪಕ್ಷದ ಕಾರ್ಯಕಕತು ಹಾಗೂ ಅಭಿಮಾನಿಗಳಿಂದ ಕಿಕ್ಕಿರಿದಿದ್ದ ಸಭಾಂಗಣದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಕನ್ನಡ ಭಾಷೆಯಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಅವರು ರಾಜ್ಯಪಾಲರ ಅನುಮತಿ ಕೋರಿ ಪ್ರಮಾಣ ವಚನ ಸಮಾರಂಭವನ್ನು ನಿರೂಪಿಸಿದರು.

Basavaraj Bommai 1 1

ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದೊಡನೆಯೇ ಒಂದೆಡೆ ಅಭಿಮಾನಿಗಳಿಂದ ಹರ್ಷೋದ್ಗಾರ ಮುಗಿಲು ಮುಟ್ಟಿತಲ್ಲದೆ, ಮತ್ತೊಂದೆಡೆ ವೇದಿಕೆಯ ಮೇಲೆ ರಾಜ್ಯಪಾಲ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಹೂಗುಚ್ಛ ನೀಡಿ ಶುಭ ಕೋರಿದರು.

ನಂತರ, ವೇದಿಕೆಯ ಮುಂಭಾಗದಲ್ಲಿ ಆಸೀನರಾಗಿದ್ದ ಗಣ್ಯಾತಿಗಣ್ಯರ ಬಳಿ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಪ್ತಗೊಡನೆ ಶುಭಾಶಯ ವಿನಿಮಯ ಮಾಡಿಕೊಂಡರು.

Basavaraj Bommai 2 2

ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವ ಧಮೇಂದ್ರ ಪ್ರಧಾನ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ವ್ಯವಹಾರಗಳ ಉಸ್ತುವಾರಿ ಅರುಣ್‍ಸಿಂಗ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ನಿರ್ಗಮಿತ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದ ಗೋವಿಂದ ಎಂ ಕಾರಜೋಳ, ಡಾ ಸಿ. ಎನ್. ಅಶ್ವಥನಾರಾಯಣ ಮತ್ತು ಲಕ್ಷ್ಮಣ ಸಂಗಪ್ಪ ಸವದಿ, ಯಡಿಯೂರಪ್ಪ ನಿರ್ಗಮಿತ ಸಚಿವ ಸಂಪುಟದಲ್ಲಿ ಸಹೋದ್ಯೋಗಿಗಳಾಗಿದ್ದ ಕೆ. ಎಸ್. ಈಶ್ವರಪ್ಪ, ಎಸ್. ಸುರೇಶ್ ಕುಮಾರ್, ಉಮೇಶ್ ವಿಶ್ವನಾಥ್, ಮುರುಗೇಶ್ ಆರ್ ನಿರಾಣಿ, ಸಿ. ಸಿ. ಪಾಟೀಲ್, ಜೆ. ಸಿ. ಮಾಧುಸ್ವಾಮಿ, ವಿ. ಸೋಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಪ್ರಭು ಚೌಹಾಣ್, ಅರಬೇಲ್ ಶಿವರಾಮ್ ಹೆಬ್ಬಾರ್, ಬಿ. ಸಿ. ಪಾಟೀಲ್, ಬೈರತಿ ಬಸವರಾಜು, ಎಸ್. ಟಿ. ಸೋಮಶೇಖರ್, ಎಂ. ಸಿ. ನಾರಾಯಣಗೌಡ, ಎನ್. ನಾಗರಾಜು (ಎಂ. ಟಿ. ಬಿ ನಾಗರಾಜ್ ), ಕೆ. ಗೋಪಾಲಯ್ಯ ಮತ್ತು ಸಿ. ಪಿ. ಯೋಗೇಶ್ವರ್, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪಕ್ಷದ ರಾಜ್ಯದಲ್ಲಿನ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಪಕ್ಷದ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ ಆರ್. ವಿ. ದೇಶಪಾಂಡೆ, ಜಾತ್ಯಾತೀತ ಜನತಾ ದಳದ ಮುಖಂಡ ಎ. ಟಿ. ರಾಮಸ್ವಾಮಿ, ರಾಜ್ಯ ವಿಧಾನ ಸಭೆಯ ಸದಸ್ಯರಾದ ಎಲ್. ರವಿಸುಬ್ರಮಣ್ಯ , ಅರವಿಂದ ಬೆಲ್ಲದ್ ಹಾಗೂ ಹಲವು ಗಣ್ಯರು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

ರಾಜ್ಯದ 11 ನೇ ಮುಖ್ಯಮಂತ್ರಿಯಾಗಿದ್ದ ಸೋಮಪ್ಪ ರಾಯಪ್ಪ ಬೊಮ್ಮಾಯಿ ಅವರ ಸುಪುತ್ರರಾದ ಬಸವರಾಜ ಬೊಮ್ಮಾಯಿ ಅವರು ಪ್ರಸ್ತುತ ರಾಜ್ಯ ವಿಧಾನ ಸಭೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದವನಹಳ್ಳಿ ನಿಜಲಿಂಗಪ್ಪ ಅವರೂ ಮುಖ್ಯಮಂತ್ರಿಯಾಗಿದ್ದರು ಎಂಬುದು ವಿಶೇಷ.

ಹೆಚ್. ಡಿ. ದೇವೇಗೌಡ ಮತ್ತು ಹೆಚ್. ಡಿ. ಕುಮಾರಸ್ವಾಮಿ ಅವರ ನಂತರ ಕರ್ನಾಟಕದಲ್ಲಿ ಎರಡನೇ ಬಾರಿಗೆ ಎಸ್. ಆರ್. ಬೊಮ್ಮಾಯಿ ಮತ್ತು ಬಸವರಾಜ ಬೊಮ್ಮಾಯಿ ಅವರಿಗೆ ತಂದೆ ಮತ್ತು ಮಗ ಜೋಡಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ ಎಂಬುದು ಗಮನಾರ್ಹ.

TAGGED:ಕರ್ನಾಟಕಥಾವರ್ ಚಂದ್ ಗೆಹ್ಲೋಟ್ಬಸವರಾಜ ಬೊಮ್ಮಾಯಿಯಡಿಯೂರಪ್ಪರಾಜಭವನ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 hour ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
18 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
23 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

Madhavi Latha Chenab Railway Bridge Project
Latest

ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

Public TV
By Public TV
42 minutes ago
HD Kumaraswamy
Districts

ಪಹಲ್ಗಾಮ್‌ ದಾಳಿಗೂ ಕಾಲ್ತುಳಿತಕ್ಕೂ ಏನ್‌ ಸಂಬಂಧ? ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿದ್ವು – ಹೆಚ್‌ಡಿಕೆ ಪ್ರಶ್ನೆ

Public TV
By Public TV
59 minutes ago
BJP MP Govind Karjol slams Waqf Board for claiming rights over 15000 acres of ancestral land of farmers
Bengaluru City

Stampede Case | ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ

Public TV
By Public TV
2 hours ago
Arvind Bellad
Bengaluru City

ಚಿನ್ನಸ್ವಾಮಿ ಘಟನೆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮಾತಾಡಲಿ: ಅರವಿಂದ್ ಬೆಲ್ಲದ್

Public TV
By Public TV
2 hours ago
ICU
Crime

ರಾಜಸ್ಥಾನದ ಆಸ್ಪತ್ರೆ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ರೇಪ್ – ಮತ್ತು ಬರುವ ಇಂಜೆಕ್ಷನ್ ಕೊಟ್ಟು ಅತ್ಯಾಚಾರ

Public TV
By Public TV
2 hours ago
bhaskar rao
Latest

ದಯಾನಂದ್ ಮೇಲೆ ಕೋಪ ಬಂದಿದ್ದರೆ ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು: ಭಾಸ್ಕರ್ ರಾವ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?