Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಲ್ಲಾಪುರ, ಅಂಕೋಲಾದಲ್ಲಿ ಸಿಎಂ ಪ್ರವಾಹ ವೀಕ್ಷಣೆ – ಚಿಕ್ಕೋಡಿ, ಯಾದಗಿರಿ, ರಾಯಚೂರಲ್ಲಿ ಅವಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಲ್ಲಾಪುರ, ಅಂಕೋಲಾದಲ್ಲಿ ಸಿಎಂ ಪ್ರವಾಹ ವೀಕ್ಷಣೆ – ಚಿಕ್ಕೋಡಿ, ಯಾದಗಿರಿ, ರಾಯಚೂರಲ್ಲಿ ಅವಾಂತರ

Districts

ಯಲ್ಲಾಪುರ, ಅಂಕೋಲಾದಲ್ಲಿ ಸಿಎಂ ಪ್ರವಾಹ ವೀಕ್ಷಣೆ – ಚಿಕ್ಕೋಡಿ, ಯಾದಗಿರಿ, ರಾಯಚೂರಲ್ಲಿ ಅವಾಂತರ

Public TV
Last updated: July 29, 2021 7:57 pm
Public TV
Share
3 Min Read
Bommai Flood 1
SHARE

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಾರನೇ ದಿನವೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ತೆರಳಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಉತ್ತರ ಕನ್ನಡ ತಲುಪಿದರು. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಸ್ ಕೇಂದ್ರ, ಆಂಬ್ಯೂಲೆನ್ಸ್ ಸೇವೆ ಉದ್ಘಾಟಿಸಿದರು. ಬಳಿಕ ಮಳೆಯಿಂದ ಗುಡ್ಡ ಕುಸಿತವಾಗಿದ್ದ ಕಳಚೆ ಗ್ರಾಮವನ್ನು ಮಳೆಯಲ್ಲೇ ಪರಿಶೀಲಿಸಿದರು. ಬಳಿಕ ಅರೆಬೈಲ್, ಗುಳ್ಳಾಪುರದ ಕುಸಿದ ಬ್ರಿಡ್ಜ್, ಮನೆ ಹಾನಿ ವೀಕ್ಷಿಸಿದರು.

Bommai Flood 2

ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಅಂಕೋಲದಲ್ಲೂ ಪ್ರವಾಹ ತಂದ ಅವಾಂತರ ವೀಕ್ಷಿಸಿದ್ರು. ಈ ವೇಳೆ ಶಾಲೆಗೆ ಹೋಗಲು ಆಗ್ತಿಲ್ಲ ಅಂತ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ರು. ಶಿರೂರು ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಸ್ವೀಕರಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ತೇವೆ. ಎನ್‍ಡಿಆರ್ ಎಫ್‍ನಿಂದ ಪರಿಹಾರ ಬಂದಿದೆ ಅಂತ ಹೇಳಿದರು.

Bommai Father Mother Statue 2

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದರು. ಹುಬ್ಬಳ್ಳಿಯಲ್ಲಿ ಆರ್‍ಎಸ್‍ಎಸ್ ನಾಯಕರನ್ನು ಹಾಗೂ ರಂಭಾಪುರ ವೀರ ಸಿಂಹಾಸನಾಧೀಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಧಾರವಾಡ ಹೊರವಲಯದ ರಾಯಪುರದಲ್ಲಿರೋ ತಂದೆ-ತಾಯಿ ಸಮಾಧಿಗೆ ನಮಿಸಿ ನಾಡಿನ ಸೇವೆಗೆ ಶಕ್ತಿ ಕೊಡಿ ಅಂತ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

Bommai Father Mother Statue 1

ಉತ್ತರ ಕರ್ನಾಟಕದಲ್ಲಿ ಮಳೆ ನಿಂತಿದ್ದರೂ ಪ್ರವಾಹ ತಂದ ಅವಾಂತರ ಒಂದೊಂದಾಗಿ ಬೆಳಕಿಗೆ ಬರ್ತಿದೆ. ಮಹಾರಾಷ್ಟ್ರದ ಜಲಾಶಯಗಳ ನೀರು ಭಾರೀ ಸಮಸ್ಯೆ ತಂದೊಡ್ಡಿದೆ. ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ ತಾಲೂಕುಗಳ ಕೃಷ್ಣಾ ನದಿ ತೀರ ಅಕ್ಷರಶಃ ನಲುಗಿ ಹೋಗಿದೆ. ಚಿಕ್ಕೋಡಿ ತಾಲೂಕಿನ 11 ಗ್ರಾಮಗಳು, ರಾಯಬಾಗ ತಾಲೂಕಿನ 18 ಗ್ರಾಮಗಳು, ಅಥಣಿ ತಾಲೂಕಿನ 22 ಗ್ರಾಮಗಳು ಹಾಗೂ ಕಾಗವಾಡ ತಾಲೂಕಿನ 7 ಗ್ರಾಮಗಳು ಜಲಾವೃತಗೊಂಡಿದ್ದು ಒಟ್ಟು 45 ಸಾವಿರಕ್ಕೂ ಹೆಚ್ಚಿನ ಜನರನ್ನ ಸ್ಥಳಾಂತರ ಮಾಡಲಾಗಿದೆ. ರಾಯಬಾಗ ತಾಲೂಕಿನ ಭಿರಡಿ ಗ್ರಾಮದಲ್ಲಿ ಶಾಸಕ ದುರ್ಯೋಧನ ಐಹೊಳೆಗೆ ಸಂತ್ರಸ್ತರು ತರಾಟೆ ತೆಗೆದುಕೊಂಡಿದ್ದಾರೆ.

ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಗಳನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳಲಾಯಿತು. pic.twitter.com/dXLZh0gsKm

— Basavaraj S Bommai (@BSBommai) July 29, 2021

ಯಾದಗಿರಿಯ ಬಸವಸಾಗರ ಜಲಾಶಯದಿಂದ 4 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ತಿಂಥಣಿ ಗ್ರಾಮದ ಜಲಾವೃತ ಭೀತಿಯಿಂದ ಗ್ರಾಮಸ್ಥರು ಮನೆ ಖಾಲಿ ಮಾಡಿದ್ದಾರೆ. ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದ ಸಂಪರ್ಕ ಸೇತುವೆ ಕೃಷ್ಣಾ ನದಿಯ ಪ್ರವಾಹಕ್ಕೆ ಸಂಪರ್ಕ ಕಳೆದುಕೊಂಡಿದೆ. ರಾಯಚೂರಿನ ದೇವದುರ್ಗದ ಕೊಪ್ಪರ ಗ್ರಾಮಕ್ಕೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಲಕ್ಷ್ಮೀ ನರಸಿಂಹಸ್ವಾಮಿ ಹಾಗೂ ಬಸವಣ್ಣ ದೇವಾಲಯಗಳು ಮುಳುಗಿವೆ. ಪಂಪ್ ಸೆಟ್‍ಗಳು ಕೊಚ್ಚಿಹೋಗಿವೆ. ಆದರೂ, ಸೇತುವೆ ಮೇಲೆ ಕಾರು ಚಾಲಕ ದುಸ್ಸಾಹಸ ಮಾಡಿದ್ದಾನೆ. ಇತ್ತ, ಕೊಡಗಿನ ವಿರಾಜಪೇಟೆ ಪಟ್ಟಣದ ನೆಹರು ನಗರ, ಮಲೆತಿರಿಕೆ ಬೆಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಬಿರುಕು ಬಿಟ್ಟಿದೆ. ಇದನ್ನೂ ಓದಿ: ಮತ್ತೆ ಏರಿಕೆಯತ್ತ ಕೊರೊನಾ- ಬಹುದಿನಗಳ ಬಳಿಕ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಕೇಸ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಹಾಗೂ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲನೆ ಮಾಡಲಾಯಿತು. pic.twitter.com/5wcYWZJYFU

— Basavaraj S Bommai (@BSBommai) July 29, 2021

ಇತ್ತ, ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಾಡಿ, ಪ್ರವಾಹ ಪೀಡಿದ ಜನರಿಗೆ ಇವರಿಂದ ಸಹಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಕಳೆದ ವರ್ಷದ್ದೇ ಪರಿಹಾರ ಕೊಟ್ಟಿಲ್ಲ. ಆಗಸ್ಟ್ 1 ರಂದು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡೋದಾಗಿ ಹೇಳಿದ್ರು. ಈ ಮಧ್ಯೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು ನೀರಾವರಿ ಯೋಜನೆ ಸಂಬಂಧ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ದೂರು ನೀಡಿದ್ದಾರೆ. ಮಹದಾಯಿ, ಮೇಕೆದಾಟು ಮತ್ತು ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಕೇಂದ್ರ ಅನ್ಯಾಯ ಮಾಡಿದೆ ಅಂತ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು. ಇದನ್ನೂ ಓದಿ: ನಾನು ಬಿಜೆಪಿ ಶಿಸ್ತಿನ ಸಿಪಾಯಿ, ಡಿಸಿಎಂ ಸ್ಥಾನಕ್ಕೆ ಲಾಬಿ ಮಾಡಲ್ಲ: ರಾಮುಲು

TAGGED:CM Basavaraj BommaiFlood SurveyPublic TVraichurUttara Kannadayadagiriಉತ್ತರ ಕನ್ನಡಪಬ್ಲಿಕ್ ಟಿವಿಪ್ರವಾಹ ಸಮೀಕ್ಷೆಯಾದಗಿರಿರಾಯಚೂರುಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
29 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
56 minutes ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
1 hour ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?