Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗರದಲ್ಲಿ ಕೋವಿಡ್ ಮೂರನೇ ಅಲೆ ಆರಂಭದ ಆತಂಕ- ಸೋಂಕಿತರ ಸಂಪರ್ಕಿತರಲ್ಲೂ ಹೆಚ್ಚಿದ ಪಾಸಿಟಿವ್ ಪ್ರಕರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಗರದಲ್ಲಿ ಕೋವಿಡ್ ಮೂರನೇ ಅಲೆ ಆರಂಭದ ಆತಂಕ- ಸೋಂಕಿತರ ಸಂಪರ್ಕಿತರಲ್ಲೂ ಹೆಚ್ಚಿದ ಪಾಸಿಟಿವ್ ಪ್ರಕರಣ

Bengaluru City

ನಗರದಲ್ಲಿ ಕೋವಿಡ್ ಮೂರನೇ ಅಲೆ ಆರಂಭದ ಆತಂಕ- ಸೋಂಕಿತರ ಸಂಪರ್ಕಿತರಲ್ಲೂ ಹೆಚ್ಚಿದ ಪಾಸಿಟಿವ್ ಪ್ರಕರಣ

Public TV
Last updated: July 31, 2021 10:58 am
Public TV
Share
3 Min Read
crowd 2
SHARE

ಬೆಂಗಳೂರು: ನೆರೆ ರಾಜ್ಯವಾದ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿ, ಲಾಕ್‍ಡೌನ್ ಘೋಷಣೆಯಾಗಿದೆ. ರಾಜ್ಯದ ಕೋವಿಡ್ ಪ್ರಕರಣಗಳಲ್ಲಿಯೂ ನಿಧಾನವಾಗಿ ಏರಿಕೆ ಕಂಡುಬರುತ್ತಿದ್ದು, ಬೆಂಗಳೂರಿನ ಕೋವಿಡ್ ಪ್ರಕರಣಗಳಲ್ಲಿಯೂ ಟ್ರಾವೆಲ್ ಹಿಸ್ಟರಿಯಿಂದ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆಗೆ ಮೂರನೇ ಅಲೆ ಆರಂಭದ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನೆಲೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ಕಟ್ಟುನಿಟ್ಟಾಗಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದೆ. ಈ ಬಗ್ಗೆ ಕಂದಾಯ ವಿಭಾಗದ ಮುಖ್ಯ ಕಾರ್ಯದರ್ಶಿ, ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದು, ಪ್ರಕರಣ ಹೆಚ್ಚಳದ ಬಗ್ಗೆ ಸೂಕ್ಷ್ಮವಾಗಿ ಗಮನಿಸಬೇಕು, ಮೈಕ್ರೋಕಂಟೈನ್ ಮೆಂಟ್ ಮಾಡಬೇಕು, ನಿಗದಿತ ಗುಂಪುಗಳಿಗೆ ವ್ಯಾಕ್ಸಿನೇಷನ್ ಹೆಚ್ಚಿಸಬೇಕು, ಗಡಿ ಭಾಗಗಳಲ್ಲಿಯೂ ಎಚ್ಚರಿಕೆಯಿಂದ ನಿಗಾವಹಿಸಬೇಕೆಂದು ತಿಳಿಸಿದ್ದಾರೆ.

bbmp commissoner

ಪೂರ್ವ, ಬೊಮ್ಮನಹಳ್ಳಿ, ಮಹದೇವಪುರ ವಲಯದಲ್ಲಿ ಹೆಚ್ಚು ಕೋವಿಡ್
ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ರಂದೀಪ್ ಮಾತನಾಡಿ, ನಗರದ ಅಲ್ಲಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ. ಕ್ಲಸ್ಟರ್ ಗಳನ್ನು ಹತ್ತು ಪ್ರಕರಣದಿಂದ ಮೂರಕ್ಕೆ ಇಳಿಸಿ, ಮೈಕ್ರೋಕಂಟೈನ್ ಮೆಂಟ್ ಮಾಡಲಾಗ್ತಿದೆ. ನೂರು ಜಾಗಗಳಲ್ಲಿ ಕ್ಲಸ್ಟರ್ಸ್ ಕಂಡುಬಂದಿದೆ. ಅದರಲ್ಲೂ ನೂರು ಮೀಟರ್ ಒಳಗೆ ಹೆಚ್ಚು ಕ್ಲಸ್ಟರ್ ಗಳು ಕಂಡುಬಂದಿವೆ. ಪೂರ್ವ ವಲಯ, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಹಚ್ಚು ಕೋವಿಡ್ ಕಂಡುಬಂದಿದೆ. ಅಪಾರ್ಟ್ ಮೆಂಟ್ ಹಾಗೂ ಮನೆಗಳಲ್ಲಿ ಈ ಪ್ರಕರಣಗಳು ಹೆಚ್ಚು ಕಂಡುಬಂದಿವೆ. ಪ್ರತೀ ಕೋವಿಡ್ ಸೋಂಕಿತರ 20-30 ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡಲಾಗ್ತಿದೆ. ಆದರೆ ಸಂಪರ್ಕಿತರಲ್ಲೂ ಕೋವಿಡ್ ಪಾಸಿಟಿವ್ ಕಂಡುಬರುತ್ತಿದೆ. ಟಾರ್ಗೆಟ್ ಟೆಸ್ಟಿಂಗ್ ಮಾಡುವುದರಿಂದ ಕೋವಿಡ್ ಸಂಖ್ಯೆಗಳು ಹೆಚ್ಚು ಕಂಡುಬರುತ್ತಿವೆ ಎಂದರು.

randeep

ನಗರದ ಪ್ರತೀ ವಲಯಗಳಿಗೂ ಎಚ್ಚರಿಕೆ ನೀಡಲಾಗಿದೆ. ಕೆಲವು ಪ್ರಕರಣಗಳಲ್ಲಿ ಹೊರರಾಜ್ಯದಿಂದ ಪ್ರಯಾಣ ಮಾಡಿರುವ ಹಿನ್ನೆಲೆ, ಪ್ರವಾಸ ಹೋಗಿ ಬಂದಿರೋದು ಕಂಡುಬರುತ್ತಿದೆ. ತಜ್ಞರ ಸಭೆಯಲ್ಲೂ ಈ ಬಗ್ಗೆ ಮಾಹಿತಿ ಬಂದಿದ್ದು, ಕೇರಳದಿಂದ ಬಂದಿರುವವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಿಸಲು ಸೂಚಿಸಿದ್ದಾರೆ. ವ್ಯಾಕ್ಸಿನ್ ಪಡೆದಿದ್ದರೂ, ಯಾವುದೇ ವಿನಾಯಿತಿ ನೀಡದೆ ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಗೆ ಹೆಚ್ಚು ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ ಎಂದರು. ವ್ಯಾಕ್ಸಿನ್ ಅಭಾವ ಪಾಲಿಕೆ ಕೈಯಲ್ಲಿಲ್ಲ. ರಾಜ್ಯದಿಂದ ಎರಡು ದಿನಕ್ಕೊಮ್ಮೆ, 30-50 ಸಾವಿರ ಡೋಸ್ ಮಾತ್ರ ಬರುತ್ತಿದೆ ಎಂದರು.

crowd 6

ಆಗಸ್ಟ್ 10 ರಿಂದಲೇ ಮೂರನೇ ಅಲೆಯ ನಿರೀಕ್ಷೆ:
ಮೂರನೇ ಅಲೆಯ ಆರಂಭವನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಎರಡನೇ ಅಲೆ ಹತ್ತು ದಿನದಲ್ಲೇ 5 ಸಾವಿರ ಪ್ರಕರಕ್ಕೆ ಏರಿಕೆಯಾಗಿತ್ತು. ಆಗಸ್ಟ್ 10 ರಿಂದಲೇ ಈ ನಿರೀಕ್ಷೆ ಇದ್ದು, ಹಾಸಿಗೆಗಳು, ಮಕ್ಕಳ ತಜ್ಞ ವೈದ್ಯರ ಸಿದ್ಧತೆ ಮಾಡಲಾಗ್ತಿದೆ. ಕಂಟೈನ್ ಮೆಂಟ್ ಕೂಡಾ ಹೆಚ್ಚು ಮಾಡಲಾಗ್ತಿದೆ ಎಂದರು.

crowd 5

ಮಕ್ಕಳಿಗೆ ಶಾಲಾರಂಭಕ್ಕೆ ಅವಸರ ಬೇಡ
ಪಾಲಿಕೆ ವ್ಯಾಪ್ತಿಯಲ್ಲಿ ತಕ್ಷಣವೇ ಶಾಲೆಗಳನ್ನು ಆರಂಭ ಮಾಡಲು ಬದಲು, ಸ್ವಲ್ಪ ಕಾದುನೋಡಬೇಕಾಗಿದೆ. ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗುವುದಿಲ್ಲ, ಆದರೆ ಹೆಚ್ಚಾಗುವ ಸಂಕೇತಗಳು ಕಂಡುಬರುತ್ತಿವೆ ಎಂದು ತಿಳಿಸಿದರು. ಇದನ್ನೂ ಓದಿ: ಕೇರಳದಲ್ಲಿ 20 ಸಾವಿರಕ್ಕೂ ಹೆಚ್ಚು ಕೇಸ್ – ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಸಭೆ

crowd 3

ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೋವಿಡ್ ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿಗಳ ಸಭೆ ನಡೆಸಿದ್ದಾರೆ. ಕೇರಳ ಗಡಿಭಾಗದ ರಾಜ್ಯದ ಜಿಲ್ಲೆಗಳಲ್ಲಿ ಮುಂಜಾಗ್ರತ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ ಎಂದರು. ನಗರದ ಅತ್ತಿಬೆಲೆ, ಹೊಸೂರು ಚೆಕ್ ಪೋಸ್ಟ್ ಗಡಿಭಾಗದಲ್ಲಿ ನಿಗಾವಹಿಸಲಾಗ್ತಿದೆ. ಕೇರಳದ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ತಮಿಳುನಾಡು ಬಾರ್ಡರ್ ನಿಂದ ಉದ್ಯೋಗಕ್ಕಾಗಿ ನಗರಕ್ಕೆ ಬಹಳಷ್ಟು ಜನ ಬರುತ್ತಿದ್ದು, ಅವರ ಮೇಲೂ ನಿಗಾ ವಹಿಸಲು ಕಂಪನಿಗಳು, ಗಾರ್ಮೆಂಟ್ಸ್ ಗಳಿಗೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ನೆರೆ ಸಂತ್ರಸ್ತರಿಗೆ ಬಿಡಿಗಾಸಿನ ಪರಿಹಾರ – 2 ವರ್ಷದ ಹಿಂದೆ 10 ಸಾವಿರ, ಈಗ ಕೇವಲ 3,800 ರೂ.

TAGGED:bbmpbengaluruCorona VaccineCorona VirusCovid 19COVID 3rd wavekarnatakakeralaPublic TVಕರ್ನಾಟಕಕೊರೊನಾ ಮೂರನೇ ಅಲೆಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
4 minutes ago
Siddaramaiah R Ashok
Bengaluru City

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Public TV
By Public TV
8 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
47 minutes ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
54 minutes ago
Siddaramaiah 5
Districts

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Public TV
By Public TV
58 minutes ago
Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?