ಮೈಸೂರು: ನನ್ನ ರಾಜಕೀಯ ಜೀವನದ ಎಲ್ಲಾ ಏಳು-ಬೀಳುಗಳನ್ನು ದಾಖಲಿಸಿದ್ದೇನೆ. ನಾನು ಆತ್ಮತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಮೈಸೂರಿನಲ್ಲಿ ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರ 75ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಅವರ 50 ವರ್ಷದ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದೆ. ಈ ಬಗ್ಗೆ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದ ಎಲ್ಲಾ ಏಳು-ಬೀಳು ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೇ ಸ್ಪರ್ಧೆ ಮಾಡಿದ್ದೆ. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ ಮಾತಿನಿಂದ ಹಿಂದೆ ಸರಿಯುವುದು ಇಲ್ಲ ಎಂದರು.
2019ರ ವರೆಗೆ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ಪಕ್ಷೇತರನಾಗಿ ಕೂಡ ಸ್ಪರ್ಧಿಸಿದ್ದೇನೆ. ಕಾಂಗ್ರೆಸ್ನಲ್ಲಿ ಹೆಚ್ಚು ಬಾರಿ ಸ್ಪರ್ಧಿಸಿದ್ದೇನೆ. ನಾನು ರಾಜಕೀಯ ಬೆಳವಣಿಗೆ ಆದಂತಹ ಸಂದರ್ಭದಲ್ಲಿ ಬದಲಾವಣೆಗಳೊಂದಿಗೆ ಅನಿವಾರ್ಯ ಕಾರಣಗಳಿಂದ ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ. ಈ ಹಿಂದೆ ನನ್ನ ಮನಸ್ಸಿಗೆ ನೋವಾಗುವಂತಹ ಘಟನೆ ನಡೆದ ಬಳಿಕ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೆ. ಆದರೆ ನನ್ನ ಅಭಿಮಾನಿಗಳು ಒಪ್ಪದ ಕಾರಣ ಎರಡು ವರ್ಷಗಳ ಮತ್ತೆ ಮುಂದುವರಿದು 2019ರ ಚುನಾವಣೆಗಳಲ್ಲಿ ಎದುರಿಸಿದ್ದೇನೆ ಎಂದರು. ಇದನ್ನೂ ಓದಿ: ಜಮೀರ್, ಬೇಗ್ ಮನೆಗೆ ಇಡಿ ದಾಳಿ- ಸಿದ್ದರಾಮಯ್ಯನವ್ರೇ ಇದರ ಪಲಾನುಭವಿಯಂತೆ!
ಚುನಾವಣೆಗಳಲ್ಲಿ ನಾನು ಯಾವ ಪರಿಸ್ಥಿತಿಗಳಲ್ಲಿ ಎದುರಿಸಿದ್ದೇನೆ ಎಂಬುದನ್ನು ಬಿಡುಗಡೆಯಾಗಲಿರುವ ನನ್ನ ಪುಸ್ತಕದಲ್ಲಿ ಬರೆದಿದ್ದೇನೆ. ಹಾಗಾಗಿ ನನಗೆ ಆ ಎಲ್ಲಾ ಚುನಾವಣೆಯ ಸಂದರ್ಭಗಳಲ್ಲಿ ನನ್ನ ನಿಲುವಿನ ಕುರಿತು ಆತ್ಮತೃಪ್ತಿ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.