Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆಗೆ ಯತ್ನ -ಜೈಲಿನಲ್ಲೇ ಸಂಚು, ಐವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆಗೆ ಯತ್ನ -ಜೈಲಿನಲ್ಲೇ ಸಂಚು, ಐವರು ಅರೆಸ್ಟ್

Districts

ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆಗೆ ಯತ್ನ -ಜೈಲಿನಲ್ಲೇ ಸಂಚು, ಐವರು ಅರೆಸ್ಟ್

Public TV
Last updated: August 8, 2021 10:28 pm
Public TV
Share
3 Min Read
shashikumar
SHARE

ಬೆಂಗಳೂರು: ಖಾಸಗಿ ಶಾಲೆಗಳ ಒಕ್ಕೂಟ ಕಾರ್ಯದರ್ಶಿ (ಕ್ಯಾಮ್ಸ್) ಶಶಿಕುಮಾರ್ ಮೇಲೆ ನಡೆದಿದ್ದ ಕೊಲೆ ಯತ್ನ ಪ್ರಕರಣ ಭೇದಿಸಿರುವ ಜಾಲಹಳ್ಳಿ ಪೊಲೀಸರು ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡ ಜಾಲಹಳ್ಳಿ ಇನ್ ಸ್ಪೆಕ್ಟರ್ ಗುರುಪ್ರಸಾದ್ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ದೀಲಿಪ್, ಅಭಿಷೇಕ್, ಕಾರ್ತಿಕ್, ಭರತ್ ಹಾಗೂ ಪವನ್ ಬಂಧಿಸಿ ಒಂದು ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಮಾರಕಾಸ್ತ್ರಗಳು, ಡ್ರ್ಯಾಗರ್, ಪೆಪ್ಪರ್ ಸ್ಪ್ರೆ ಬಾಟೆಲ್ ಹಾಗೂ ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡಿದ್ದಾರೆ.

KAMS Shashi Kumar accused

ಕೃತ್ಯದಲ್ಲಿ ಪ್ರಮುಖ ಆರೋಪಿ ಲಗ್ಗೆರೆ ರವಿ ಸೇರಿದಂತೆ ಆರು ಮಂದಿ ಭಾಗಿಯಾಗಿ ತಲೆಮರೆಸಿಕೊಂಡಿದ್ದು ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಉತ್ತರ ವಿಭಾಗದ ಡಿಸಿಪಿ ಧಮೇರ್ಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

ಅಂದು ನಡೆದಿದ್ದೇನು?
ಕ್ಯಾಮ್ಸ್ ಕಾರ್ಯದರ್ಶಿಯಾಗಿರುವ ಶಶಿಕುಮಾರ್ ಕಳೆದ ತಿಂಗಳ 29ರ ರಾತ್ರಿ 9 ಗಂಟೆ ಸುಮಾರಿಗೆ ಜಾಲಹಳ್ಳಿ ನಿವಾಸ ಬಳಿ ಕಾರಿನಿಂದ ಇಳಿಯುತ್ತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಶಶಿಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಕೂಡಲೇ ಕಾರಿನಲ್ಲಿ ಕುಳಿತಕೊಂಡ ಶಶಿಕುಮಾರ್ ಗೆ ಸಣ್ಣಪುಟ್ಟ ಗಾಯವಾಗಿತ್ತು. ಜೀವ ರಕ್ಷಣೆಗಾಗಿ ತಮ್ಮ ಬಳಿಯಿದ್ದ ಪಿಸ್ತೂಲ್ ತೆಗೆಯುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ಬಂದು ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಎಸಿಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಇನ್ ಸ್ಪೆಕ್ಟರ್ ಗುರುಪ್ರಸಾದ್ ಸಾರಥ್ಯದಲ್ಲಿ ನಾಲ್ಕು ವಿಶೇಷ ತಂಡ ರಚಿಸಿ ಚುರುಕಿನಿಂದ ತನಿಖೆ ನಡೆಸಿ ಐದು ಮಂದಿ ಆರೋಪಿಗಳ ಬಂಧನಕ್ಕೆ ಕಾರಣವಾಗಿದೆ.

 

KAMS Shashi Kumar accused 1

ಕಾರಣವೇನು?
2014 ರಿಂದ ಕರ್ನಾಟಕ ವಿದ್ಯಾರ್ಥಿ ಪೋಷಕರ ಸಂಘದಲ್ಲಿ ಗುರುತಿಸಿಕೊಂಡಿದ್ದ ಲಗ್ಗೆರೆ ರವಿ ರಾಜಗೋಪಾಲನಗರ ಠಾಣೆಯ ರೌಡಿಶೀಟರ್ ಆಗಿ ಕುಖ್ಯಾತಿ ಪಡೆದುಕೊಂಡಿದ್ದ. 2019 ರಲ್ಲಿ ವಿಜಯನಗರ ಠಾಣಾ ವ್ಯಾಪ್ತಿಯ ಶಾಲೆಯೊಂದರ ಪ್ರಿನ್ಸಿಪಾಲ್ ಆಗಿದ್ದ ವೀರಭದ್ರಪ್ಪ ಎಂಬುವರ ಅಪಹರಣ ಸೇರಿದಂತೆ ಏಳಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ.

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ರವಿ ಜೈಲು ಸೇರಿದ್ದ. ಇನ್ನೊಂದಡೆ ಖಾಸಗಿ ಶಾಲೆಗಳ ಮಾಲೀಕರಿಂದ ಹಫ್ತಾ ವಸೂಲಿ ನಿಂತಿದ್ದರಿಂದ ಹಾಗೂ ಮರಳಿ ಹಣ ಪಡೆಯಲು ಯೋಜನೆ ರೂಪಿಸಿದ್ದ. ಅಲ್ಲದೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮುಗಿಸಿದರೆ ಇತರೆ ಖಾಸಗಿ ಶಾಲೆಗಳ ಮಾಲೀಕರು ಹಫ್ತಾ ನೀಡುತ್ತಾರೆ ಎಂದು ಭಾವಿಸಿದ್ದ. ಇದೇ ದುರುದ್ದೇಶದಿಂದ ಜೈಲಿನಲ್ಲಿದ್ದ ಎರಡನೇ ಆರೋಪಿ ದಿಲೀಪ್ ಪರಿಚಯಿಸಿಕೊಂಡು ಸಂಚು ರೂಪಿಸಿದ್ದ. ರವಿ ಅಣತಿಯಂತೆ ದೀಲಿಪ್ ಸಹಚರರಿಗೆ ವಿಷಯ ತಿಳಿಸಿದ್ದಾನೆ. ಜಾಮೀನು ಪಡೆದು ಹೊರ ಬಂದಿದ್ದ ಆರೋಪಿಗಳು ಶಶಿಕುಮಾರ್ ಕೊಲೆ ಸಂಚು ರೂಪಿಸಿದ್ದರು.

dcp bengluru

6 ತಿಂಗಳ ಹಿಂದೆಯೇ ಪ್ಲ್ಯಾನ್
ಶಶಿಕುಮಾರ್ ಹತ್ಯೆ ಮಾಡಲು ನಿರ್ಧರಿಸಿದ ಆರೋಪಿಗಳು ಜಾಲಹಳ್ಳಿಯ ಮುತ್ಯಾಲನಗರದಲ್ಲಿ ರವಿ ಮಾಡಿದ್ದ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದರು. ನಿರಂತರವಾಗಿ ಶಶಿಕುಮಾರ್ ಚಲನವಲನಾ ಬಗ್ಗೆ ನಿಗಾ ವಹಿಸಿದ್ದರು. ಕಳೆದ ತಿಂಗಳು 29 ರಂದು ಜಾಲಹಳ್ಳಿ ಬಳಿ ಹತ್ಯೆ ಮಾಡಲು ಮುಂದಾಗಿದ್ದರು. ದಾಳಿಯಲ್ಲಿ ಶಶಿಕುಮಾರ್ ಬಳಿಯಿದ್ದ ಲೈಸೆನ್ಸ್ ಪಿಸ್ತೂಲ್ ಕಂಡು ಕ್ಷರ್ಣಾಧದಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದರು. ಬಂಧನ ಭೀತಿಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೋಲಾರ, ಮಾಲೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದರು ಎಂದು ಡಿಸಿಪಿ ತಿಳಿಸಿದ್ದಾರೆ.  ಇದನ್ನೂ ಓದಿ : ಪ್ರವಾಸಿಗರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ- 2 ಕಿ.ಮೀ. ಸಾಲುಗಟ್ಟಿ ನಿಂತ ವಾಹನಗಳು 

ಶಶಿಕುಮಾರ್ ನನ್ನು ಮುಗಿಸಲೇ ಬೇಕೆಂಬ ತೀರ್ಮಾನಿಸಿದ್ದ ರವಿ ಅಂಡ್ ಗ್ಯಾಂಗ್ 29 ರಂದು ರಾತ್ರಿ ಕೊಲೆ ಮಾಡಲು ನಿರ್ಧರಿಸಿದ್ದರು. ಪ್ರತಿದಿನ ಸಾಕುನಾಯಿ ವಾಕ್ ಮಾಡಲು ಕರೆದುಕೊಂಡು ಬರುವಾಗ ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಆದರೆ ಆ ದಿನ ರಾತ್ರಿ ಬೇಗನೇ ಜಾಲಹಳ್ಳಿಯಿಂದ ಗಾಂಧಿನಗರ ನಿವಾಸಕ್ಕೆ ಹೋಗಲು ಕಾರು ಹತ್ತಿದ್ದ ಶಶಿಕುಮಾರ್ ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಅಲ್ಲದೆ ಆರೋಪಿ ದಿಲೀಪ್ ಉಳಿದುಕೊಂಡಿದ್ದ ಮನೆಯಲ್ಲಿ ಕಂಟ್ರಿಮೇಡ್ ಪಿಸ್ತೂಲ್ ಮೂವರು ಸಜೀವ ಗುಂಡುಗಳಿದ್ದರೂ ಇದನ್ನು ಬಳಸಲು ಬರದ ಕಾರಣ ಮಾರಕಾಸ್ತ್ರ ಮೊರೆ ಹೋಗಿದ್ದರು. ಪತ್ತೆಯಾಗಿರುವ ಪಿಸ್ತೂಲ್ ಬಗ್ಗೆ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನ ಬಳಿಕ ವಿಷಯ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:bengaluruKAMSkannada newspoliceShashi Kumarಅಪರಾಧಕ್ಯಾಮ್ಸ್ಪೊಲೀಸ್ಬೆಂಗಳೂರುಶಶಿಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
1 minute ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
22 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
34 minutes ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
9 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?