Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

Bengaluru City

ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

Public TV
Last updated: August 19, 2021 10:16 pm
Public TV
Share
3 Min Read
bc nagesh 4
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಿಟ್ಟ ನಿರ್ಧಾರದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆಗೆ ನಾಂದಿ ಹಾಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿರುವ ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ (ನ್ಯಾಕ್) ಹೊರ ತಂದಿರುವ ‘ನ್ಯಾಕ್ ಸುದ್ದಿಪತ್ರ’ ಬಿಡುಗಡೆ ಮಾಡಿ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಕಾಲೇಜುಗಳ ಪ್ರಾಂಶುಪಾಲರನ್ನು ಉದ್ದೇಶಿಸಿ ಬಿ.ಸಿ ನಾಗೇಶ್ ಮಾತನಾಡಿದರು. ಶಿಕ್ಷಣದಲ್ಲಿ ಬದಲಾವಣೆ ತರಬೇಕು. ಅದರ ಮೂಲಕ ವ್ಯಕ್ತಿತ್ವ ವಿಕಸನವಾಗಬೇಕು ಎಂದು ಕನಸು ಕಂಡಿರುವ ದೇಶದ ಅನೇಕ ಶ್ರೇಷ್ಠ ಮಹಾಪುರುಷರ ಎಲ್ಲ ಕನಸುಗಳನ್ನು ನನಸು ಮಾಡಲು ಸಾಧ್ಯವಾಗದೆ ಇರಬಹುದು. ಆದರೂ ನಾವು ಶಿಕ್ಷಣದಲ್ಲಿ ಸಾಕಷ್ಟು ಮೈಲುಗಲ್ಲುಗಳನ್ನು ತಲುಪಿದ್ದೇವೆ. ದೇಶದ ಎಲ್ಲ ಮೂಲೆಗಳಲ್ಲೂ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಪ್ರತಿಯೊಂದು ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಇರುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

school open

ಉತ್ತಮ ವಾತಾವರಣದಲ್ಲಿ ವ್ಯಾಸಂಗ ಮಾಡಲು ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವಂತಹ ಶಾಲೆಗಳನ್ನು ತೆರೆಯಲಾಗಿದೆ. 2000 ಇಸವಿಗೆ ಮೊದಲು ಚುನಾವಣೆ ಕರ್ತವ್ಯವೆಂದರೆ ಶಿಕ್ಷಕರು ಬೇಡವೇ ಬೇಡ ಎನ್ನುತ್ತಿದ್ದರು. ಶೌಚಗೃಹ ಕೊರತೆ, ರಾತ್ರಿ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇರುತ್ತಿರಲಿಲ್ಲ. ಆದರೆ, ಮೂಲಸೌಕರ್ಯ ಅಭಿವೃದ್ಧಿ, ಗುಣಮಟ್ಟ ಸುಧಾರಿಸಲು ಆರಂಭವಾದ ಸರ್ವ ಶಿಕ್ಷಣ ಅಭಿಯಾನ ಬದಲಾವಣೆಗೆ ಮುನ್ನುಡಿ ಬರೆಯಿತು ಎಂದು ಸಚಿವರು ನುಡಿದರು.

ಈಗ ನಮ್ಮ ಇಲಾಖೆಯಲ್ಲೇ 48 ಸಾವಿರ ಶಾಲೆಗಳಿವೆ. ಶಾಲೆಗಳು ನಮ್ಮ ನಿರೀಕ್ಷೆಯಂತೆ ಇಲ್ಲದಿರಬಹುದು. ಆದರೆ, ಪಾಠದ ಗುಣಮಟ್ಟ ಚೆನ್ನಾಗಿದೆ. ಗುಣಮಟ್ಟ ಸುಧಾರಣೆಯಾಗದಿರಲು ಪ್ರೇರಣೆ, ಅಗತ್ಯ ಮತ್ತು ಸೂಕ್ತ ಮಾರ್ಗದರ್ಶನದ ಕೊರತೆ ಇರಬಹುದು. ಬೋಧನೆ ಜೊತೆಗೆ ಬೇರೆ ಬೇರೆ ಕೆಲಸಗಳ ಜವಾಬ್ದಾರಿ, ಕೆಲಸದ ಒತ್ತಡ ಅದಕ್ಕೆ ಕಾರಣವಾಗಿರಬಹುದು ಎಂದು ಸಚಿವರು ಅಭಿಪ್ರಾಯಪಟ್ಟರು.

minister bc nagesh

ಮೆಕಾಲೆ ಶಿಕ್ಷಣದ ಬಗ್ಗೆ ಎಲ್ಲರೂ ಮಾತನಾಡಿದ್ದಾರೆ. ಆದರೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಆಗಿರಲಿಲ್ಲ. ಈಗ ಗಟ್ಟಿ ನಿರ್ಧಾರ ತೆಗೆದುಕೊಂಡು ಬದಲಾವಣೆ ತರಬಲ್ಲ ಸಮರ್ಥ ನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಈ ದೇಶ ಪಡೆದಿದೆ. ದೇಶದ ಪ್ರತಿಯೊಬ್ಬ ಪ್ರಜೆಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು. ಅದೇ ನಮ್ಮ ಗುರಿಯಾಗಿರಬೇಕು ಎಂದು ನಮ್ಮ ಪೂರ್ವಜರು, ಸ್ವಾತಂತ್ರ್ಯ ಹೋರಾಟಗಾರರು ಕಂಡಿರುವ ಕನಸುಗಳನ್ನು ನನಸು ಮಾಡುವ ಗುರಿಯನ್ನು ಪ್ರಧಾನಿಯವರು ಹೊಂದಿದ್ದಾರೆ. ಪ್ರಸಕ್ತ ಸನ್ನಿವೇಶ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುತ್ತಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಜನರಿಗಷ್ಟೇ ಕೊರೊನಾ ರೂಲ್ಸ್- ಜನಪ್ರತಿನಿಧಿಗಳು ಡೋಂಟ್‍ಕೇರ್

ವಿಶ್ವವಿದ್ಯಾಲಯ ಮಾದರಿಯ ಶೈಕ್ಷಣಿಕ ಚಟುವಟಿಕೆಗಳ ವ್ಯವಸ್ಥೆಯನ್ನು ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ ಹಂತದಲ್ಲೂ ಅಳವಡಿಸಿಕೊಳ್ಳಲು ಸಾಧ್ಯವಾದರೆ ಗುಣಮಟ್ಟ ಸುಧಾರಣೆಯಾಗಬಹುದು. ಈ ಕುರಿತು ಯೋಚನೆ ಮಾಡಬೇಕು. ನ್ಯಾಕ್‍ನಂತಹ ಪ್ರತಿಷ್ಠಿತ ಸಂಸ್ಥೆಗಳು ಬದಲಾವಣೆ ಮತ್ತು ಸುಧಾರಣೆಗಾಗಿ ಹೊಸ ಯೋಜನೆಗಳ ನೀಲಲಕ್ಷೆ ರೂಪಿಸಬೇಕು. ಭಾರತದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇರುವ ಕೊರತೆಗಳನ್ನು ನಿವಾರಿಸಿ ಬದಲಾವಣೆ ತರುವ ಸಾಮರ್ಥ್ಯ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿವೆ ಎಂದು ಸಚಿವರು ಹೇಳಿದರು.

bc nagesh

ತುಮಕೂರು ವಿಶ್ವವಿದ್ಯಾಲಯ ಸ್ಥಾಪನೆಯಾಗುವಲ್ಲಿ ನ್ಯಾಕ್ ನಿರ್ದೇಶಕರಾದ ಪ್ರೊ. ಎಸ್.ಸಿ. ಶರ್ಮ ಅವರ ಪಾತ್ರ ಮಹತ್ವದ್ದಾಗಿದೆ. ಸಿಎಸ್‍ಆರ್ ನಿಧಿ ಮೂಲಕ ವಿವಿ ಆವರಣದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಶರ್ಮ ಕಾರಣರಾದರು ಎಂದು ನ್ಯಾಕ್ ನಿರ್ದೇಶಕರ ಕೆಲಸಗಳ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ದೇಶದಲ್ಲಿ ಯುವ ಜನಸಂಖ್ಯೆ ದೊಡ್ಡದಾಗಿದೆ. ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ದೊಡ್ಡ ಆಸ್ತಿ ಮಾಡುವ ಜವಾಬ್ದಾರಿ ನಮ್ಮ, ನಿಮ್ಮ ಕೈಯಲ್ಲಿದೆ. ಸುಧಾರಣೆ ಆಗಬೇಕು ಎಂದು ಸಚಿವರು ಹೇಳಿದರು.

TAGGED:BC Nageshbengalurueducation ministerPublic TVಪಬ್ಲಿಕ್ ಟಿವಿಬಿ.ಸಿ.ನಾಗೇಶ್ಬೆಂಗಳೂರುಶಿಕ್ಷಣ ಸಚಿವ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
13 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
27 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?