ಇಂದು 1,453 ಹೊಸ ಕೊರೊನಾ ಪ್ರಕರಣ, 17 ಮಂದಿ ಸಾವು

Public TV
1 Min Read
coronavirus

ಬೆಂಗಳೂರು: ರಾಜ್ಯದಲ್ಲಿ ಇಂದು 1,453 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 21,161 ಸಕ್ರಿಯ ಪ್ರಕರಣಗಳಿವೆ.

ಇಂದು 1,408 ಮಂದಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.1.83 ಮತ್ತು ಮರಣ ಪ್ರಮಾಣ ಶೇ.1.16 ರಷ್ಟಿದೆ. ಇಂದು ರಾಜ್ಯದಲ್ಲಿ ಒಟ್ಟು 1,73,000 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದುವರೆಗೂ ರಾಜ್ಯದಲ್ಲಿ 29,36,077 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 37,105 ಮಂದಿ ಸಾವನ್ನಪ್ಪಿದ್ದಾರೆ.

E9PF29VXoAYhDJD

ರಾಜಧಾನಿ ಬೆಂಗಳೂರಿನಲ್ಲಿಂದ 352 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಓರ್ವ ಮೃತಪಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ 381 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ರೆ, ಸದ್ಯ 7,912 ಸಕ್ರಿಯ ಪ್ರಕರಣಗಳಿವೆ. ಚಾಮರಾಜನಗರದಲ್ಲಿ ಮಾತ್ರ ಇಂದು ಕೊರೊನಾ ಪ್ರಕರಣ ದಾಖಲಾಗಿಲ್ಲ.

CORONA 4

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 352, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 45, ಚಿತ್ರದುರ್ಗ 9, ದಕ್ಷಿಣ ಕನ್ನಡ 341, ದಾವಣಗೆರೆ 10, ಧಾರವಾಡ 4, ಗದಗ 2, ಹಾಸನ 101, ಹಾವೇರಿ 1, ಕಲಬುರಗಿ 3, ಕೊಡಗು 95, ಕೋಲಾರ 20, ಕೊಪ್ಪಳ 2, ಮಂಡ್ಯ 25, ಮೈಸೂರು 87, ರಾಯಚೂರು 4, ರಾಮನಗರ 4, ಶಿವಮೊಗ್ಗ 53, ತುಮಕೂರು 10, ಉಡುಪಿ 176, ಉತ್ತರ ಕನ್ನಡ 40, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *