Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ ರೆಸಿಡೆನ್ಶಿಯಲ್ ಟೌನ್‍ಶಿಪ್: ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ ರೆಸಿಡೆನ್ಶಿಯಲ್ ಟೌನ್‍ಶಿಪ್: ನಿರಾಣಿ

Bengaluru City

ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ ರೆಸಿಡೆನ್ಶಿಯಲ್ ಟೌನ್‍ಶಿಪ್: ನಿರಾಣಿ

Public TV
Last updated: August 20, 2021 7:05 pm
Public TV
Share
3 Min Read
MURUGESH NIRANI 2
SHARE

-ಶೇ.10ರಿಂದ 15ರಷ್ಟು ಪ್ರದೇಶವನ್ನು ಮೀಸಲಿಡಲು ಸೂಚನೆ
-ಸಮಗ್ರ ಕೈಗಾರಿಕಾ ನಿವಾಸಿಗಳ ನಗರ ಪರಿಕಲ್ಪನೆ
-ವಾಕ್-ಟು-ವರ್ಕ್ ಎಂಬ ಪರಿಕಲ್ಪನೆ

ಬೆಂಗಳೂರು: ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ ( ರೆಸಿಡೆನ್ಶಿಯಲ್ ಟೌನ್‍ಶಿಪ್)ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ನಿರಾಣಿ ಅವರು ನಿರ್ಧರಿಸಿದ್ದಾರೆ.

murugesh nirani

ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಕಾರ್ಯ ನಿರ್ವಹಣಾಕಾರಿ(ಸಿಇಒ) ಎನ್.ಶಿವಶಂಕರ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಗುರುವಾರ ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್‍ಶಿಪ್

Murugesh Nirani Hatti 3

ಮೀಸಲಿರಿಸಿದ ಜಾಗದಲ್ಲಿ ಶಾಲಾ-ಕಾಲೇಜುಗಳು, ಆರೋಗ್ಯ ಕೇಂದ್ರ, ವಾಣಿಜ್ಯ ಸಂಕೀರ್ಣಗಳು, ಉದ್ಯಾನವನ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಯೋಜನೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ.

ಸಮಗ್ರ ಕೈಗಾರಿಕಾ ನಿವಾಸಿಗಳ ನಗರ (ಇಂಟಿಗ್ರೇಟೆಡ್ ಇಂಡಸ್ಟ್ರಿಯಲ್ ರೆಸಿಡೆನ್ಶಿಯಲ್ ಟೌನ್‍ಶಿಪ್) ಪರಿಕಲ್ಪನೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಜಾಗವನ್ನು ಶೇ.10ರಿಂದ 15ರಷ್ಟು ವಸತಿ ಬಡಾವಣೆಯ ಉದ್ದೇಶಕ್ಕಾಗಿ ಕಾಯ್ದಿರಿಸಬೇಕೆಂದು ಸೂಚಿಸಿದ್ದು, ವಾಕ್-ಟು-ವರ್ಕ್ ಎಂಬ ಪರಿಕಲ್ಪನೆಯಡಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂಬ ಯೋಜನೆ ಹಾಕಿಕೊಳ್ಳಲಾಗಿದೆ.

MURGESH NIRANI 1

ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಾವು ವಾಸಿಸುವ ಪ್ರದೇಶದಿಂದ ಬಂದುಹೋಗಲು ಸಂಚಾರ ದಟ್ಟಣೆ, ವಾಹನಗಳ ಸಮಸ್ಯೆ, ಸಮಯದ ಅಭಾವ ಹೀಗೆ ನಾನಾ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಕೈಗಾರಿಕೆಗಳಿದ್ದರೆ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಸೇರಿದಂತೆ ದೂರದಿಂದ ಬರಲು ಸಿಬ್ಬಂದಿಗಳಿಗೆ ಅನಾನುಕೂಲವಾಗಲಿವೆ. ಕೈಗಾರಿಕಾ ಪ್ರದೇಶದಲ್ಲೇ ವಸತಿಗಳನ್ನು ನಿರ್ಮಿಸಿಕೊಟ್ಟರೆ ಸಮಯದ ಉಳಿತಾಯ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಇದನ್ನೂ ಓದಿ: ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ನೇಹಾ ಪಾಟೀಲ್

ಕೈಗಾರಿಕಾ ಪ್ರದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವಸತಿ ಸಮ್ಮುಚ್ಚಯಗಳು, ಆಸ್ಪತ್ರೆ, ಮಾಲ್‍ಗಳು, ಶಾಲಾ-ಕಾಲೇಜುಗಳು, ನೀರಿನ ಸೌಲಭ್ಯ ಸೇರಿದಂತೆ ಎಲ್ಲ ರೀತಿಯ ಸೌಲಭ್ಯವು ಇದರಲ್ಲಿ ಸಿಗಲಿವೆ. ಗುರುವಾರ ಬೆಂಗಳೂರಿನ ಚೇಂಬರ್ ಆಫ್ ಇಂಡಸ್ಟ್ರೀಸ್ ಮತ್ತು ಕಾಮರ್ಸ್(ಬಿಸಿಐಸಿ)ಯ 44ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ನಿರಾಣಿ, ಶೀಘ್ರದಲ್ಲಿಯೇ ಉನ್ನತ ಕೈಗಾರಿಕೋದ್ಯಮಿಗಳಿಗೆ ಮತ್ತು ಅವರ ಸಂಘಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸೂಚಿಸುವುದಾಗಿ ಹೇಳಿದರು.

indusrtries

ಶೀಘ್ರದಲ್ಲೇ ಉನ್ನತ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಾಗುವುದು. ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ಆಕರ್ಷಿಸುವ ವಿಷಯಗಳ ಬಗ್ಗೆ ಚರ್ಚಿಸುಲಾಗುವುದು. ಕೈಗಾರಿಕಾ ವಲಯ ಮತ್ತು ಹೂಡಿಕೆದಾರರ ಸ್ನೇಹಿ ವಾತಾವರಣದಲ್ಲಿ ರಾಜ್ಯವನ್ನು ಮುಂಚೂಣಿಯ ಸ್ಥಾನದಲ್ಲಿ ಕಾಯ್ದುಕೊಳ್ಳುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ಆಶ್ವಾಸನೆ ನೀಡಿದರು. ಕೈಗಾರಿಕಾ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ ನಿರಾಣಿ, ಕರ್ನಾಟಕವು ಹೂಡಿಕೆದಾರರಿಗೆ ಆದ್ಯತೆಯ ತಾಣವಾಗಿದೆ. ಮುಂದಿನ ದಿನಗಳಲ್ಲಿ ಹೂಡಿಕೆದಾರ ಸ್ನೇಹಿ ಮತ್ತು ವ್ಯಾಪಾರ ಸ್ನೇಹಿ ಹಂತಗಳೊಂದಿಗೆ ನಾವು ಮತ್ತಷ್ಟು ಪ್ರಗತಿಯನ್ನು ಖಚಿತಪಡಿಸುತ್ತೇವೆ ಎಂದು ಭರವಸೆ ಕೊಟ್ಟರು.

Kolar Industrial Area 7

ಕೈಗಾರಿಕೆಗಳ ಉದ್ದೇಶಕ್ಕಾಗಿ ರಾಜ್ಯಾದ್ಯಂತ ಒಟ್ಟು 82 ಸಾವಿರಕ್ಕೂ ಅಧಿಕ ಎಕರೆ ಜಮೀನು ಇದೆ. ಇದರಲ್ಲಿ 188 ಕೈಗಾರಿಕಾ ಘಟಕಗಳಿದ್ದು, 20 ಸಾವಿರಕ್ಕೂ ಅಧಿಕ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದಿನ 2ರಿಂದ 3 ವರ್ಷಗಳಲ್ಲಿ 9 ಸಾವಿರ ಎಕರೆ ಜಮೀನನ್ನು ಅಭಿವೃದ್ಧಿಪಡಿಸಲು ನೀಲನಕ್ಷೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡೀತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಆರಗ ಜ್ಞಾನೇಂದ್ರ

ಕಾರ್ಯಕ್ರಮದಲ್ಲಿ ಬಾಷ್ ಲಿಮಿಟೆಡ್ ವ್ಯವಸ್ಥಾಪಕ ನಿದೇರ್ಶಕ ಹಾಗೂ ಭಾರತದ ಬಾಷ್ ಸಮೂಹ ಸಂಸ್ಥೆಯ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಹಾಗೂ ಬ್ರಿಗೇಡ್ ಎಂಟಪ್ರ್ರೈಸಸ್ ನ ವ್ಯವಸ್ಥಾಪಕ ನಿದೇರ್ಶಕ ಮತ್ತು ಅಧ್ಯಕ್ಷ ಎಂ.ಆರ್ ಜೈಶಂಕರ್, ಬಿಸಿಐಸಿ ಅಧ್ಯಕ್ಷರಾದ ಟಿ.ಆರ್.ಪರಶುರಾಮನ್ ಉಪಸ್ಥಿತರಿದ್ದರು.

ಸ್ವಾಧೀನಪಡಿಸಿಕೊಂಡಿರುವ ಭೂಮಿಯ ವಿವರ
ಒಟ್ಟು ಕೈಗಾರಿಕಾ ಪ್ರದೇಶಗಳು- 188
ಒಟ್ಟು ಎಕರೆ- 81,864
ಘಟಕಗಳು- 20,972

ಭವಿಷ್ಯದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಭೂಮಿಯ ವಿವರ
ಒಟ್ಟು ಭೂಮಿ-9,010 ಎಕರೆ
ಕೋಲಾರ ಜಿಲ್ಲೆ -ವೇಮಗಲ್ 2ನೇ ಹಂತ-511 ಎಕರೆ
ರಾಮನಗರ -ಹಾರೋಹಳ್ಳಿ 5ನೇ ಹಂತ-912 ಎಕರೆ
ಹಾವೇರಿ-ಗಣಚೂರು- 407 ಎಕರೆ
ಮಂಡ್ಯ- ಕುದುರುಗುಂಡೆ-109 ಎಕರೆ
ವಿಜಯಪುರ-ಮುಲವಾಡ-2,500 ಎಕರೆ
ತುಮಕೂರು-ಶಿರಾ 2ನೇ ಹಂತ-1,200

TAGGED:bengalurukarnatakaMurugesh niraniPublic TVResidential Townshipಕರ್ನಾಟಕಕೈಗಾರಿಕಾ ಪ್ರದೇಶಪಬ್ಲಿಕ್ ಟಿವಿಮುರುಗೇಶ್ ನಿರಾಣಿರೆಸಿಡೆನ್ಸಿಯಲ್ ಟೌನ್ ಶಿಪ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
3 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?