Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು: ಮುನಿರತ್ನ

Districts

ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು: ಮುನಿರತ್ನ

Public TV
Last updated: August 26, 2021 7:35 pm
Public TV
Share
2 Min Read
KOLAR
SHARE

ಕೋಲಾರ: ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಹಾಗೂ ಸಾಗಾಣಿಕೆಗೆ ಕಡಿಮೆ ವೆಚ್ಚದಲ್ಲಿ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು.

ಕೋಲಾರದ ಶ್ರೀನಿವಾಸಪುರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಕೊಡುಗೆ ನೀಡಿದೆ. ಸಂಸದರಾದ ಎಸ್.ಮುನಿಸ್ವಾಮಿ pic.twitter.com/R8D4va72R1

— FcIix (@fclixpcrtocol) August 26, 2021

ಇಂದು ಶ್ರೀನಿವಾಸಪುರ ನಗರದ ಪುರಸಭಾ ಕಾರ್ಯಾಲಯ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದ ಅವರು, ಕೋಲಾರ ಬೆಂಗಳೂರಿಗೆ ಸಮೀಪದ ಜಿಲ್ಲೆಯಾಗಿರುವುದರಿಂದ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಪಡಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಕೊಡುಗೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

KLR MUNIRATHNA 2

ಜಿಲ್ಲೆಯಲ್ಲಿ ಅತಿ ಹೆಚ್ಚು ವಿದ್ಯಾವಂತರು ಇದ್ದಾರೆ. ವಿದ್ಯಾಭ್ಯಾಸಕ್ಕೆ ಜಿಲ್ಲೆಯಲ್ಲಿ ಹೆಚ್ಚಿನ ಮಹತ್ವವಿದೆ. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಇಬ್ಬರು ವಿದ್ಯಾರ್ಥಿನಿಯರಾದ ಪೂರ್ವಿ.ಕೆ ಬೈರೇಶ್ವರ ವಿದ್ಯಾನಿಕೇತನ ಶಾಲೆ ಮತ್ತು ವರ್ಷಿಣಿ. ಸೆಂಟ್ ತೇರಿಸಾ ಶಾಲೆ ರಾಬರ್ಟ್‍ಸನ್ ಪೇಟೆ ಅವರಿಗೆ ಸಚಿವರು ಲ್ಯಾಬ್ ಟ್ಯಾಪ್‍ಗಳನ್ನು ನೀಡಿದರು.  ಇದನ್ನೂ ಓದಿ: ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್

#Kolar #Srinivaspur @bjp_muniswamy #KRRameshKumar #MunicipalityBuilding #BJP @BSBommai @CMofKarnataka pic.twitter.com/ogzKY7cmyU

— FcIix (@fclixpcrtocol) August 26, 2021

ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯನ್ನು ಎದುರಿಸಲು ಆಸ್ಪತ್ರೆಗಳಿಗೆ ವೈದ್ಯಕೀಯ ಸಲಕರಣೆಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಮ್ಲಜನಕದ ಕೊರತೆಯನ್ನು ನೀಗಿಸಲು ನಗರ ಪ್ರದೇಶದಲ್ಲಿ ಹೆಚ್ಚಿನ ಮರಗಳನ್ನು ಬೆಳಸಬೇಕು. ಕನಿಷ್ಠ ಮನೆಗೆ 2 ಮರ ಬೆಳಸಬೇಕು. ರಸ್ತೆ, ಚರಂಡಿಗಳನ್ನು ನಿರ್ಮಾಣವಾಗಬೇಕು ಎಂದು ಅವರು ಹೇಳಿದರು.

KLR MUNIRATHNA

ಶ್ರೀನಿವಾಸಪುರ ತಾಲೂಕು ಮಾವಿನ ಹಣ್ಣಿಗೆ ವಿಶ್ವ ಪ್ರಸಿದ್ಧಿಯಾಗಿದೆ. ರೈತರಿಗೆ ಅನುಕೂಲವಾಗಲಿ ಎಂದು ಸರ್ಕಾರ 10 ಸಾವಿರ ಎಫ್.ಇ.ಓ ಸ್ಥಾಪಿಸುವ ಉದ್ದೇಶ ಹೊಂದಿದೆ. ರೈತರು ಬೆಳೆದ ಟೊಮೊಟೊ ಮತ್ತು ಮಾವಿನ ಹಣ್ಣುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

ಕೋಲಾರದ ಶ್ರೀನಿವಾಸಪುರ ಪುರಸಭೆಯ ನೂತನ ಕಾರ್ಯಾಲಯವನ್ನು ಇಂದು ಉದ್ಘಾಟಿಸಿದೆ. ಸಂಸದರಾದ ಎಸ್.ಮುನಿಸ್ವಾಮಿ, ಶಾಸಕ ಕೆ.ಆರ್.ರಮೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. pic.twitter.com/PXE38Vuqq8

— FcIix (@fclixpcrtocol) August 26, 2021

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಾಲೋಚನೆಯಿಂದ ನಗರದಲ್ಲಿ ಆಸ್ಪತ್ರೆ. ಶಾಲೆ, ಕಾಲೇಜು, ಬಸ್ ನಿಲ್ದಾಣ, ಮಾರುಕಟ್ಟೆ, ಒಳಚರಂಡಿ ವ್ಯವಸ್ಥೆ, ಕಟ್ಟಡಗಳು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕ್ರೀಡಾಂಗಣದಲ್ಲಿ ಈಜುಕೊಳ, ಅಥ್ಲೆಟಿಕ್ ಹಾಗೂ ವಿವಿಧ ಕ್ರೀಡೆಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿದೆ ಎಂದರು.

KLR MUNIRATHNA 1

ಮಾಂಸದ ಮಾರುಕಟ್ಟೆ ವಿದೇಶದ ಮಾದರಿಯಲ್ಲಿ ಏರ್ ಕಂಡೀಷನ್ ಮಾರುಕಟ್ಟೆ ನಿರ್ಮಿಸಲಾಗುತ್ತದೆ. ದೇವಸ್ಥಾನ, ಸ್ಮಶಾನ, ಪ್ರಾರ್ಥನಾ ಮಂದಿರಗಳು ಹಾಗೂ ಬಡವರಿಗೆ ಮನೆಗಳನ್ನು ನಿರ್ಮಿಸಲಾಗಿದೆ. ಇಂದಿರಾ ನಗರದ ಲೇಔಟ್‍ನಲ್ಲಿ ಒಂದು ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

#Kolar #Srinivaspur @bjp_muniswamy #KRRameshKumar #MunicipalityBuilding #BJP @BSBommai @CMofKarnataka pic.twitter.com/in3tcAfqNI

— FcIix (@fclixpcrtocol) August 26, 2021

ನಗರ ಪ್ರದೇಶದಲ್ಲಿ ಉನ್ನತ ಮಟ್ಟದ ರಸ್ತೆಗಳನ್ನು ನಿರ್ಮಿಸಲು ಅನುದಾನ ನೀಡುವಂತೆ ಸಚಿವರಲ್ಲಿ ಶಾಸಕರು ಮನವಿ ಮಾಡಿದರು. ಪೌರಕಾರ್ಮಿಕರಿಗೆ ಹಾಗೂ ನಿವೃತ್ತಿ ಹೊಂದಿದ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.

TAGGED:farmerKolarMunirathnaPublic TVS. Muniswamyಎಸ್. ಮುನಿಸ್ವಾಮಿಕೋಲಾರಪಬ್ಲಿಕ್ ಟಿವಿಮುನಿರತ್ನರೈತ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
3 minutes ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
5 minutes ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
26 minutes ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
1 hour ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?