ಹೊಲಗಳು ಮರಳು ಆಗಲು ಬಿಡುವುದಿಲ್ಲ: ರಾಹುಲ್ ಗಾಂಧಿ

Public TV
1 Min Read
rahul

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ಕೃಷಿ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಸರ್ಕಾರಕ್ಕೆ ಎಚ್ಚರಿಸುವ ಟ್ವೀಟ್ ಮಾಡಿದ್ದಾರೆ.

rahul gandhi 3

ಹೊಲಗಳು ಮರಳು ಆಗಲು ಬಿಡುವುದಿಲ್ಲ. ಅದನ್ನು ಅವರ( ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಾಯೋಕಿಂತ ಮುಂಚೆ ನನ್ನ ಅಪ್ಪನ ನೋಡ್ಬೇಕು: ವೈಷ್ಣವಿ

ಕೇಂದ್ರ ಸರ್ಕಾರವು ಕೃಷಿ ಭೂಮಿಯನ್ನು ತಮ್ಮ ಸ್ನೇಹಿತರಿಗೆ ಹಸ್ತಾಂತರಿಸುವ ಹುನ್ನಾರವನ್ನು ಹೊಂದಿದೆ. ಕೃಷಿ ವ್ಯವಸ್ಥೆಯನ್ನು ನಾಶಗೊಳಿಸಲು ನೂತನ ಕಾನೂನು ರಚಿಸಲಾಗಿದೆ ಎಂದು ರಾಹುಲ್ ಗಾಂಧಿ ಈ ಹಿಂದೆ ವಾಗ್ದಾಳಿ ಮಾಡಿದ್ದರು.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಸಿಂಘು ಗಡಿಯಲ್ಲಿ ರೈತರು ಆರಂಭಿಸಿದ್ದರು. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಈ ನಡುವೆ ರೈತರ ಪರ ಮತ್ತೊಮ್ಮೆ ಧ್ವನಿ ಎತ್ತಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಬಂಡವಾಳಶಾಹಿಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *