Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Chitradurga

ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಗೋಡೆ ಮೇಲೆ ನಿರ್ಮಾಣವಾಯ್ತು ಉಗಿಬಂಡಿ

Public TV
Last updated: September 1, 2021 11:14 pm
Public TV
Share
2 Min Read
chithradurga government school 1
SHARE

ಚಿತ್ರದುರ್ಗ: ಸರ್ಕಾರಿ ಶಾಲೆಗಳೆಂದರೆ ಮೂಗುಮುರಿಯೋರೇ ಹೆಚ್ಚು. ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ ಅನ್ನೋ ಆರೋಪ ನಿರಂತರ. ಇಂತಹ ಸಾಂಪ್ರದಾಯಿಕ ಮಾತುಗಳನ್ನು ಹುಸಿ ಮಾಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅಂಬಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಯ ಮೇಲೆ ರೈಲೊಂದನ್ನು ಚಿತ್ರಿಸುವ ಮೂಲಕ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ.

chithradurga government school 2

ಅಂಬಲಗೆರೆ ಶಾಲೆಯ ಶಿಕ್ಷಕರಾದ ನಾಗಭೂಷಣ್ ಅವರು ತುಂಬಾ ಶ್ರಮವಹಿಸಿ, ತಮ್ಮ ಸ್ವಂತ ಹಣ ಖರ್ಚುಮಾಡಿ ಅಂಬಲಗೆರೆಯ ಸರ್ಕಾರಿ ಶಾಲೆಯನ್ನು ತುಂಬಾ ಸುಂದರವಾಗಿ ಬದಲಾವಣೆ ಮಾಡಿದ್ದಾರೆ. ಹಿರಿಯೂರು ತಾಲೂಕಿನ ಶಿವನಗರ ಗ್ರಾಮದವರಾದ ನಾಗಭೂಷಣ್ ರವರು ಬಹುಮುಖ ಪ್ರತಿಭೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಂಗಳಗುಡ್ಡದಿಂದ 2016ರಲ್ಲಿ ಈ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು. ಕಲಿಸದೇ ಎಣಿಸುವ ಸಂಬಳ ನನ್ನದಲ್ಲ ಎಂಬ ಧ್ಯೇಯವಾಕ್ಯ ಪಾಲಿಸುತ್ತಿರುವ ಶಿಕ್ಷಕ ಎನಿಸಿರುವ ನಾಗಭೂಷನ್, ತುಂಬಾ ಹದಗೆಟ್ಟು, ಶಿಥಿಲಾವಸ್ಥೆಗೆ ತಲುಪಿದ್ದ ಶಾಲೆಯ ಗೋಡೆಗಳು, ಅರೆಬರೆ ಬಣ್ಣ, ಮಾಸಿದ ಹಂಚು, ಬಿದ್ದು ಹೋಗುವಂತಿದ್ದ ಶಾಲೆಯನ್ನು ಕೇವಲ ಆರೇ ತಿಂಗಳಲ್ಲಿ ಇಡೀ ಶಾಲೆಯ ಚಿತ್ರಣವನ್ನೇ ಬದಲಾಯಿಸಿದ್ದಾರೆ. ಇದನ್ನೂ ಓದಿ: ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಪವರ್ ಸ್ಟಾರ್

ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಹೊಂದಿರುವವರನ್ನು ನೋಡಬನ್ನಿ ನಮ್ಮೂರ ಶಾಲೆಯ ಚಂದವನ್ನು ಎಂದು ಖಾಸಗಿ ಶಾಲೆಯನ್ನು ನಾಚಿಸುವಂತೆ ಹೊಸ ರೂಪ ನೀಡಿ ಶಾಲೆಯನ್ನು ಮರು ನಿರ್ಮಾಣ ಮಾಡಿದ್ದಾರೆ. ಕನ್ನಡ ಶಿಕ್ಷಕರಾಗಿರುವ ನಾಗಭೂಷಣ್, ಶಾಲೆಯಲ್ಲಿ ಇಂಗ್ಲೀಷ್ ವಿಷಯ ಶಿಕ್ಷಕರಿಲ್ಲದ ಕಾರಣದಿಂದ ಇಂಗ್ಲೀಷ್ ಬೋಧನೆ ಮಾಡುತ್ತಿದ್ದಾರೆ. ಆರಂಭದಲ್ಲಿ ಈ ಶಾಲೆಯ ದುಸ್ಥಿತಿ ಕಂಡು ನಾಗಭೂಷಣ್ ರವರು ಆರು ತಿಂಗಳ ಹಿಂದೆ ಒಂದು ಕೊಠಡಿಯನ್ನು ದತ್ತು ಪಡೆದು, ತಮ್ಮ ಸ್ವಂತ ಜೇಬಿನಿಂದ ಸುಮಾರು 2 ಲಕ್ಷ ರೂಗಳನ್ನು ವಿನಿಯೋಗಿಸಿ, ಈ ಶಾಲೆಗೆ ಸುಸಜ್ಜಿತ ಡೆಸ್ಕ್ ಗಳು, ಟಿ.ವಿ, ಕಂಪ್ಯೂಟರ್, ವೈಟ್ ಬೋರ್ಡ್, ಟೇಬಲ್, ಕುರ್ಚಿ, ನೆಲಕ್ಕೆ ಟೈಲ್ಸ್ ಹೊದಿಕೆಯ ವ್ಯವಸ್ಥೆ ಸೇರಿದಂತೆ ಈ ಶಾಲೆಯ ಗೋಡೆಗಳನ್ನು ಬಣ್ಣ ಬಣ್ಣಗಳಿಂದ ಸಿಂಗರಿಸುವ ಮೂಲಕ ಆಕರ್ಷಣೆಗೊಳಿಸಿದ್ದರು.

chithradurga government School

ಈ ಕಾರ್ಯದಲ್ಲಿ ಸ್ಥಳೀಯ ಕಲಾವಿದರಾದ ವೀರೇಂದ್ರ ಅಂಬಲಗೆರೆ, ಶಿವಕುಮಾರ್ ಕಂದಿಕೆರೆ, ಶಾಲಾಭಿವೃದ್ಧಿ ಸಮಿತಿಯವರು, ಶಾಲೆಯ ವಿದ್ಯಾರ್ಥಿಗಳು ಸುಮಾರು 1 ಲಕ್ಷ ರೂ.ಗಳನ್ನು ಸಂಗ್ರಹಿಸಿ ಕೊಟ್ಟಿದ್ದು, ಈ ಹಣದಲ್ಲಿ ಇಡೀ ಶಾಲೆಯನ್ನು ಮರು ನಿರ್ಮಾಣ ಮಾಡಿದ್ದಾರೆ. ಈ ಕಾರ್ಯದಲ್ಲಿ ಕೋವಿಡ್ ಕಾರಣದಿಂದ ನಗರ ಬಿಟ್ಟು ಊರಿಗೆ ಮರಳಿದ್ದ ಹಲವು ಸ್ಥಳೀಯ ಯುವಕರು ಶಾಲೆಯ ಮರು ನಿರ್ಮಾಣಕ್ಕೆ ಕೈಜೋಡಿಸಿದ್ದು, ಸುಸ್ಥಿತಿಯಲ್ಲಿದ್ದ ಹಳೆಯ ಹಂಚುಗಳನ್ನು ಒಯ್ದು ತೊಳೆದು ತಂದು ಬಣ್ಣ ಹಚ್ಚಿ, ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಆವರಣದಲ್ಲಿನ ಕಸ-ಕಡ್ಡಿ ತೆಗೆದು ಸ್ವಚ್ಛಗೊಳಿಸಿದ್ದಾರೆ. ಇಂತಹ ಹಲವು ಕೆಲಸಗಳನ್ನು ಈ ಯುವಕರು ಮಾಡಿದ್ದು, ಗಾರೆ ಕೆಲಸದವರಿಗೆ ಮಾತ್ರ ನಾವು ಕೂಲಿ ಕೊಡಲಾಗಿದೆ ಎಂಬುದಾಗಿ ನಾಗಭೂಷಣ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರ ಮಾಡಿದ ತಪ್ಪನ್ನ ರಾಜ್ಯ ಸರ್ಕಾರವೂ ಮಾಡುತ್ತಿದೆ: ಕಿಮ್ಮನೆ ರತ್ನಾಕರ್

ಶಾಲೆಯಲ್ಲಿ ಕಲಿಕಾ ವ್ಯವಸ್ಥೆ ಸರಿಯಿಲ್ಲದಿದ್ದರೆ ಮಕ್ಕಳ ಮನಸ್ಸನ್ನು ಗೆಲ್ಲುವುದು ಅಸಾಧ್ಯ, ಎಂಬುದುನ್ನು ಅರಿತಿರುವ ನಾಗಭೂಷಣ್ ಮಕ್ಕಳಿಗೆ ಕಲಿಕೆಯಲ್ಲಿ ಸ್ವಯಂ ಆಸಕ್ತಿ ಮೂಡಿಸಲು ಅಗತ್ಯ ಕಲಿಕಾ ವಾತಾವರಣವೂ ಇರಬೇಕೆಂದು ತಮ್ಮ ಕುಟುಂಬಕ್ಕಿಂತಲೂ ಶಾಲೆಯನ್ನು ಹೆಚ್ಚಾಗಿ ಹಚ್ಚಿಕೊಂಡಿದ್ದಾರೆ. ಅವರ ಬಹುಪಾಲು ಸಮಯ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಪಾಲಾಗಿದೆ. ಇದರಿಂದ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದೂರದ ಅಂಬಲಗೆರೆ ಗ್ರಾಮದಿಂದ ನಗರದ ವಿವಿಧ ಖಾಸಗಿ ಶಾಲೆಗಳಿಗೆ ಹೋಗುತ್ತಿದ್ದ ಗ್ರಾಮದ ಬಹಳಷ್ಟು ಜನ ಮಕ್ಕಳನ್ನು ಪೋಷಕರು ಈ ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ.

TAGGED:CoronaCoronavirus ChitradurgaCovid 19government schoolPublic TVschoolteacherಕೊರೊನಾಕೋವಿಡ್ 19ಗೋಡೆಪಬ್ಲಿಕ್ ಟಿವಿಶಿಕ್ಷಕಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema Updates

GOUTHAMI JADAV
ಫ್ಯಾನ್ಸ್‌ಗೆ ಗುಡ್ ನ್ಯೂಸ್- ಮತ್ತೆ ಕಿರುತೆರೆಗೆ ಬಂದ ಗೌತಮಿ
8 minutes ago
upendra
ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ
24 minutes ago
Lokesh Kanagaraj 1
RRR ಚಿತ್ರದಂತೆ 3 ವರ್ಷ ಕಾಯಿಸಲ್ಲ: ‘ಕೂಲಿ’ ನಿರ್ದೇಶಕ ಲೋಕೇಶ್ ಕನಗರಾಜ್
1 hour ago
krithi shetty
‘ಡ್ರ್ಯಾಗನ್’ ಹೀರೋಗೆ ಜೊತೆಯಾದ ಕೃತಿ ಶೆಟ್ಟಿ- ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ಅಪ್‌ಡೇಟ್
2 hours ago

You Might Also Like

pm modi with soldiers
Latest

ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ

Public TV
By Public TV
47 minutes ago
Students Returned From Srinagar
Bengaluru City

ಪಾಕ್ ಶೆಲ್ ದಾಳಿ, ಯುದ್ಧದ ತೀವ್ರತೆಯ ಅನುಭವ ಬಿಚ್ಚಿಟ್ಟ ಕಾಶ್ಮೀರದಿಂದ ಮರಳಿದ ಕನ್ನಡಿಗ ವಿದ್ಯಾರ್ಥಿಗಳು

Public TV
By Public TV
52 minutes ago
security forces shopian encounter
Latest

ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

Public TV
By Public TV
1 hour ago
PM Modi
Bengaluru City

ಮೋದಿ ಮನೆ ಮೇಲೆ ಯಾಕೆ ಬಾಂಬ್ ಬೀಳ್ತಿಲ್ಲ – ಪ್ರಚೋದನಾಕಾರಿ ವಿಡಿಯೋ ಮಾಡಿದ್ದವ ಅರೆಸ್ಟ್

Public TV
By Public TV
2 hours ago
Man posing as PMO official held for seeking details on INS Vikrant
Crime

INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

Public TV
By Public TV
2 hours ago
Pahalgam Terrorist Poster by jammu police
Latest

ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?