Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಗೋಡೆ ಮೇಲೆ ನಿರ್ಮಾಣವಾಯ್ತು ಉಗಿಬಂಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಗೋಡೆ ಮೇಲೆ ನಿರ್ಮಾಣವಾಯ್ತು ಉಗಿಬಂಡಿ

Chitradurga

ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಗೋಡೆ ಮೇಲೆ ನಿರ್ಮಾಣವಾಯ್ತು ಉಗಿಬಂಡಿ

Public TV
Last updated: September 1, 2021 11:14 pm
Public TV
Share
2 Min Read
chithradurga government school 1
SHARE

ಚಿತ್ರದುರ್ಗ: ಸರ್ಕಾರಿ ಶಾಲೆಗಳೆಂದರೆ ಮೂಗುಮುರಿಯೋರೇ ಹೆಚ್ಚು. ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ ಅನ್ನೋ ಆರೋಪ ನಿರಂತರ. ಇಂತಹ ಸಾಂಪ್ರದಾಯಿಕ ಮಾತುಗಳನ್ನು ಹುಸಿ ಮಾಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅಂಬಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಯ ಮೇಲೆ ರೈಲೊಂದನ್ನು ಚಿತ್ರಿಸುವ ಮೂಲಕ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ.

chithradurga government school 2

ಅಂಬಲಗೆರೆ ಶಾಲೆಯ ಶಿಕ್ಷಕರಾದ ನಾಗಭೂಷಣ್ ಅವರು ತುಂಬಾ ಶ್ರಮವಹಿಸಿ, ತಮ್ಮ ಸ್ವಂತ ಹಣ ಖರ್ಚುಮಾಡಿ ಅಂಬಲಗೆರೆಯ ಸರ್ಕಾರಿ ಶಾಲೆಯನ್ನು ತುಂಬಾ ಸುಂದರವಾಗಿ ಬದಲಾವಣೆ ಮಾಡಿದ್ದಾರೆ. ಹಿರಿಯೂರು ತಾಲೂಕಿನ ಶಿವನಗರ ಗ್ರಾಮದವರಾದ ನಾಗಭೂಷಣ್ ರವರು ಬಹುಮುಖ ಪ್ರತಿಭೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಂಗಳಗುಡ್ಡದಿಂದ 2016ರಲ್ಲಿ ಈ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು. ಕಲಿಸದೇ ಎಣಿಸುವ ಸಂಬಳ ನನ್ನದಲ್ಲ ಎಂಬ ಧ್ಯೇಯವಾಕ್ಯ ಪಾಲಿಸುತ್ತಿರುವ ಶಿಕ್ಷಕ ಎನಿಸಿರುವ ನಾಗಭೂಷನ್, ತುಂಬಾ ಹದಗೆಟ್ಟು, ಶಿಥಿಲಾವಸ್ಥೆಗೆ ತಲುಪಿದ್ದ ಶಾಲೆಯ ಗೋಡೆಗಳು, ಅರೆಬರೆ ಬಣ್ಣ, ಮಾಸಿದ ಹಂಚು, ಬಿದ್ದು ಹೋಗುವಂತಿದ್ದ ಶಾಲೆಯನ್ನು ಕೇವಲ ಆರೇ ತಿಂಗಳಲ್ಲಿ ಇಡೀ ಶಾಲೆಯ ಚಿತ್ರಣವನ್ನೇ ಬದಲಾಯಿಸಿದ್ದಾರೆ. ಇದನ್ನೂ ಓದಿ: ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಪವರ್ ಸ್ಟಾರ್

ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಹೊಂದಿರುವವರನ್ನು ನೋಡಬನ್ನಿ ನಮ್ಮೂರ ಶಾಲೆಯ ಚಂದವನ್ನು ಎಂದು ಖಾಸಗಿ ಶಾಲೆಯನ್ನು ನಾಚಿಸುವಂತೆ ಹೊಸ ರೂಪ ನೀಡಿ ಶಾಲೆಯನ್ನು ಮರು ನಿರ್ಮಾಣ ಮಾಡಿದ್ದಾರೆ. ಕನ್ನಡ ಶಿಕ್ಷಕರಾಗಿರುವ ನಾಗಭೂಷಣ್, ಶಾಲೆಯಲ್ಲಿ ಇಂಗ್ಲೀಷ್ ವಿಷಯ ಶಿಕ್ಷಕರಿಲ್ಲದ ಕಾರಣದಿಂದ ಇಂಗ್ಲೀಷ್ ಬೋಧನೆ ಮಾಡುತ್ತಿದ್ದಾರೆ. ಆರಂಭದಲ್ಲಿ ಈ ಶಾಲೆಯ ದುಸ್ಥಿತಿ ಕಂಡು ನಾಗಭೂಷಣ್ ರವರು ಆರು ತಿಂಗಳ ಹಿಂದೆ ಒಂದು ಕೊಠಡಿಯನ್ನು ದತ್ತು ಪಡೆದು, ತಮ್ಮ ಸ್ವಂತ ಜೇಬಿನಿಂದ ಸುಮಾರು 2 ಲಕ್ಷ ರೂಗಳನ್ನು ವಿನಿಯೋಗಿಸಿ, ಈ ಶಾಲೆಗೆ ಸುಸಜ್ಜಿತ ಡೆಸ್ಕ್ ಗಳು, ಟಿ.ವಿ, ಕಂಪ್ಯೂಟರ್, ವೈಟ್ ಬೋರ್ಡ್, ಟೇಬಲ್, ಕುರ್ಚಿ, ನೆಲಕ್ಕೆ ಟೈಲ್ಸ್ ಹೊದಿಕೆಯ ವ್ಯವಸ್ಥೆ ಸೇರಿದಂತೆ ಈ ಶಾಲೆಯ ಗೋಡೆಗಳನ್ನು ಬಣ್ಣ ಬಣ್ಣಗಳಿಂದ ಸಿಂಗರಿಸುವ ಮೂಲಕ ಆಕರ್ಷಣೆಗೊಳಿಸಿದ್ದರು.

chithradurga government School

ಈ ಕಾರ್ಯದಲ್ಲಿ ಸ್ಥಳೀಯ ಕಲಾವಿದರಾದ ವೀರೇಂದ್ರ ಅಂಬಲಗೆರೆ, ಶಿವಕುಮಾರ್ ಕಂದಿಕೆರೆ, ಶಾಲಾಭಿವೃದ್ಧಿ ಸಮಿತಿಯವರು, ಶಾಲೆಯ ವಿದ್ಯಾರ್ಥಿಗಳು ಸುಮಾರು 1 ಲಕ್ಷ ರೂ.ಗಳನ್ನು ಸಂಗ್ರಹಿಸಿ ಕೊಟ್ಟಿದ್ದು, ಈ ಹಣದಲ್ಲಿ ಇಡೀ ಶಾಲೆಯನ್ನು ಮರು ನಿರ್ಮಾಣ ಮಾಡಿದ್ದಾರೆ. ಈ ಕಾರ್ಯದಲ್ಲಿ ಕೋವಿಡ್ ಕಾರಣದಿಂದ ನಗರ ಬಿಟ್ಟು ಊರಿಗೆ ಮರಳಿದ್ದ ಹಲವು ಸ್ಥಳೀಯ ಯುವಕರು ಶಾಲೆಯ ಮರು ನಿರ್ಮಾಣಕ್ಕೆ ಕೈಜೋಡಿಸಿದ್ದು, ಸುಸ್ಥಿತಿಯಲ್ಲಿದ್ದ ಹಳೆಯ ಹಂಚುಗಳನ್ನು ಒಯ್ದು ತೊಳೆದು ತಂದು ಬಣ್ಣ ಹಚ್ಚಿ, ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಆವರಣದಲ್ಲಿನ ಕಸ-ಕಡ್ಡಿ ತೆಗೆದು ಸ್ವಚ್ಛಗೊಳಿಸಿದ್ದಾರೆ. ಇಂತಹ ಹಲವು ಕೆಲಸಗಳನ್ನು ಈ ಯುವಕರು ಮಾಡಿದ್ದು, ಗಾರೆ ಕೆಲಸದವರಿಗೆ ಮಾತ್ರ ನಾವು ಕೂಲಿ ಕೊಡಲಾಗಿದೆ ಎಂಬುದಾಗಿ ನಾಗಭೂಷಣ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರ ಮಾಡಿದ ತಪ್ಪನ್ನ ರಾಜ್ಯ ಸರ್ಕಾರವೂ ಮಾಡುತ್ತಿದೆ: ಕಿಮ್ಮನೆ ರತ್ನಾಕರ್

ಶಾಲೆಯಲ್ಲಿ ಕಲಿಕಾ ವ್ಯವಸ್ಥೆ ಸರಿಯಿಲ್ಲದಿದ್ದರೆ ಮಕ್ಕಳ ಮನಸ್ಸನ್ನು ಗೆಲ್ಲುವುದು ಅಸಾಧ್ಯ, ಎಂಬುದುನ್ನು ಅರಿತಿರುವ ನಾಗಭೂಷಣ್ ಮಕ್ಕಳಿಗೆ ಕಲಿಕೆಯಲ್ಲಿ ಸ್ವಯಂ ಆಸಕ್ತಿ ಮೂಡಿಸಲು ಅಗತ್ಯ ಕಲಿಕಾ ವಾತಾವರಣವೂ ಇರಬೇಕೆಂದು ತಮ್ಮ ಕುಟುಂಬಕ್ಕಿಂತಲೂ ಶಾಲೆಯನ್ನು ಹೆಚ್ಚಾಗಿ ಹಚ್ಚಿಕೊಂಡಿದ್ದಾರೆ. ಅವರ ಬಹುಪಾಲು ಸಮಯ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಪಾಲಾಗಿದೆ. ಇದರಿಂದ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದೂರದ ಅಂಬಲಗೆರೆ ಗ್ರಾಮದಿಂದ ನಗರದ ವಿವಿಧ ಖಾಸಗಿ ಶಾಲೆಗಳಿಗೆ ಹೋಗುತ್ತಿದ್ದ ಗ್ರಾಮದ ಬಹಳಷ್ಟು ಜನ ಮಕ್ಕಳನ್ನು ಪೋಷಕರು ಈ ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ.

TAGGED:CoronaCoronavirus ChitradurgaCovid 19government schoolPublic TVschoolteacherಕೊರೊನಾಕೋವಿಡ್ 19ಗೋಡೆಪಬ್ಲಿಕ್ ಟಿವಿಶಿಕ್ಷಕಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
22 minutes ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
30 minutes ago
Cyber Crime
Bengaluru City

ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

Public TV
By Public TV
58 minutes ago
Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
9 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
9 hours ago
01 15
Big Bulletin

ಬಿಗ್‌ ಬುಲೆಟಿನ್‌ 21 February 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?