Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು?: ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಕ್ಕಳ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು?: ಸಿದ್ದರಾಮಯ್ಯ ಕಿಡಿ

Bengaluru City

ಮಕ್ಕಳ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು?: ಸಿದ್ದರಾಮಯ್ಯ ಕಿಡಿ

Public TV
Last updated: September 3, 2021 4:26 pm
Public TV
Share
3 Min Read
SIDDARAMAIHA
SHARE

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮಕ್ಕಳ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು ಎಂದು ಪ್ರಶ್ನಿಸಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ashwathnaryan 4 medium

ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, ಹೊಸ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

education school childrens medium

ಪತ್ರದಲ್ಲಿ ಏನಿದೆ?
ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

Education 1

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ದಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ. ಇದನ್ನೂ ಓದಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ಕನ್ನಡಕ್ಕೆ ಧಕ್ಕೆ ಇಲ್ಲ- ಅಶ್ವಥ್ ನಾರಾಯಣ

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ. ಮೊದಲನೇಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ.6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ. ಇದನ್ನೂ ಓದಿ: ನೂತನ ಶಿಕ್ಷಣ ನೀತಿಯಲ್ಲಿ ಸಂಶಯಗಳಿಗೆ ಎಡೆಯಿಲ್ಲ: ಅಶ್ವಥ್ ನಾರಾಯಣ್

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ, ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ? ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೇ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.

TAGGED:AshwathnarayankarnatakaNational Education PolicyPublic TVsiddaramaiahಕರ್ನಾಟಕಡಾ.ಅಶ್ವತ್ಥ್ ನಾರಾಯಣಪಬ್ಲಿಕ್ ಟಿವಿರಾಷ್ಟ್ರೀಯ ಶಿಕ್ಷಣ ನೀತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Saudi Aramco Ras Tanura
Latest

ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೋದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
4 minutes ago
F15 Jet 2
Latest

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌

Public TV
By Public TV
22 minutes ago
Umrah yathra pilgrims
Latest

ಇರಾನ್‌-ಇಸ್ರೇಲ್‌ ಯುದ್ಧ; ಉತ್ತರ ಕನ್ನಡ ಜಿಲ್ಲೆಯ 150 ಕ್ಕೂ ಹೆಚ್ಚು ಯಾತ್ರಿಕರ ಉಮ್ರಾ ಯಾತ್ರೆ ರದ್ದು

Public TV
By Public TV
1 hour ago
Keir Starmer Emmanuel Macron Friedrich Merz
Latest

ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

Public TV
By Public TV
2 hours ago
parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
2 hours ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?