Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿಕೆಶಿ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿಕೆಶಿ ಆಗ್ರಹ

Bengaluru City

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿಕೆಶಿ ಆಗ್ರಹ

Public TV
Last updated: September 8, 2021 3:21 pm
Public TV
Share
2 Min Read
DK SHIVAKUMAR 1
SHARE

ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರ್ಕಾರ ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು ಮೂರು ತಿಂಗಳ ಹಿಂದೆಯೇ ಹೇಳಿದ್ದರೆ, ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

GANESHA2

‘ಕೋವಿಡ್ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಈ ನಿಬರ್ಂಧ ಹೇರಿದರೆ ಅವರು ಎಲ್ಲಿಗೆ ಹೋಗಬೇಕು? ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಹೀಗಿರುವಾಗ ಈ ರೀತಿ ನಿರ್ಬಂಧ ಎಷ್ಟು ಸರಿ? ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಭಿಮನ್ಯು ಟೀಂಗೆ ಹೊಸ ಮೆಂಬರ್ ಎಂಟ್ರಿ- ಅಶ್ವತ್ಥಾಮ ಭವಿಷ್ಯದ ಕ್ಯಾಪ್ಟನ್!

‘ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿರುವುದು ದುರಾದೃಷ್ಟಕರ ಸಂಗತಿ. ಗಣೇಶ ಪ್ರತಿಮೆಯನ್ನು ಮನೆಯಲ್ಲಿ 2 ಅಡಿ, ಸಾರ್ವಜನಿಕ ಪ್ರದೇಶದಲ್ಲಿ 4 ಅಡಿಗೆ ಸೀಮಿತಗೊಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ಕುಟುಕಿದ್ದಾರೆ.

rcr ganesh festival 2 1

‘ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ ಗಣೇಶನ ಪ್ರತಿಮೆ 2-4 ಅಡಿಯೇ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ? ಹಿಂದೂ ಸಂಸ್ಕೃತಿ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ?’ ಎಂದು ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

‘ಸರ್ಕಾರ ಅಂತಿಮ ಗಳಿಗೆಯಲ್ಲಿ ಈ ನಿರ್ಧಾರ ತೆಗೆದುಕೊಂಡರೆ, ಈಗ ಮಾಡಿರುವ ಮೂರ್ತಿಗಳನ್ನು ನಿರ್ಧಾರ ಪ್ರಕಟಿಸಿರುವವರ ಮನೆ ಮುಂದೆ ಇಡಬೇಕಾ? ನಿರ್ಧಾರ ಪ್ರಕಟಿಸಿರುವವರೇ ಇವುಗಳನ್ನು ಖರೀದಿಸಲಿ ಎಂದು ಒತ್ತಾಯಿಸಿದ್ದಾರೆ.

rcr ganesh festival 2 6

ಸರಕಾರದ ಈ ತಿಕ್ಕಲುತನದ ನಿರ್ಧಾರ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತಿದೆ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: ಹೊಂದಾಣಿಕೆ ಕೊರತೆ, 8 ಸ್ಥಾನ ಕಳೆದುಕೊಂಡ ಕಾಂಗ್ರೆಸ್ – ಸತೀಶ್ ಆತ್ಮಾವಲೋಕನ

ನಾವು ಕೋವಿಡ್ ನಿಯಮದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ, ಸರ್ಕಾರದ ಅವೈಜ್ಞಾನಿಕ ತೀರ್ಮಾನ ಪ್ರಶ್ನಿಸುತ್ತಿದ್ದೇವೆ. ಈ ವೃತ್ತಿ ಅವಲಂಬಿಸಿರುವವರ ಬದುಕು ಬೀದಿ ಪಾಲಾಗಬಾರದು. ಗಣೇಶ ಹಬ್ಬಕ್ಕೆ ಇನ್ನು ಎರಡು ದಿನ ಕಾಲಾವಕಾಶ ಇದೆ. ಸರ್ಕಾರ ಈ ಅರ್ಥಹೀನ ನಿಬರ್ಂಧ ವಾಪಸ್ ಪಡೆಯಬೇಕು ಅಥವಾ ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು’ ಎಂದು ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

TAGGED:DK ShivakumarGanesh idolkannada newskarnatakaಕರ್ನಾಟಕಕಾಂಗ್ರೆಸ್ಗಣೇಶ ಚತುರ್ಥಿಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
15 minutes ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
20 minutes ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
37 minutes ago
Assistant Professor Annapoorna
Dharwad

ಅಂಡಮಾನ್‌ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಹೃದಯಾಘಾತಕ್ಕೆ ಬಲಿ

Public TV
By Public TV
56 minutes ago
Wilson Garden
Bengaluru City

ಗಂಡನ ಸೈಕೋ ವರ್ತನೆ ವಿರುದ್ಧ ದೂರು – ನಗ್ನ ಫೋಟೋ ತೆಗೆದು ಬ್ಲ್ಯಾಕ್‌ಮೇಲ್‌ ಅಂತ ಪತಿ ಪ್ರತಿದೂರು!

Public TV
By Public TV
1 hour ago
Chandrashekar Death
Crime

ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?