ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು

Public TV
1 Min Read
BJP 2

ಕೋಲ್ಕತ್ತಾ: ನಾವು ಪೊಲೀಸ್, ಮಾಫಿಯಾಗಳು ಮತ್ತು ಹಣದ ಶಕ್ತಿಯ ವಿರುದ್ಧ ಹೋರಾಡಬೇಕಾಗಿದೆ ಎಂದು ಬಂಗಾಳದ ಬಿಜೆಪಿ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

BJP Flag Final 6

ಬಂಗಾಳ ಉಪಚುನಾವಣೆಗೆ ಬಗ್ಗೆ ಸುವೇಂದು ಅಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭವಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ನಾವು ಆಡಳಿತ, ಪೊಲೀಸ್, ಮಾಫಿಯಾಗಳು ಮತ್ತು ಹಣದ ಶಕ್ತಿಯ ವಿರುದ್ಧ ಹೋರಾಡಬೇಕಾಗಿದೆ. ಒಂದು ವೇಳೆ ಈ ಚುನಾವಣೆಯಲ್ಲಿ ಶೇ.60-65ರಷ್ಟು ಮತದಾನ ನಡೆದರೆ ‘ಬಂಗಾಳದ ಮಗಳು’ ಪ್ರಿಯಾಂಕಾ ಟಿಬ್ರೆವಾಲ್ ವಿಜಯಶಾಲಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

FotoJet 10 6

ಬಿಜೆಪಿ ಅಭ್ಯರ್ಥಿ, ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸೆಪ್ಟೆಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ:  ಶ್ರೀಮಂತ ಪಾಟೀಲ್ ಹೇಳಿದ್ದು ಸತ್ಯ, ಎಸಿಬಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಿ :ಡಿಕೆಶಿ

ಹೊಸದಾಗಿ ನೇಮಕಗೊಂಡ ಗುಜರಾತ್ ಮುಖ್ಯಮಂತ್ರಿ ಕುರಿತು ಮಾತನಾಡಿದ ಅವರು, ಭೂಪೇಂದ್ರ ಪಟೇಲ್ ಅವರು ಗುಜರಾತ್‍ನ ಮುಖ್ಯಮಂತ್ರಿಯಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *