Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’

Bengaluru City

‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’

Public TV
Last updated: September 13, 2021 5:05 pm
Public TV
Share
2 Min Read
klr ramesh kumar
SHARE

– ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಆಕ್ರೋಶ
– ರಮೇಶ್ ಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು

ಬೆಂಗಳೂರು: “ಚಿಂತಾಮಣಿ ತಾಲೂಕಿನಲ್ಲಿ ನಡೆದ ಅಪಘಾತಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇರ ಹೊಣೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮರಿನಾಯಕನಹಳ್ಳಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಕುಮಾರ್ ಅವರನ್ನು ಟೀಕಿಸಿ ಬರೆದ ಪೋಸ್ಟ್ ಈಗ ಫೇಸ್‍ಬುಕ್, ವಾಟ್ಸಪ್‍ನಲ್ಲಿ ವೈರಲ್ ಆಗಿದೆ.

chikkaballapur accident web

ಪೋಸ್ಟ್ ನಲ್ಲಿ ಏನಿದೆ?
ಭಾನುವಾರ ಚಿಂತಾಮಣಿ ತಾಲ್ಲೂಕು ಮರಿನಾಯಕನಹಳ್ಳಿ ಗ್ರಾಮದ ಬಳಿ ನಡೆದಂತಹ 8 ಜನರ ಮರಣದ ಘೋರ ಅಪಘಾತ ಪ್ರಕರಣಕ್ಕೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಕುಮಾರ್ ರವರೆ ನೇರಹೊಣೆಗಾರರಾಗಿರುತ್ತಾರೆ.

ಒಂದು ತಿಂಗಳ ಹಿಂದೆ ಈ ಅಪಘಾತ ನಡೆದಂತಹ ಸ್ಥಳದಿಂದ ಕೆಲವೇ ಕೆಲವು ಕಿಲೋಮೀಟರ್ ಗಳ ಅಂತರದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಂತಹ ಚಿಂತಾಮಣಿ ಪೊಲೀಸರ ಕರ್ತವ್ಯವನ್ನು ರಮೇಶ್ ಕುಮಾರ್ ರವರು ತಡೆಯದೆ ಇದ್ದಿದ್ದರೆ, ಪೊಲೀಸರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸದೆ ಇದ್ದಿದ್ದರೆ, ಪೊಲೀಸರ ಮಕ್ಕಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ಅವರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡದೆ ಇದ್ದಿದ್ದರೆ ಮರಿನಾಯಕನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸುತ್ತಿರಲಿಲ್ಲ.

chikkaballapur accident 2 4

ರಮೇಶ್ ಕುಮಾರ್ ರವರು ಪೊಲೀಸರ ಬಗ್ಗೆ ಕೆಟ್ಟದಾಗಿ ಮಾತನಾಡಿದ ನಂತರ ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಪೊಲೀಸರನ್ನು ಕೆಟ್ಟ ರೀತಿಯಲ್ಲಿ ಬಿಂಭಿಸಿದ್ದರಿಂದ ಇನ್ನು ಮುಂದೆ ಪೊಲೀಸರು ರಸ್ತೆಗಳಲ್ಲಿ ದಂಡ ವಿಧಿಸುವುದಿಲ್ಲ ಎಂಬ ಕೆಟ್ಟ ಸಂದೇಶ ಸಾರ್ವಜನಿಕ ವಲಯದಲ್ಲಿ ರವಾನೆಯಾಗಿ ಮೇಲಿನ ಅಪಘಾತ ಪ್ರಕರಣದ ವಾಹನಗಳ ಚಾಲಕರು ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಕೊಂಡು, ಅಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತವನ್ನುಂಟು ಮಾಡಿ 8 ಜನ ಅಮಾಯಕ ಮರಣಕ್ಕೆ ಕಾರಣರಾಗಿರುತ್ತಾರೆ.

ಒಂದು ವೇಳೆ ರಮೇಶ್ ಕುಮಾರ್ ರವರು ಪೊಲೀಸರ ಕರ್ತವ್ಯವನ್ನು ಆ ದಿನ ತಡೆಯದೆ ಇದ್ದಿದ್ದರೆ, ಪೊಲೀಸರು ದಂಡವನ್ನು ಹಾಕುತ್ತಾರೆಂಬ ಭಯದಲ್ಲಿ ವಾಹನಗಳ ಚಾಲಕರು ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ವಾಹನಕ್ಕೆ ತುಂಬುತ್ತಿರಲ್ಲಿಲ್ಲ. ಅತಿವೇಗವಾಗಿ, ಅಜಾಗರೂಕತೆಯಿಂದ ವಾಹನಗಳು ಚಾಲನೆ ಮಾಡುತ್ತಿರಲಿಲ್ಲ. ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರು ಸಾಗಿಸಿದರೆ ಪೊಲೀಸರು ಕೇಳುತ್ತಾರೆಂದು ಅಷ್ಟು ಜನ ಪ್ರಯಾಣಿಕರನ್ನು ಸಹ ಕರೆದುಕೊಂಡು ಹೋಗುತ್ತಿರಲಿಲ್ಲ. ಆಗ ಈ ಒಂದು ಅಪಘಾತ ಸಂಭವಿಸುತ್ತಲೂ ಇರಲಿಲ್ಲ. 8 ಜನ ಅಮಾಯಕ ಪ್ರಜೆಗಳು ಸಾಯುತ್ತಿರಲಿಲ್ಲ. ಆದ್ದರಿಂದ ಈ ಒಂದು ಅಪಘಾತದ 8 ಜನರ ಸಾವಿಗೆ ರಮೇಶ್ ಕುಮಾರ್ ರವರೆ ನೇರ ಹೊಣೆಗಾರರಾಗಿರುತ್ತಾರೆ. ಇದನ್ನೂ ಓದಿ: ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ: ಹೆಚ್‍ಡಿಕೆ 

chikkaballapur accident 2 4

ಸಾರ್ವಜನಿಕರಿಗೆ ಕೆಟ್ಟ ಸಂದೇಶವನ್ನು ರವಾನೆ ಮಾಡಿ ಮೇಲ್ಕಂಡ ಅಪಘಾತಕ್ಕೆ ನೇರ ಹೊಣೆಗಾರರಾಗಿರುವ ಹಾಗೂ ಪೊಲೀಸರ ಬಗ್ಗೆ ಕೆಟ್ಟದಾಗಿ ಮಾತನಾಡಿ, ಅವರ ಮನೋಸ್ಥೈರ್ಯ ಕಳೆದುಕೊಳ್ಳುವಂತೆ ಮಾಡಿರುವ ರಮೇಶ್ ಕುಮಾರ್ ರವರು ಈ ಕೂಡಲೇ ಸಾಮಾಜಿಕ ಮಾಧ್ಯಮಗಳ ಮೂಲಕ ಪೊಲೀಸರಿಗೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮರಣ ಹೊಂದಿರುವ 8 ಜನರ ಆತ್ಮ ಹಾಗೂ ಅವರ ಕುಟುಂಬಗಳ ಶಾಪ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ಇದನ್ನೂ ಓದಿ: ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

ಪೆÇಲೀಸರು ಅವರ ಸ್ವಾರ್ಥಕ್ಕೆ ಅಥವಾ ಅವರ ಸಂಪಾದನೆಗೆ ದಂಡವನ್ನು ವಿಧಿಸುವುದಿಲ್ಲ. ಸಮಾಜದಲ್ಲಿ ಇಂತಹ ಅಪಘಾತ ಪ್ರಕರಣಗಳು ನಡೆಯಭಾರದೆಂಬ ಉದ್ದೇಶದಿಂದ ದಂಡವನ್ನು ಹಾಕುತ್ತಾರೆ.ವಾಹನ ಸವಾರರು ಅವರ ವಾಹನದ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಂಡಿದ್ದರೆ ಪೊಲೀಸರಿಗೆ ಏಕೆ ಹೆದರಬೇಕು? ಪೊಲೀಸರ ಜೊತೆ ಏಕೆ ವಾದ ವಿವಾದ ಆಗುತ್ತೆ? ಏಕೆ ದಂಡವನ್ನು ಕಟ್ಟ ಬೇಕಾಗತ್ತೆ? ದಯವಿಟ್ಟು ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು.

TAGGED:accidentChintamanipoliceRamesh Kumarroadಅಪಘಾತಚಿಂತಾಮಣಿಪೊಲೀಸ್ಬೆಂಗಳೂರುರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
32 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
43 minutes ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
1 hour ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
2 hours ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
3 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?