ಕಲಬುರಗಿ: ಗಣೇಶ ವಿಸರ್ಜನೆ ವೇಳೆ ನದಿಯಲ್ಲಿ ಮುಳಗಿ ಯುವಕ ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಅಂಕಲಗಾ ಗ್ರಾಮದಲ್ಲಿ ಇಂದು ಸಾಯಂಕಾಲ ನಡೆದಿದೆ.
ಗಿರೀಶ್ ಚಹ್ವಾಣ್(25) ಮೃತನಾಗಿದ್ದಾನೆ. ಗಣೇಶ ವಿಸರ್ಜನೆ ಮಾಡುವ ವೇಳೆ ನೀರಲ್ಲಿ ಮೃತನಾಗಿದ್ದಾನೆ. ಗಣೇಶ ಮುಳಗಿಸೋದಕ್ಕೆ ನದಿಯ ಒಳಗೆ ಗಿರೀಶ್ ತೆರಳಿದ್ದಾನೆ. ಆದರೆ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾದ ಹಿನ್ನಲೆ ನದಿಯಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಇದನ್ನೂ ಓದಿ: ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್ಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ
ಸ್ಥಳಕ್ಕೆ ನೆಲೋಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಾಳೆ ಬೆಳಗ್ಗೆ ಅಗ್ನಿಶಾಮಕದಳದ ಅಧಿಕಾರಿಗಳು ಸಹ ನೀರಿನಲ್ಲಿ ಕೊಚ್ಚಿ ಹೋದ ಯುವಕನಿಗಾಗಿ ಶೋಧ ನಡೆಸಲ್ಲಿದ್ದಾರೆ.