Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ

Bengaluru City

ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ

Public TV
Last updated: September 16, 2021 4:02 pm
Public TV
Share
4 Min Read
hdk session
SHARE

ಬೆಂಗಳೂರು: ಬೆಲೆ ಏರಿಕೆ ನಿರಂತರ ಪ್ರಕ್ರಿಯೆ, ಯಾವುದೇ ಸರ್ಕಾರ ಇದ್ದರೂ ಬೆಲೆ ಏರಿಕೆ ಅನಿವಾರ್ಯ. ಸರ್ಕಾರ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಬೆಲೆ ಏರಿಕೆ ಮಾಡಲೇಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಈ ಕುರಿತು ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ನಿರಂತರ ಪ್ರಕ್ರಿಯೆ, ಸರ್ಕಾರದ ಆರ್ಥಿಕ ಪರಿಸ್ಥಿತಿ ಸುಧಾರಿಸಲು, ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು, ಹಣ ಹೊಂದಿಸಲಿಕ್ಕೆ ಕೆಲವು ಸಂದರ್ಭಗಳಲ್ಲಿ ಬೆಲೆ ಏರಿಕೆ ಮಾಡುವ ಅನಿವಾರ್ಯ ಸಂದರ್ಭಗಳು ಬರುವುದು ಸಹಜ. ಸರ್ಕಾರ ಬೆಲೆ ಏರಿಕೆ ಮಾಡಿದಾಗ ವಿರೋಧ ಪಕ್ಷಗಳು ಹೋರಾಟ, ಪ್ರತಿಭಟನೆ ಮಾಡುವುದು ಸಹ ನಿರಂತರ ಪ್ರಕ್ರಿಯೆ. ಹಲವು ದಿನಗಳಿಂದ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಗಮನ ಸೆಳೆದಿದ್ದಾರೆ ಎಂದರು.

ಒಂದು ವರ್ಗದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಲ್ಲ, ಆದರೆ ಚಿಕ್ಕ ಪುಟ್ಟ ಕೆಲಸ ಮಾಡೋರಿಗೆ ಬದುಕು ಕಷ್ಟ ಆಗುತ್ತೆ. ಉತ್ತರ ಕರ್ನಾಟಕ ಪ್ರವಾಹದ ವೇಳೆ ಬೆಳೆ ಹಾನಿ, ಮೂಲಭೂತ ಸೌಲಭ್ಯಗಳು ನಷ್ಟ ಆಯಿತು. ಇದನ್ನೆಲ್ಲ ಸರಿಪಡಿಸುವ ಹೊಣೆ ಸರ್ಕಾರದ ಮೇಲೆ ಬಿತ್ತು. ಇದರ ಮಧ್ಯೆ ಕೊರೊನಾ ಹಾಗೂ ಲಾಕ್‍ಡೌನ್ ತೀವ್ರ ನಷ್ಟವಾಯಿತು. ಕೊರೊನಾ ಲೋಪದೋಷಗಳ ಬಗ್ಗೆ ಮಾತಾಡಲ್ಲ. ಜನರ ಬದುಕು ಸರಿಪಡಿಸುವುದು ಮುಖ್ಯ ಎಂದು ತಿಳಿಸಿದರು. ಇದನ್ನೂ ಓದಿ:  ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ : ಸಾ.ರಾ ಮಹೇಶ್

ಬೆಲೆ ಏರಿಕೆ ನೆಪದಲ್ಲಿ ರಾಜಕೀಯ ಸರಿಯಲ್ಲ, ಜನರ ಬದುಕಿಗೆ ಬೆಲೆ ಏರಿಕೆ ಹೊರೆಯಾಗಿದೆ. ತೆರಿಗೆ ರೂಪದಲ್ಲಿ ಬರುತ್ತಿರುವ ಹಣ ಬಳಕೆ ಮಾಡಿಕೊಳ್ಳೋದು ಮುಖ್ಯ. ಬಡ ವರ್ಗದ ಜನರ ಮನೆಗೆ ಬೆಂಕಿ ಬಿದ್ದಿದೆ. ಅವರ ಬದುಕು ಕಷ್ಟದಲ್ಲಿದೆ, ಉರಿಯುವ ಮನೆಯಲ್ಲಿ ಗಳ ಹಿರಿಯುವುದು ಸರಿಯೇ? ಅಂತಹ ವರ್ಗದ ಜನರ ಮೇಲೆ ತೆರಿಗೆ ಹಾಕಿದರೆ ಹೇಗೆ ಎಂದು ಪ್ರಶ್ನಿಸಿದರು.

ಪ್ರತಿ ವರ್ಷ ಬಡವರು ವಿವಿಧ ರೂಪದಲ್ಲಿ ಒಂದು ಲಕ್ಷ ತೆರಿಗೆ ಕಟ್ಟುತ್ತಾರೆ. ಸಿದ್ದರಾಮಯ್ಯ ಇದೇ ವಿಚಾರವಾಗಿ ಮಾತನಾಡಿದ್ದಾರೆ. ಅಂತಹ ಬಡವರ ಬದುಕು ಕಟ್ಟಿ ಕೊಡಬೇಕು. ಇದು ಸರ್ಕಾರದ ಮುಖ್ಯ ಆದ್ಯತೆ ಆಗಬೇಕು. ಬೇರೆ ಯೋಜನೆಗಳಿಗೆ ಸಾವಿರಾರು ಕೋಟಿ ಖರ್ಚು ಮಾಡುತ್ತೀರಿ, ಆ ಯೋಜನೆಗಳನ್ನು ಸದ್ಯಕ್ಕೆ ಬದಿಗಿಡಿ, ಬಡವರ ಬದುಕು ಕಟ್ಟಿ ಕೊಡುವ ಕೆಲಸಮಾಡಿ. ಸದನದಲ್ಲಿ ಒಂದು ತೀರ್ಮಾನ ಮಾಡಿ, ಬೆಲೆ ಏರಿಕೆ ಮೂಲಕ ಬಡವರ ಜೇಬಿಗೇ ಕೈ ಹಾಕಿದ್ದೀರಿ, ಇದನ್ನು ತಡೆಯಲು ಒಂದು ನಿರ್ಧಾರ ಸದನದಲ್ಲಿ ಆಗಬೇಕು ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ

ಆಸ್ಪತ್ರೆಗಳಲ್ಲಿ ಚಿಕಿತ್ಸೆ ದುಬಾರಿಯಾಗಿದೆ, ಜನ ಆಸ್ಪತ್ರೆಗಳಿಗೆ ಲಕ್ಷಾಂತರ ರೂಪಾಯಿ ಸುರಿಯುತ್ತಿದ್ದಾರೆ. ಜನರ ಮೇಲೆ ಹೊರೆ ಹೆಚ್ಚಾಗಿದೆ, ಇದನ್ನು ಸರಿಪಡಿಸುವುದರತ್ತ ನಾವು ಗಮನ ಕೊಡಬೇಕು. ಫುಡ್ ಡೆಲಿವರಿ ಬಾಯ್, ಓಲಾ ಊಬರ್ ಚಾಲಕರು ಹೇಗೆ ಬದುಕಬೇಕು ಎಂದು ಪ್ರಶ್ನಿಸಿದರು.

ಅಮೃತ ಯೋಜನೆ ಮುಂದಕ್ಕೆ ಹಾಕಿ, ರಾಜ್ಯದಲ್ಲಿ ಕಡುಬಡವರಿಗೆ ಎರಡು ಹೊತ್ತು ಊಟಕ್ಕೆ ಗತಿ ಇಲ್ಲದಂತಾಗಿದೆ. ತೆರಿಗೆ ಸಂಗ್ರಹದಿಂದ ಬಂದ ಆದಾಯದಲ್ಲಿ ಬಡವರ ಹೊಸ ಬದುಕು ಕಟ್ಟಲು ಆದ್ಯತೆ ನೀಡಿ, ಖಾಸಗಿ ಶಾಲೆಗಳಲ್ಲಿ 17,000 ವಾಹನಗಳ ಚಾಲಕರಿದ್ದಾರೆ. ಅವರಿಗೆ ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಕೆಲಸ ಇಲ್ಲ, ಸಂಬಳ ಇಲ್ಲ, ಬ್ಯಾಂಕ್ ಕಾಟದಿಂದ ಊಟಕ್ಕೆ ಏನು ಮಾಡಬೇಕು ಅವರು? ಇಂತಹ ಸಂಕಷ್ಟದಲ್ಲಿ ಇರುವ ವರ್ಗಕ್ಕೆ ಏನು ಮಾಡಬೇಕು ಎಂದು ಸದನದಲ್ಲಿ ತೀರ್ಮಾನ ಮಾಡಿ ಎಂದು ಸಲಹೆ ನೀಡಬೇಕು.

ಬೀದಿ ಬದಿ ವ್ಯಾಪಾರಿಗಳು, ಸಣ್ಣ ಅಂಗಡಿಗಳು, ಮಾಲ್ ಸಿಬ್ಬಂದಿ, ಥಿಯೇಟರ್ ಮುಚ್ಚಿವೆ, ಲಕ್ಷಾಂತರ ಕುಟುಂಬಗಳ ಬದುಕು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಜನರ ಬದುಕು ಸರಿಪಡಿಸಿ, ಅಮೃತ ಯೋಜನೆ ನಿಲ್ಲಿಸಿ, ಈ ವರ್ಷ ಕೋವಿಡ್ ವರ್ಷ ಎಂದು ಘೋಷಿಸಿ, ಜನರ ಬದುಕು ಸರಿಪಡಿಸುವ ಕೆಲಸ ಮಾಡಿ. ಪಕ್ಕದ ರಾಜ್ಯಗಳನ್ನು ಮಾದರಿಯಾಗಿ ತಗೋಬೇಡಿ, ತಮಿಳುನಾಡು 3 ರೂ. ಸೆಸ್ ಕಡಿಮೆ ಮಾಡಿರಬಹುದು, ನಮ್ಮ ರಾಜ್ಯ ಬೇರೆ ರಾಜ್ಯಗಳಿಗೆ ಮಾದರಿ ಆಗಬೇಕು, ಶಾಶ್ವತ ಪರಿಹಾರ ಹುಡುಕಿ ಎಂದು ಆಗ್ರಹಿಸಿದರು.

2002ರಲ್ಲಿ ಎನ್‍ಡಿಎ ಸರ್ಕಾರ ಇದ್ದಾಗ ಆಯಿಲ್ ಬಾಂಡ್ ಆರಂಭ ಆಯಿತು. ನಂತರ ನಿರಂತರವಾಗಿ ನಡೆದುಕೊಂಡು ಬಂತು. ಪ್ರಧಾನಿ ಮೋದಿಯವರು ಮುಂದಿನ ಮಾರ್ಚ್ ವರೆಗೆ 20 ಸಾವಿರ ಕೋಟಿ ಕಟ್ಟಬೇಕು. ಇಲ್ಲಿಯವರೆಗೆ ಆಯಿಲ್ ಬಾಂಡ್ 80 ಸಾವಿರ ಕೋಟಿ ಬಡ್ಡಿ ಕಟ್ಟಿದ್ದಾರೆ. ಆದರೆ ಕಾರ್ಪೊರೇಟ್ ಕಂಪನಿಗಳಿಗೆ ಶೇ.27ರಷ್ಟು ತೆರಿಗೆ ವಿನಾಯಿತಿ ನೀಡಿದರು ಅಂತಾರೆ, ಇನ್ನು ಕೆಲವರು ಶೇ.40ರಷ್ಟು ತೆರಿಗೆ ವಿನಾಯಿತಿ ಕೊಟ್ಟರು ಅಂತಾರೆ. ಕಾರ್ಪೊರೇಟ್ ಸಂಸ್ಥೆಗಳಿಗೆ 1 ಲಕ್ಷ ಕೋಟಿ ಲಾಭ ಕೊಟ್ಟಿದ್ದಾರೆ ಮೋದಿ, ಯಾರು ಅವರಿಗೆ ಈ ಸಲಹೆ ಕೊಟ್ಟರೋ ಗೊತ್ತಿಲ್ಲ. ಆದರೆ ಇನ್ನೊಂದು ಕಡೆ ಬಡವರಿಂದ 3.9 ಲಕ್ಷ ಕೋಟಿ ತೆರಿಗೆ ವಸೂಲಾಗಿದೆ. ಜನ ತಮ್ಮ ಆದಾಯದ ಶೇ.45ರಷ್ಟು ಚಿನ್ನ, ಮನೆ, ಸೈಟ್ ಕೊಳ್ಳಲು, ಮದುವೆಗೆ ಉಳಿಸಿರುತ್ತಾರೆ. ಆದರೆ ಕೋವಿಡ್ ಬಂದಮೇಲೆ ಈ ಉಳಿಕೆ ಹಣವನ್ನು ಆಸ್ಪತ್ರೆಗೆ ಸುರಿದಿದ್ದಾರೆ ಎಂದರು.

TAGGED:assemblybengaluruhd kumaraswamyprice hikePublic TVsessionಅಧಿವೇಶನಎಚ್ ಡಿ ಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರುಬೆಲೆ ಏರಿಕೆವಿಧಾನಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
19 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
24 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
39 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
39 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
53 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?