Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಉಪನಾಯಕನ ಪಟ್ಟದಿಂದ ಕೆಳಗಿಳಿಸಿ – ರೋಹಿತ್ ಬಗ್ಗೆ ಕೊಹ್ಲಿ ಮಾತು

Public TV
Last updated: September 17, 2021 4:47 pm
Public TV
Share
2 Min Read
eng ind t20 virat kohli rohit sharma
SHARE

ಮುಂಬೈ: ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾಗೆ ಅವರಿಗೆ ಸಿಗಬಾರದು ಎಂಬ ಕಾರಣಕ್ಕೆ ವಿರಾಟ್ ಕೊಹ್ಲಿ ನಾಯಕತ್ವ ಪಟ್ಟದಿಂದ ಕೆಳಗಡೆ ಇಳಿದ್ರಾ ಎಂಬ ಪ್ರಶ್ನೆ ಈಗ ಎದ್ದಿದೆ.

KOHLI A

ಈ ಬಾರಿಯ ಟಿ20 ವಿಶ್ವಕಪ್ ಬಳಿಕ ನಾಯಕತ್ವದಿಂದ ಕೆಳಗಿಳಿಯುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದು, ಇದು ತಂಡದಲ್ಲಿರುವ ಯುವಕರಿಗೆ ಪ್ರಾಶಸ್ತ್ಯ ಸಿಗಲು ಮತ್ತು ರೋಹಿತ್ ಶರ್ಮಾರನ್ನು ಏಕದಿನ ತಂಡದ ಉಪನಾಯಕನ ಪಟ್ಟದಿಂದ ಕೆಳಗಡೆ ಇಳಿಸಲು ಮಾಡಿದ ತಂತ್ರ ಎಂಬ ಚರ್ಚೆ ಈಗ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ಟಿ20 ವಿಶ್ವಕಪ್ ಬಳಿಕ ಟಿ20 ನಾಯಕತ್ವ ತ್ಯಜಿಸುತ್ತೇನೆಂದ ವಿರಾಟ್ ಕೊಹ್ಲಿ

Virat Kohli KL Rahul

ಭಾರತ ಏಕದಿನ ತಂಡದ ನಾಯಕ ಹಾಗೂ ಉಪನಾಯಕರಾಗಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರ ನಡುವೆ ಎಲ್ಲವೂ ಸರಿಯಿಲ್ಲ ಭಿನ್ನಭಿಪ್ರಾಯವಿದೆ ಎಂಬ ಸುದ್ದಿ ಕ್ರಿಕೆಟ್ ಲೋಕದಲ್ಲಿ ಪದೇ, ಪದೇ ಕೇಳಿಸುತ್ತಿತ್ತು. ಇಬ್ಬರು ಭಾರತದ ದಿಗ್ಗಜ ಕ್ರಿಕೆಟಿಗರು. ಆದರೂ ಕೆಲ ವಿಷಯದಲ್ಲಿ ಇಬ್ಬರಿಗೂ ಹೊಂದಾಣಿಕೆಯ ಕೊರತೆ ಇದೆ ಎಂಬ ಸುದ್ದಿ ಕ್ರಿಕೆಟ್ ಅಂಗಳದಲ್ಲಿ ಹರಿದಾಡುತಿತ್ತು. ನಿನ್ನೆ ಟಿ20 ವಿಶ್ವಕಪ್ ಬಳಿಕ ನಾಯಕನ ಪಟ್ಟ ತ್ಯಜಿಸುವ ಕುರಿತು ಹೇಳಿರುವ ವಿರಾಟ್, ಮುಂದಿನ ನಾಯಕನಾಗಿ ರೋಹಿತ್ ಹೆಸರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಪ್ರಮುಖ ಅಂಶ ಇದೀಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಡೆಲ್ಲಿ ನಾಯಕನಾಗಿ ಪಂತ್ ಮುಂದುವರಿಕೆ

kohli 1

ಕೊಹ್ಲಿ ಕೋಚ್ ಹಾಗೂ ಭಾರತ ಕ್ರಿಕೆಟ್ ಸಮಿತಿಯೊಂದಿಗೆ ಚರ್ಚೆ ನಡೆಸಿ ಯುವ ಕ್ರಿಕೆಟಿಗರನ್ನು ತಂಡದಲ್ಲಿ ಬೆಳೆಸುವ ನಿಟ್ಟಿನಲ್ಲಿ, ಈಗಾಗಲೇ ತಂಡದಲ್ಲಿರುವ ಸಾಕಷ್ಟು ಯುವ ಕ್ರಿಕೆಟಿಗರಲ್ಲಿ ಒಬ್ಬರಿಗೆ ತಂಡದ ಉಪನಾಯಕನ ಪಟ್ಟ ಕಟ್ಟಿ ಮುಂದಿನ ನಾಯಕನನ್ನು ಬೆಳೆಸುವ ಇರಾದೆಯಲ್ಲಿದ್ದಾರೆ. ಈಗಾಗಲೇ ರೋಹಿತ್ ಶರ್ಮಾಗೆ 34 ವರ್ಷ. ಏಕದಿನ ತಂಡದ ಭವಿಷ್ಯದ ಹಿತ ದೃಷ್ಟಿಯಿಂದ ಉಪನಾಯಕನ ಪಟ್ಟಕ್ಕೆ ಕಡಿಮೆ ವಯಸ್ಸಿನ ಬೇರೆ ಆಟಗಾರನಿಗೆ ಅವಕಾಶ ನೀಡಬೇಕು ಎಂಬ ಮಹತ್ತರವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಿಸಿಸಿಐ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

Rohit Sharma Virat Kohli

ಮುಂದಿನ ಏಕದಿನ ವಿಶ್ವಕಪ್ ವೇಳೆಗೆ ಕೊಹ್ಲಿ ಭಾರತ ತಂಡದ ನಾಯಕರಾಗಿರುವ ಬಗ್ಗೆ ಅವರಿಗೆ ಅನುಮಾನವಿದೆ. ಒಂದು ವೇಳೆ ನಾಯಕನ ಬದಲಾವಣೆ ಬಯಸಿದರೆ ಆ ಸ್ಥಾನಕ್ಕೆ ರೋಹಿತ್ ಶರ್ಮಾ ಉತ್ತಮ ಆಯ್ಕೆಯಾಗಲಿದ್ದಾರೆ. ಹೀಗಾಗಿ ಅವರನ್ನು ಟಿ20 ನಾಯಕನಾಗಿಸಿ, ಕೆಎಲ್.ರಾಹುಲ್ ರನ್ನು ಉಪನಾಯಕನ ಪಟ್ಟಕ್ಕೆ ಕೂರಿಸಿದರೆ ತಮ್ಮ ಸ್ಥಾನಕ್ಕೆ ಕುತ್ತು ಬರುವುದಿಲ್ಲ ಜೊತೆಗೆ ಇನ್ನೊಬ್ಬ ನಾಯಕನನ್ನು ಬೆಳೆಸಿದಂತಾಗುತ್ತದೆ ಎನ್ನುವುದು ಕೊಹ್ಲಿಯ ಆಲೋಚನೆ ಎನ್ನುವುದು ಈ ವರದಿಯ ತಿರುಳು.

ಈ ಸುದ್ದಿ ನಿಜವೋ ಸತ್ಯ ಎನ್ನುವುದು ತಿಳಿದು ಬಂದಿಲ್ಲ. ಮುಂದಿನ ದಿನಗಳಲ್ಲಿ ಸತ್ಯ ಹೊರ ಬರುವ ಸಾಧ್ಯತೆಯಿದೆ. ಈ ಹಿಂದೆ ವಿರಾಟ್ ಕೊಹ್ಲಿ ನಾಯಕ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂಬ ಸುದ್ದಿ ಪ್ರಕಟವಾದಗಲೂ ಬಿಸಿಸಿಐ ವರದಿಯನ್ನು ತಿರಸ್ಕರಿಸಿತ್ತು. ಆದರೆ ಗುರುವಾರ ಕೊಹ್ಲಿಯೇ ಎಲ್ಲ ಅಂತೆ ಕಂತೆ ಸುದ್ದಿಗಳಿಗೆ ತೆರೆ ಎಳೆದಿದ್ದರು.

dhoni kohli

ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಮ್ ವಾತಾವರಣ ಸರಿ ಇಲ್ಲ ಎಂಬ ಮಾತು ಈ ಹಿಂದಿನಿಂದಲೇ ಕೇಳಿ ಬರುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕೆಲ ಬದಲಾವಣೆಗಳು ಆಗುತ್ತಿದ್ದು ಅಚ್ಚರಿಯ ಬೆಳವಣಿಗೆಯಲ್ಲಿ ಧೋನಿ ಟೀಂ ಇಂಡಿಯಾದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಧೋನಿ ಬಗ್ಗೆ ಎಲ್ಲ ಆಟಗಾರರ ಬಗ್ಗೆ ಗೌರವವಿದೆ. ಆಟಗಾರರ ನಡುವೆ ಭಿನ್ನಾಭಿಪ್ರಾಯಗಳಿದ್ದರೂ ಧೋನಿ ಎಲ್ಲವನ್ನೂ ಸರಿ ಮಾಡಬಹುದು. ಈ ಕಾರಣಕ್ಕೆ ಬಿಸಿಸಿಐ ಧೋನಿಯನ್ನು ಮೆಂಟರ್ ಆಗಿ ನೇಮಕ ಮಾಡಿದೆ ಎಂಬ ವಿಶ್ಲೇಷಣೆ ಈಗ ಕೇಳಿ ಬಂದಿದೆ.

 

TAGGED:bccicricketrohith sharmavirat kohliಕ್ರಿಕೆಟ್ಬಿಸಿಸಿಐರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema Updates

Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
24 minutes ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
49 minutes ago
Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
5 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
13 hours ago

You Might Also Like

Siddaramaiah DK Shivakumar
Bengaluru City

ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ

Public TV
By Public TV
5 minutes ago
Pakistan Spy 1
Latest

ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

Public TV
By Public TV
14 minutes ago
Siddaramaiah BK Hariprasad 2
Bengaluru City

ಎರಡು ದಶಕಗಳ ಮುನಿಸಿಗೆ ಬ್ರೇಕ್‌ – ಹರಿಪ್ರಸಾದ್‌ ನಿವಾಸದಲ್ಲಿ ಉಪಹಾರ ಸವಿದ ಸಿಎಂ

Public TV
By Public TV
32 minutes ago
KRS 2 1
Districts

ಕೆಆರ್‌ಎಸ್ ಡ್ಯಾಂನಲ್ಲಿ ಮೂರೇ ದಿನಕ್ಕೆ 9 ಅಡಿ ನೀರು ಏರಿಕೆ

Public TV
By Public TV
45 minutes ago
Shivaraj Tangadagi
Bengaluru City

ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ – ಶಿವರಾಜ ತಂಗಡಗಿ

Public TV
By Public TV
48 minutes ago
Bidar Accident
Bidar

ಲಾರಿಗಳ ನಡುವೆ ಭೀಕರ ಅಪಘಾತ – ಬೀದರ್ ಮೂಲದ ಚಾಲಕ ಸಾವು

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?