ಚಂಡೀಗಢ: ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಉಂಟಾದ ದಿಢೀರ್ ನಾಯಕತ್ವ ಬದಲಾವಣೆ ಬಳಿಕ ಇದೀಗ ನೂತನ ಸಿಎಂ ಆಗಿ ಸುಖ್ಜಿಂದರ್ ಸಿಂಗ್ ರಂಧಾವಾ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮೂರು ಬಾರಿ ಶಾಸಕರಾಗಿದ್ದ ಸುಖ್ಜಿಂದರ್ ಸಿಂಗ್ ರಂಧಾವಾ ನವಜೋತ್ ಸಿಂಗ್ ಸಿಧು ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ನಾಯಕರಾಗಿದ್ದರು, ಪಂಜಾಬ್ನಲ್ಲಿ ಸಿಧು ನಾಯಕತ್ವಕ್ಕೆ ಅಮರೀಂದರ್ ಸಿಂಗ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಸಿಧು ಆಪ್ತ ಸುಖ್ಜಿಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆಗಾಗ ‘ಸಿಕ್ಸರ್’ ಹೇಳಿಕೆ ನೀಡಿ ಕೊನೆಗೂ ಕ್ಯಾಪ್ಟನನ್ನು ಕೆಳಗೆ ಇಳಿಸಿದ ಸಿಧು
ಪಂಜಾಬ್ ಕಾಂಗ್ರೆಸ್ನಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿತ್ತು. ನಿನ್ನೆ ಕಡೆಗೂ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಬಳಿಕ ಸಿಎಂ ರೇಸ್ನಲ್ಲಿ ಪ್ರಬಲ ಅಭ್ಯರ್ಥಿಯಾಗಿ ನವಜೋತ್ ಸಿಂಗ್ ಸಿಧು ಹೆಸರು ಕೇಳಿಬಂದಿದೆ. ಈ ನಡುವೆ ಅಚ್ಚರಿಯ ಹೆಸರೆಂಬಂತೆ ಸುನಿಲ್ ಜಾಖರ್ ಅವರ ಹೆಸರು ಹರಿದಾಡುತ್ತಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಸುಖ್ಜಿಂದರ್ ಸಿಂಗ್ ಕಡೆಗೆ ಒಲವು ವ್ಯಕ್ತಪಡಿಸಿ ಅಂತಿಮ ಘೋಷಣೆಗೆ ಸಿದ್ಧತೆ ನಡೆಸಿದೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟಿಗೆ ಟ್ವೀಟ್ ಮಾಡಿದ್ದ ರಾಜಸ್ಥಾನ ಸಿಎಂ ಒಎಸ್ಡಿ ರಾಜೀನಾಮೆ!