Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

Public TV
Last updated: September 20, 2021 12:04 pm
Public TV
Share
3 Min Read
SHAFAMILY SUICIDE NKAR MADHUSAGAR
SHARE

– ನಮ್ಮಪ್ಪನಿಗೆ ಐವರು ಮಹಿಳೆಯರ ಜೊತೆಯಿದೆ ಸಂಬಂಧ
– ಅಮ್ಮನ ಬಾಯಲ್ಲಿ ಚಪ್ಪಲಿಯಿಟ್ಟು ಅವಮಾನಿಸ್ತಿದ್ದ
– ಸಹೋದರಿಯರ ಜೀವನ ಹಾಳಾಗಲು ಅಪ್ಪನೇ ಕಾರಣ
– 3 ಕೋಟಿಯ ಮನೆ ಸೋರುತ್ತಿದೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐವರ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಆತ್ಮಹತ್ಯೆಗೂ ಮುನ್ನ ಮಕ್ಕಳು ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಡೆತ್ ನೋಟ್ ನಲ್ಲಿ ಮಕ್ಕಳು ಅಪ್ಪ ಶಂಕರ್ ವಿರುದ್ಧ ಗಂಭೀರ ಆರೋಪಗಳ ಸುರಿಮಳೆಗೈದಿದ್ದಾರೆ.

FAMILY SUICIDE 3 1

ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್ ಹಾಗೂ ಕುಡುಕ ಎಂದು ಮೃತ ಪುತ್ರ ಮಧುಸಾಗರ್ ಆರೋಪಿಸಿದ್ದಾರೆ. ನಮ್ಮಪ್ಪನಿಗೆ ಐವರು ಮಹಿಳೆಯರೊಂದಿಗೆ ಸಂಬಂಧ ಇತ್ತು. ಅಲ್ಲದೆ ಅಕ್ರಮ ಸಂಬಂಧ ಹೊಂದಿರುವ ಮಹಿಳೆಯ ಮಗಳನ್ನು ಮದುವೆಯಾಗುವಂತೆ ನನ್ನನ್ನು ಪೀಡಿಸುತ್ತಿದ್ದನು. ಕುಡಿದು ಬಂದು ಅಮ್ಮನಿಗೆ ಹೊಡೆಯುತ್ತಿದ್ದನು ಎಂದೆಲ್ಲಾ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.  ಇದನ್ನೂ ಓದಿ: ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

FAMILY SUICIDE 13

ಡೆತ್ ನೋಟ್ ನಲ್ಲೇನಿದೆ..?
ನನ್ನ ತಂದೆ ಸ್ಯಾಡಿಸ್ಟ್, ಕಾಮುಕ. ತಂದೆ ಶಂಕರ್‍ಗೆ ಐವರು ವಿವಾಹಿತ ಮಹಿಳೆಯ ಜೊತೆ ಸಂಬಂಧವಿದೆ. ನಮ್ಮ ಏರಿಯಾದಲ್ಲೇ ಇರುವ ಓರ್ವ ಮಹಿಳೆ ಜೊತೆ ಸಂಪರ್ಕ ಇದೆ. ತಾನು ಸಂಬಂಧ ಹೊಂದಿದ್ದ ಮಹಿಳೆಯ ಮಗಳನ್ನೇ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾನೆ. ತನ್ನ ಕಚೇರಿಯಲ್ಲಿ ಓರ್ವ ಮಹಿಳೆ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ಹೀಗೆ ಹಲವು ಮಹಿಳೆಯರಿಗೆ ಬ್ಲಾಕ್‍ಮೇಲ್ ಮಾಡಿ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ಹಲವು ಮಹಿಳೆಯರನ್ನು ಟ್ರ್ಯಾಪ್ ಮಾಡಿ ಸಂಬಂಧ ಹೊಂದಿದ್ದರು. ಅಪ್ಪನ ಅನೈತಿಕ ಸಂಬಂಧಕ್ಕೆ ಬೇಸತ್ತು ಅಪ್ಪನಿಂದ ನಾನು, ಅಮ್ಮ ದೂರ ಉಳಿದಿದ್ದೆವು. ನಮ್ಮ ಅಮ್ಮ, ಅಕ್ಕಂದಿರಿಗೆ ಕಿರುಕುಳ ನೀಡುತ್ತಿದ್ದರು. ಈ ಮೂಲಕ ಅಕ್ಕಂದಿರ ಜೀವನವನ್ನೂ ಹಾಳು ಮಾಡಿದ್ದಾರೆ.

FAMILY SUICIDE 8

ನನ್ನ ತಂದೆ ಕಾಮುಕ, ಅಪ್ಪನ ಎಲ್ಲಾ ಕೃತ್ಯದ ಬಗ್ಗೆ ಅಮ್ಮನಿಗೆ ಗೊತ್ತಿತ್ತು. ಇದೇ ವಿಚಾರವಾಗಿ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆಗಳಾಗಿವೆ. ನಮ್ಮನ್ನು ಮನೆಯಲ್ಲೇ ಕೂಡಿ ಹಾಕುತ್ತಿದ್ದರು. ಅಪ್ಪನ ಕಿರುಕುಳದಿಂದ ಅಮ್ಮನಿಗೆ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆಯನ್ನು ಕೂಡ ನೀಡಲಾಗಿತ್ತು. ಈ ಹಿಂದೆ ಪೊಲೀಸ್ ಠಾಣೆಯಲ್ಲೂ ಅಪ್ಪನ ವಿರುದ್ಧ ಕೇಸ್ ದಾಖಲಾಗಿತ್ತು. 2007ರಲ್ಲಿ ಇದೇ ವಿಚಾರಕ್ಕೆ ಅಪ್ಪನ ಮೇಲೆ ಹಲ್ಲೆ ನಡೆದಿತ್ತು. 3 ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ರು, ಆದರೆ ಮನೆ ಸೋರುತ್ತೆ. ಕಿಟಕಿಯಿಂದ ನೀರು ಮನೆ ಒಳಗೆ ಬರುತ್ತೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

FAMILY SUICIDE 4

ಅಕ್ಕನ ಗಂಡಂದಿರ ಮನೆಯವರು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಅಕ್ಕಂದಿರಿಗೆ ಅಪ್ಪ ಯಾವುದೇ ಆಸ್ತಿ ನೀಡಿರಲಿಲ್ಲ. ಹೀಗಾಗಿ ಗಂಡಂದಿರ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು. ನನ್ನ ತಂದೆ ಕುಡುಕ. ಹೀಗಾಗಿ ಮನೆಯ ಬಾಗಿಲು ಲಾಕ್ ಮಾಡುತ್ತಿರಲಿಲ್ಲ. ನಮ್ಮ ಅಪ್ಪ ಅತೀ ದೊಡ್ಡ ಸ್ಯಾಡಿಸ್ಟ್. ನನ್ನ ಅಮ್ಮನಿಗೆ ಕಿರುಕುಳ ಕೊಡುತ್ತಿದ್ದರು. ನನ್ನ ಅಮ್ಮನ ಚಾರಿತ್ರ್ಯಹರಣ ಮಾಡ್ತಿದ್ದರು. ಗಂಡ-ಹೆಂಡತಿ ನಡುವಿನ ಸಂಬಂಧ ಹಾಳು ಮಾಡ್ತಿದ್ದರು. ನಮ್ಮ ಅಪ್ಪ ಆತನ ಸಹೋದರಿಯನ್ನು ಆಕೆಯ ಗಂಡನಿಂದ ದೂರ ಮಾಡಿದ್ದಾರೆ.

FAMILY SUICIDE 10

ನನ್ನ ಮೊದಲ ಸಹೋದರಿಗೆ ಆಕೆಯ ಅತ್ತೆ ಮತ್ತು ಮಾವ, ಗಂಡನಿಗೆ ಹೇಳಿ ಹೊಡೆಸ್ತಿದ್ದರು. ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯಕ್ಕೆ ನಮ್ಮಪ್ಪನೇ ಕಾರಣ ಎಂದು ಮಗ ಮಧುಸಾಗರ್ ದೂರಿದ್ದಾನೆ. ನನ್ನ ಎರಡನೇ ಸಹೋದರಿಗೂ ನನ್ನ ತಂದೆ ತೊಂದರೆ ಕೊಟ್ಟಿದ್ದರು. ನನ್ನ ತಾಯಿಗೆ ಹಾನಿ ಉಂಟು ಮಾಡಲು ಯತ್ನಿಸಿದ್ದರು. ನಮ್ಮನಿಗೆ ನಮ್ಮಪ್ಪ ಚಪ್ಪಲಿಯಿಂದ ಹೊಡೆಯುತ್ತಿದ್ದರು. ನಮ್ಮಮ್ಮನ ಬಾಯಲ್ಲಿ ಚಪ್ಪಲಿ ಇಟ್ಟು ಅವಮಾನಿಸ್ತಿದ್ದರು. ನಮ್ಮಮ್ಮನಿಗೆ ಇನ್ನೊಂದು ಸಂಬಂಧ ಇದೆ ಎಂದು ಶಂಕಿಸಿದ್ದರು. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

FAMILY SUICIDE 1

ನಮ್ಮನ್ನು ಮನೆಯೊಳಗೆ ಕೂಡಿ ಹಾಕಿ ಅಫೀಸ್‍ಗೆ ಹೋಗ್ತಿದ್ದರು. ನಮ್ಮಪ್ಪನ ಕಿರುಕುಳದಿಂದ ನನ್ನ ತಾಯಿ ಖಿನ್ನತೆಗೆ ಒಳಗಾಗಿ ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆ ಪಡೆದಿದ್ದರು. ನಮ್ಮಮ್ಮನ ಅಸಹಾಯಕತೆಯನ್ನೇ ನಮ್ಮಪ್ಪ ಬಳಸಿಕೊಂಡು ಆಕೆಗೆ ಕಿರುಕುಳ ನೀಡ್ತಿದ್ದರು. ದಿನಾ ಕುಡಿದು ಬಂದು ಗಲಾಟೆ ಮಾಡ್ತಿದ್ದರು. ನಮ್ಮಪ್ಪನ ಜೊತೆ ನಾವು ಊಟನೂ ಮಾಡ್ತಿರಲಿಲ್ಲ. ಅವರು ಮನೆಗೆ ಬರುವ ಮೊದಲೇ ಊಟ ಮಾಡಿ ಮಲಗ್ತಿದ್ವಿ.

FAMILY SUICIDE copy

ಕೆಲಸ ಬಿಡುವಂತೆ ನನಗೆ, ನನ್ನ ಸಹೋದರರಿಗೆ ಕಿರುಕುಳ ಕೊಡ್ತಿದ್ದರು. ಅಪ್ಪನ ಕಿರುಕುಳ ತಾಳಲಾರದೇ ನಾನು ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದೆ. ನಾನು, ಅಮ್ಮ, ಸಹೋದರರಿರನ್ನು ಬೇರೆ ಬೇರೆ ಇಟ್ಟಿದ್ದರು. ನಮ್ಮ ಅಪ್ಪನ ಕಾಟದಿಂದ ನನ್ನ ಸಹೋದರರಿಯ ಶಿಕ್ಷಣ ಒಂದು ವರ್ಷ ಹಾಳಾಗಿತ್ತು ಎಂದೆಲ್ಲಾ ಡೆತ್ ನೋಟ್ ಬರೆದಿದ್ದು, ಈ ಡೆತ್ ನೋಟ್ ಶಂಕರ್ ಜೀವನಕ್ಕೆ ಕುತ್ತು ತರುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ- ಐದು ದಿನ ಅನ್ನ, ನೀರಿಲ್ಲದೆ ಬದುಕುಳಿದ ಎರಡೂವರೆ ವರ್ಷದ ಕಂದಮ್ಮ

TAGGED:bengaluruDeathnotefamilymadhusagarPublic TVShankarsuicideಆತ್ಮಹತ್ಯೆಕುಟುಂಬಡೆತ್ ನೋಟ್ಪಬ್ಲಿಕ್ ಟಿವಿಬೆಂಗಳೂರುಮಧುಸಾಗರ್ಶಂಕರ್
Share This Article
Facebook Whatsapp Whatsapp Telegram

You Might Also Like

Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
5 minutes ago
Vedavyas Kamath
Dakshina Kannada

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

Public TV
By Public TV
9 minutes ago
Dalai Lama
Latest

ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

Public TV
By Public TV
11 minutes ago
sushil kedia office atttacked in mumbai
Latest

ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

Public TV
By Public TV
21 minutes ago
Actress Prema and rashmika mandanna
Cinema

ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

Public TV
By Public TV
27 minutes ago
Defence
Latest

ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?