ಕಾಶ್ಮೀರದಲ್ಲಿ ಕಾನ್ಸ್​ಟೇಬಲ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಗುಂಡಿನ ದಾಳಿ

Public TV
1 Min Read
kasmira 1

ಶ್ರೀನಗರ: ದೇವಸ್ಥಾನದ ಬಳಗೆ ಪ್ರವೇಶಿಸುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್ ರಾಷ್ಟ್ರ ವಿರೋಧಿ ಎಂದು ಶಂಕಿಸಿ ಗುಂಡಿನ ದಾಳಿ ನಡೆಸಿದ ಘಟನೆ ಕಾಶ್ಮೀರದಲ್ಲಿ ನಡೆದಿದೆ.

 

POLICE CAP

ಲಂಗೇಟ್ ಹಂದ್ವಾರ ನಿವಾಸಿ ಅಜಯ್ ಧರ್ ಗುಂಡಿನ ದಾಳಿಗೆ ಒಳಗಾದ ಕಾನ್‍ಸ್ಟೇಬಲ್. ಕಾಶ್ಮೀರದ ಬಹುತೇಕ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಈ ಹಿನ್ನೆಲೆ ಅಜಯ್ ಅವರು ತಮ್ಮ ಗುರುತನ್ನು ಮುಚ್ಚಿಟ್ಟು ದೇವಾಲಯದ ಬಾಗಿಲನ್ನು ಒಡೆಯುತ್ತಿದ್ದರು. ಇದನ್ನೂ ಓದಿ:  ಉಡುಪಿಯಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳ್ಳತನ- ಪೊಲೀಸ್ ಠಾಣೆ ಮುಂದೆ ಪ್ರತಿಭಟನಾ ಭಜನೆ

ಗಾಳಿಯಲ್ಲಿ ಗುಂಡು ಹಾರಿಸಿದ ನಂತರವೂ ತನ್ನ ಗುರುತನ್ನು ಬಹಿರಂಗ ಪಡಿಸದ ಕಾರಣ ಅಜಯ್ ಉಗ್ರಗಾಮಿ ಆಗಿರಬಹುದು ಎಂದು ಶಂಕಿಸಿ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಪರಿಣಾಮ ಅಜಯ್ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್, ಈ ಘಟನೆ ದುರದೃಷ್ಟಕರ. ಅಜಯ್ ತಮ್ಮ ಗುರುತನ್ನು ತಿಳಿಸದೇ ಇರುವುದೇ ಈ ದುರಂತಕ್ಕೆ ಕಾರಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ರಿಲ್ ಹಾಕಿದ್ದರಿಂದಲೇ ಇಬ್ಬರು ಬೆಂಕಿಗೆ ಬಲಿಯಾಗಿದ್ದಾರೆ – ಅಪಾರ್ಟ್‍ಮೆಂಟ್ ನಿವಾಸಿ

Taliban unveils new Afghanistan government

ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಸರ್ಕಾರ ರಚನೆಯಾದ ಬಳಿಕ ಪಾಕಿಸ್ತಾನದ ಐಎಸ್‍ಐ ಭಾರತಕ್ಕೆ ಉಗ್ರರನ್ನು ಕಳುಹಿಸಲು ಮುಂದಾಗಿದೆ. ಕೆಲ ಉಗ್ರರು ಕಾಶ್ಮೀರವನ್ನು ಪ್ರವೇಶಿಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *