Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

Bengaluru City

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

Public TV
Last updated: September 23, 2021 1:39 pm
Public TV
Share
2 Min Read
SESSION
SHARE

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮೀಸಲಾತಿ ವಿಚಾರವಾಗಿ ಆಡಳಿತ ಪಕ್ಷದ ಶಾಸಕರಿಂದಲೇ ಗಟ್ಟಿ ಧ್ವನಿ ಮೊಳಗಿತು. ಪಂಚಮಸಾಲಿ ಮೀಸಲಾತಿಗಾಗಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬಾವಿಗಿಳಿದು ಪ್ರತಿಭಟನೆ ನಡೆಸಿದರೆ, ಎಸ್‍ಟಿ ಮೀಸಲಾತಿ ವಿಚಾರವಾಗಿ ಶಾಸಕ ರಾಜೂಗೌಡ ಆಕ್ರೋಶ ಹೊರಹಾಕಿದ್ರು. ಈ ನಡುವೆ ಯಾದವ-ಕಾಡುಗೊಲ್ಲ ಮೀಸಲಾತಿ ವಿಚಾರವಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಧ್ವನಿ ಎತ್ತಿದ್ರು. ಆಡಳಿತ ಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಸಂಕಟ ಶುರುವಾಗಿದೆ.

SPEAKER

ಶೂನ್ಯವೇಳೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಹಿಂದೆ ಯಡಿಯೂರಪ್ಪ ಅವರು ಸೆಪ್ಟೆಂಬರ್ ಒಳಗೆ ಮೀಸಲಾತಿ ವಿಚಾರ ಬಗೆಹರಿಸುವುದಾಗಿ ಹೇಳಿದರು. ಈಗಾಗಲೇ ಸೆಪ್ಟೆಂಬರ್ ಡೆಡ್ ಲೈನ್ ಮುಗಿದಿದೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟ ಉತ್ತರ ಕೊಡಬೇಕು. ಎಸ್ ಟಿ ಮೀಸಲಾತಿಯೂ ಇದೆ, ಪಂಚಮಸಾಲಿ ಮೀಸಲಾತಿಯೂ ಇದೆ. ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.

SESSION 2

ಅಲ್ಲದೆ ಸಿಎಂ ಉತ್ತರ ಕೊಡಬೇಕು ಅಂತಾ ಸದನದ ಬಾವಿಗಿಳಿದು ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಧರಣಿ ನಡೆಸಿದರು. ಇದೇ ವೇಳೆ ಎಸ್. ಟಿ.ಮೀಸಲಾತಿ ಬಗ್ಗೆ ಸ್ಪಷ್ಟನೆ ಕೊಡಿ ಅಂತಾ ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್ ಧರಣಿ ನಡೆಸಿದರು. ಆಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ, ಸಿಎಂ ಉತ್ತರ ಕೊಡಬೇಕು ಅಂತಿದ್ದಾರೆ. ಸಿ.ಸಿ.ಪಾಟೀಲ್ ಉತ್ತರ ಕೊಡಲು ಸಿದ್ಧರಿದ್ದಾರೆ. ಸಿಎಂ ಉತ್ತರ ಕೊಡಬೇಕು ಅಂದ್ರೆ ಅವರು ಬರುವ ತನಕ ಕಾಯಬೇಕು. ಹೀಗೆ ಧರಣಿ ಮಾಡಿ ಸದನದ ಸಮಯ ವ್ಯರ್ಥ ಮಾಡಬೇಡಿ ಎಂದು ಸಿದ್ದರಾಮಯ್ಯ ಸಲಹೆ ಕೊಟ್ಟರು. ಬಳಿಕ ಸ್ಪೀಕರ್ ಸೂಚನೆ ಮೇರೆಗೆ ಮೂವರು ಶಾಸಕರು ಧರಣಿ ವಾಪಸ್ ಪಡೆದರು.

SESSION 1 3

ಇದೇ ವೇಳೆ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಬಿಜೆಪಿ ಶಾಸಕ ರಾಜೂ ಗೌಡ ಸದನದಲ್ಲಿ ಅಸಮಾಧಾನ ಹೊರಹಾಕಿದರು. ರಮೇಶ್ ಕುಮಾರ್ ಅವರಿಗೆ ಅವಕಾಶ ಕೊಡ್ತೀರಿ, ನಮಗೆ ಮಾತಾಡಲು ಕೊಡಲ್ಲ ಎಂದ ರಾಜೂಗೌಡ ಬೆಂಬಲಕ್ಕೆ ಶಾಸಕ ಅರವಿಂದ ಲಿಂಬಾವಳಿ ನಿಂತರು. ಈ ವೇಳೆ ಸಿಟ್ಟಾದ ಸ್ಪೀಕರ್, ಇದೇನು ಹೀಗೆ ಮಾತಾಡ್ತೀರಿ, ಇದು ಸದನ, ಲಾಂಜ್ ನಲ್ಲಿ ಮಾತಾಡುವ ರೀತಿ ಮಾತನಾಡಬೇಡಿ ಅಂತ ಗರಂ ಆದರು. ಬಳಿಕ ರಾಜೂಗೌಡ ಕ್ಷಮೆ ಕೇಳಿ ನಮ್ಮ ರಕ್ಷಣೆಗೆ ನೀವು ನಿಲ್ಲಬೇಕು ಅಂತಾ ಮನವಿ ಮಾಡಿದರು. ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ನನ್ನ ಮಕ್ಕಳಿದ್ದಂತೆ, ಅವರಿಗೆ ಅನುಭವ ಇಲ್ಲ: ಕ್ಯಾ.ಅಮರೀಂದರ್ ಸಿಂಗ್

RAJU GOWDA SESSION

ರಾಮನ ಹೆಸರು ಹೇಳಿ ಅಧಿಕಾರಕ್ಕೆ ಬರೋದು ಗೊತ್ತಿದೆ. ರಾಮನನ್ನ ಬೆಳಕಿಗೆ ತಂದ ವಾಲ್ಮೀಕಿ ಜನಾಂಗದ ಬಗ್ಗೆ ಏಕೆ ಇಷ್ಟು ನಿರ್ಲಕ್ಷ್ಯ. 7.5%ರಷ್ಟು ಮೀಸಲಾತಿ ಕೊಡಬೇಕು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಶಿಫಾರಸಿನಂತೆ ಅನುಷ್ಠಾನ ಮಾಡಬೇಕು ಅಂತಾ ಆಗ್ರಹಿಸಿದ್ರು. ಆಗ ಎಲ್ಲ ಮೀಸಲಾತಿ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿ ಉತ್ತರ ಕೊಡ್ತಾರೆ ಎಂದು ಸ್ಪೀಕರ್ ಸಮಾಧಾನಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!

BOMMAI ASSEMBLY SESSION 2021 1

ಇದೆಲ್ಲದೆ ನಡುವೆ ಆಡಳಿತ ಪಕ್ಷದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲ ಮೀಸಲಾತಿ ಸಂಬಂಧ ಚರ್ಚೆಗೆ ನಮಗೂ ಅವಕಾಶ ಕೊಡಿ ಅಂತಾ ಆಗ್ರಹಿಸಿದರು. ನಿಯಮ 69ರಡಿ ಚರ್ಚೆಗೆ ಹಾಕಿದ್ದೀರಿ, ಆಗ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ರು. ಒಟ್ಟಾರೆ ಮೀಸಲಾತಿ ಸಂಬಂಧ ಆಡಳಿತ ಪಕ್ಷದ ಶಾಸಕರೇ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಕೊಡುವ ಉತ್ತರ ಕುತೂಹಲ ಮೂಡಿಸಿದೆ.

TAGGED:Basavaraj BommaibengaluruPublic TVST Reservationvidhanasabhaಎಸ್‍ಟಿ ಮೀಸಲಾತಿಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಬೆಂಗಳೂರುವಿಧಾನಸಭೆಸಿಎಂ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
22 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
49 minutes ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
55 minutes ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
1 hour ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
1 hour ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?