Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

Bengaluru City

ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

Public TV
Last updated: September 25, 2021 7:36 am
Public TV
Share
3 Min Read
KARNATAKA BANDH
SHARE

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ಮತ್ತೆ ರೈತರು ರಣಕಹಳೆ ಮೊಳಗಿಸಲಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದೆ. ಭಾರತ್ ಬಂದ್ ದಿನ ಕರ್ನಾಟಕ ಬಂದ್ ಗೆ ರೈತರು ಕರೆಕೊಟ್ಟಿದ್ದಾರೆ.

ಹೌದು. ಸೋಮವಾರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಗಳು ಭಾರತ್ ಬಂದ್ ಗೆ ಕರೆಕೊಟ್ಟಿದ್ದು ರಾಜ್ಯದಲ್ಲಿ ಕರ್ನಾಟಕ ಬಂದ್ ಮಾಡೋದಾಗಿ ರೈತ ಸಂಘಟನೆಗಳು ಹೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯದಲ್ಲಿ ಬಂದ್ ನಡೆಸುತ್ತೇವೆ ಎಲ್ಲರ ಬೆಂಬಲ ಕೋರುತ್ತೇವೆ. ಈಗಾಗಲೇ ದಲಿತ ಸಂಘ, ಕಾರ್ಮಿಕ ಸಂಘ ಕೆಲ ಆಟೋ ಸಂಘ ಕನ್ನಡ ಸಂಘಗಳು ಬೆಂಬಲ ಕೊಟ್ಟಿದೆ ಅಂದ್ರು.

FARMERS PROTEST 1

ರೈತ ಸಂಘದ ಪ್ಲಾನ್ ಏನು..?
ಬೆಂಗಳೂರಿನ ಪ್ರಮುಖ ಹೆದ್ದಾರಿ ಸೇರಿದಂತೆ ರಾಜ್ಯದ್ಯಾಂತ ಹೆದ್ದಾರಿ ತಡೆ. ಬೆಂಗಳೂರಿನಲ್ಲಿ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ರ‍್ಯಾಲಿ. ಒಟ್ಟು 700ಕ್ಕೂ ಹೆಚ್ಚು ಕ್ಯಾಂಟರ್ ವಾಹನದಲ್ಲಿ ನಗರದಲ್ಲಿ ರ‍್ಯಾಲಿ ನಡೆಸಲು ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಭಾರತ-ಅಮೆರಿಕ ಸಂಬಂಧ ವೃದ್ಧಿಗೆ ಬೀಜ ಬಿತ್ತಲಾಗಿದೆ: ಪ್ರಧಾನಿ ಮೋದಿ

ಕುರುಬೂರು ಶಾಂತಕುಮಾರ್ ಬಣ ಬಂದ್ ದಿನ ಯಾವ ಮಾದರಿಯ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಇಂದು ಸಭೆ ನಡೆಸಿ ರೂಪುರೇಷೆ ಹಾಕೋದಾಗಿ ಹೇಳಿದ್ರು. ಕೊರೊನಾ ಕಾರಣದಿಂದ ರೈತರ ಪ್ರತಿಭಟನೆಗೆ ಸಂಘಟನೆಗಳಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಹೀಗಾಗಿ ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ.

FARMERS PROTEST 2

ಎಪಿಎಂಸಿ ತರಕಾರಿ ಮಾರುಕಟ್ಟೆ ವರ್ತಕರ ಸಂಘ ಬಂದ್ ಗೆ ಬೆಂಬಲ ಕೊಟ್ಟಿದೆ. ಹೀಗಾಗಿ ಕಲಾಸಿಪಾಳ್ಯ, ಯಶವಂತ ಪುರ, ದಾಸನಪುರ ಮಾರ್ಕೆಟ್ ಬಂದ್ ಆಗುವ ಸಾಧ್ಯತೆ ಇದೆ. ಕೆಲವು ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಕೊಟ್ಟಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಕಿಸಾನ್ ಘಟಕದಿಂದ ಬೆಂಬಲ ಪ್ರತಿಭಟನೆ ಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟದಿಂದಲೂ ಬೆಂಬಲ ಸಿಕ್ಕಿದೆ.

ಆಟೋ, ಊಬರ್, ಓಲಾ ಸಂಘಟನೆಗಳಿಂದ ನೈತಿಕ ಬೆಂಬಲ ನೀಡಿವೆ. ಕೊರೊನಾ ಕಾರಣದಿಂದ ಬಂದ್ ದಿನ ವಾಹನ ಸ್ಥಗಿತಗೊಳಿಸಲ್ಲ. ಎಂದಿನಂತೆ ಸಂಚಾರ ವ್ಯವಸ್ಥೆ ಇರಲಿದೆ. ಸಾರಿಗೆ ಯೂನಿಯನ್ ಗಳು ಬಂದ್ ಗೆ ಬೆಂಬಲ ಕೊಟ್ಟಿಲ್ಲ. ರೈತರ ಪ್ರತಿಭಟನೆಗೆ ಸಾರಿಗೆ ನೌಕರರು ಪಾಲ್ಗೊಳ್ಳಲ್ಲ. ಬಸ್ ಸಂಚಾರ ಯಥಾ ಸ್ಥಿತಿ ಇರುತ್ತೆ. ಈ ಹಿನ್ನೆಲೆಯಲ್ಲಿ ದೂರದ ಊರುಗಳಿಗೂ ಬಸ್ ಸೇವೆ ಲಭ್ಯವಿರಲಿವೆ.

FARMERS PROTEST 3

ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಹೋಟೆಲ್ ಗಳ ಬೆಂಬಲ ಇಲ್ಲ. ಯಾಕೆಂದರೆ ಕೊರೊನಾ ಕಾರಣದಿಂದ ಈಗಾಗಲೇ ನಷ್ಟದ ಹೊಡೆತ ತಿಂದಿದ್ದೇವೆ. ಹೀಗಾಗಿ ಯಾವ ಬಂದ್ ಗೂ ಬೆಂಬಲ ಕೊಡಲ್ಲ ಅನ್ನೋದು ಹೋಟೆಲ್ ಮಾಲೀಕರ ಸಂಘದ ಅಭಿಪ್ರಾಯವಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕೇವಲ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಶಾಲಾ- ಕಾಲೇಜು ಎಂದಿನಂತೆ ತೆರೆಯಲಿದೆ. ಮಾಲ್ ಅಸೋಸಿಯೇಷನ್ ನವರು ಇಂದು ಅಂತಿಮ ತೀರ್ಮಾನ ಹೇಳೋದಾಗಿ ಹೇಳಿದ್ದಾರೆ. ಆದರೆ ಬಹುತೇಕ ಬೆಂಬಲ ಕೊಡದೇ ಇರಲು ತೀರ್ಮಾನ ಮಾಡಿದ್ದಾರೆ. ತುಂಬಾ ಕಾಲ ಬಂದ್ ಆಗಿದ್ದ ಮಾಲ್ ನಷ್ಟದ ಕಾರಣವೊಡ್ಡಿ ಬಂದ್ ದಿನ ಒಪನ್ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

FARMERS PROTEST 4

ಬೀದಿ ಬದಿ ವ್ಯಾಪಾರ ಕೂಡ ಎಂದಿನಂತೆ ನಡೆಯಲಿದೆ. ಇತ್ತ ಕನ್ನಡ ಸಂಘಟನೆಗಳು ಇನ್ನು ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಪ್ರತಿಭಟನೆ ಗೆ ಬೆಂಬಲದ ಬಗ್ಗೆ ಕರವೇ ನಾರಾಯಣ ಗೌಡ ಹಾಗೂ ಪ್ರವೀಣ್ ಶೆಟ್ಟಿ ಬಣ ಇನ್ನು ತಮ್ಮ ಅಂತಿಮ ನಿರ್ಧಾರ ತಿಳಿಸಿಲ್ಲ. ಒಟ್ಟಾರೆ ಕೊರೋನಾ ಸಂದರ್ಭದಲ್ಲಿ ಬಂದ್ ಎಷ್ಟರಮಟ್ಟಿಗೆ ಸಫಲವಾಗುತ್ತೆ ಅನ್ನೋದನ್ನು ನೋಡಬೇಕಾಗಿದೆ.

TAGGED:bengaluruBharath BandhFarmers' Unionkarnataka bandhPublic TVಕರ್ನಾಟಕ ಬಂದ್ಪಬ್ಲಿಕ್ ಟಿವಿಬೆಂಗಳೂರುಭಾರತ್ ಬಂದ್ರೈತ ಸಂಘ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
7 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
22 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 hours ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?