Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರದಂತ ದರಿದ್ರ ಸರ್ಕಾರ ಇನ್ನೊಂದಿಲ್ಲ, ದಮ್ಮಯ್ಯ ಅಂತೀನಿ ಕಣ್ರಯ್ಯ ಈ ಸರ್ಕಾರ ಕಿತ್ತು ಬಿಸಾಕಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸರ್ಕಾರದಂತ ದರಿದ್ರ ಸರ್ಕಾರ ಇನ್ನೊಂದಿಲ್ಲ, ದಮ್ಮಯ್ಯ ಅಂತೀನಿ ಕಣ್ರಯ್ಯ ಈ ಸರ್ಕಾರ ಕಿತ್ತು ಬಿಸಾಕಿ: ಸಿದ್ದರಾಮಯ್ಯ

Bengaluru City

ಬಿಜೆಪಿ ಸರ್ಕಾರದಂತ ದರಿದ್ರ ಸರ್ಕಾರ ಇನ್ನೊಂದಿಲ್ಲ, ದಮ್ಮಯ್ಯ ಅಂತೀನಿ ಕಣ್ರಯ್ಯ ಈ ಸರ್ಕಾರ ಕಿತ್ತು ಬಿಸಾಕಿ: ಸಿದ್ದರಾಮಯ್ಯ

Public TV
Last updated: September 26, 2021 2:41 pm
Public TV
Share
3 Min Read
siddu11 1
SHARE

– ಬಿಜೆಪಿಯವರು ತಾಲಿಬಾನಿಗಳು
– ಶ್ರಿರಾಮುಲು ಒಬ್ಬ ಪೆದ್ದ

ಬೆಂಗಳೂರು: ಬಿಜೆಪಿ ಸರ್ಕಾರದಂತಹ ದರಿದ್ರ ಸರ್ಕಾರ ಬೇರೆ ಇಲ್ಲ. ನಿಮ್ಮ ದಮ್ಮಯ್ಯ ಅಂತೀನಿ ಈ ಸರ್ಕಾರವನ್ನು ಕಿತ್ತು ಬಿಸಾಕಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

siddu 12ನಗರದಲ್ಲಿಂದು ಅಯೋಜಿಸಲಾಗಿದ್ದ ದಿವಂಗತ ಆರ್. ಗುಂಡೂರಾವ್ 84 ನೇ ಜನ್ಮದಿನಾಚರಣೆ ಹಾಗೂ ರೇಷನ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿದ ಅವರು, ನಾನು ಏಳು ಕೆಜಿ ಅಕ್ಕಿ ಕೊಡ್ತಾ ಇದ್ದೆ. ಬಿಜೆಪಿ ಸರ್ಕಾರ ಬಂದು ಐದು ಕೆಜಿ ಕೊಡ್ತಾ ಇದ್ದಾರೆ. ಇವರಪ್ಪನ ಮನೆ ಗಂಟೇನು ಹೋಗುತ್ತೆ ಏಳು ಕೆಜಿ ಅಕ್ಕಿ ಕೊಟ್ರೆ? 7 ಕೆಜಿ ಕೊಟ್ಟಿದ್ದಕ್ಕೆ ಯಡಿಯೂರಪ್ಪ ಕೂಡ ಹೊಟ್ಟೆ ಉರ್ಕೊಂಡು ಬಿಟ್ರು. ನಮ್ಮ ಸರ್ಕಾರದ ಮತ್ತೆ ಬಂದ್ರೆ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ: ಬಿಜೆಪಿಯಿಂದಲೇ ಕರ್ನಾಟಕ ಕಲ್ಯಾಣವಾಗಿ ಮಾರ್ಪಡುತ್ತಿದೆ: ಕಟೀಲ್

FotoJet 3 42

ಬಿಜೆಪಿ ಅಂದ್ರೆ ಡೊಂಗಿಗಳು, ಬರಿ ಸುಳ್ಳು ಹೇಳುವುದೇ ಅವರ ಕೆಲಸ. ಕೆಲಸ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂತಾರೆ ಆದರೆ ರಾಜ್ಯ ಸರ್ಕಾರದಲ್ಲಿ ಒಬ್ಬನೆ ಒಬ್ಬ ಅಲ್ಪಸಂಖ್ಯಾತ ಮಂತ್ರಿ ಇಲ್ಲ. ಮುಂಬಾಗಿಲ ಮೂಲಕ ಅಧಿಕಾರಕ್ಕೆ ಬಂದು ಬಿಜೆಪಿಗೆ ಗೊತ್ತೇ ಇಲ್ಲ. ಹಿಂಬಾಗಿಲ ಮೂಲಕ ಆಪರೇಶನ್ ಕಮಲ ಮಾಡಿ ಅಧಿಕಾರಕ್ಕೆ ಬಂದರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.  ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

cm bs yadiyurappa

ಈಗ ಆಪರೇಶನ್ ಮಾಡಿದ ಯಡಿಯೂರಪ್ಪ ಕಿತ್ತು ಹಾಕಿ, ಬೊಮ್ಮಾಯಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಬೊಮ್ಮಾಯಿ ಆರ್‍ಎಸ್‍ಎಸ್, ಯಡಿಯೂರಪ್ಪ ಹೇಳಿದಂತೆ ಕೇಳ್ತಾರೆ. ಇವರಿಂದ ಯಾವ ಅಭಯ ನಿರೀಕ್ಷೆಯನ್ನು ಮಾಡೋಕೆ ಸಾಧ್ಯವಿಲ್ಲ ಎಂದರು. ಆರ್‍ಎಸ್‍ಎಸ್ ಅಂದ್ರೆ ಗೊತ್ತಾ? ಚಡ್ಡಿಗಳು ನಮ್ಮ ಕಾಲದಲ್ಲಿ ಚಡ್ಡಿಗಳು ಅಂತಿದ್ರು ಇವಾಗ ಪ್ಯಾಂಟ್ ಹಾಕ್ತಾರಾ ಎಂದು ನರೆದಿದ್ದ ಜನರನ್ನು ಪ್ರಶ್ನಿಸಿದರು. ಅವರು ದೇಶ ಭಕ್ತರಲ್ಲ. ಒಬ್ಬರಾದರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರಾ? ನರೇಂದ್ರ ಮೋದಿ ಏನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ…? ಅವರು ಹುಟ್ಟೇ ಇರಲಿಲ್ಲ ಎಂದು ಆರ್‍ಎಸ್‍ಎಸ್ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Modi

ಇದೇ ವೇಳೆ ಸಮ್ಮಿಶ್ರ ಸರ್ಕಾರದ ಬಗ್ಗೆಯೂ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿತ್ತು. ನಾವು ಐದು ಕೆಜಿಯಿಂದ ಏಳು ಕೆಜಿ ಅಕ್ಕಿ ಕೊಟ್ವಿ, ಆದರೆ ಏಳು ಕೆಜಿ ಹೆಚ್ಚಳ ಮಾಡಲು ದುಡ್ಡು ಇಟ್ಟಿರಲಿಲ್ಲ ಅಂತ ಕುಮಾರಸ್ವಾಮಿ ಸುಳ್ಳು ಹೇಳ್ತಾನೆ. ಬಡವರು ಯಾರು ಹಸಿವಿನಿಂದ ಮಲಗಬಾರದು ಅಂತ ಅಕ್ಕಿ ಕೊಟ್ಟಿದ್ದೇವೆ. ಇದನ್ನು ಕೊಡಲು ಸುಳ್ಳು ಹೇಳಬೇಕಾ ಎಂದು ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

hdkಬಿಜೆಪಿಯವರು ತಾಲಿಬಾನ್‍ಗಳೇ, ಸುಮ್ಮನೆ ಭಾರತ್ ಮಾತಾಕೀ ಜೈ ಅಂತ ಹೇಳ್ತಾರೆ, ಬಿಜೆಪಿ ಕಚೇರಿಯಲ್ಲಿ ಅವಾಗ ಮಹಾತ್ಮ ಗಾಂಧಿ, ಅಂಬೇಡ್ಕರ್ ಫೋಟೊ ಸಹ ಹಾಕ್ತಿರಲಿಲ್ಲ. ಈಗ ಮಹಾತ್ಮ ಗಾಂಧಿ, ಅಂಬೇಡ್ಕರ್ ಫೋಟೋ ಹಾಕ್ತಾರೆ. ಬಿಜೆಪಿ ಅವರು ಬಡವರ ವಿರೋಧಿಗಳು. ತಾಲಿಬಾನ್‍ಗಳೇ ಬಿಜೆಪಿಯವರು ಎಂದು ಆಕ್ರೋಶ ವ್ಯಕ್ತಪಡಿಸಿದರು.

siddaramaiah

ಶ್ರೀರಾಮುಲು ಅಂತ ಒಬ್ಬ ಮಂತ್ರಿ ಇದ್ದಾನೆ. ಅವನು ಪೆದ್ದ. ಕೊರೊನಾದಿಂದ ಸತ್ತವರಿಗೆ ದುಡ್ಡು ಕೊಟ್ಟಿದ್ದೇವೆ ಎಂದ. ಎಲ್ಲಪ್ಪ ದಾಖಲೆ ತೋರಿಸಿ ಅಂದ್ರೆ ತಬ್ಬಿಬ್ಬು ಆಗಿಬಿಟ್ಟ. ಯಡಿಯೂರಪ್ಪ ಸತ್ಯ ಹೇಳಿದ. ಯಾರಿಗೂ ದುಡ್ಡು ಕೊಟ್ಟಿಲ್ಲ ಅಂತ. ಬರಿ ಸುಳ್ಳು ಹೇಳುವುದೇ ಬಿಜೆಪಿ ಕೆಲಸ. ಇದೊಂದು ಹಿಟ್ಲರ್ ಸರ್ಕಾರ. ಅವನ ತರಹ ಸುಳ್ಳು ಹೇಳ್ತಾರೆ. ಎಲ್ಲಾ ಬೆಲೆ ಏರಿಸಿ ಕೂತಿದ್ದಾರೆ, ಸರ್ಕಾರವನ್ನು ಕೇಳಿದ್ರೆ ಆ ಬೊಮ್ಮಾಯಿ ನಿಮ್ಮ ಕಾಲದಲ್ಲಿ ಬೆಲೆ ಏರಿಕೆ ಮಾಡಿಲ್ವಾ ಎಂದು ನಮ್ಮನ್ನೆ ಮರು ಪ್ರಶ್ನೆ ಮಾಡುತ್ತಾರೆ. ನಿಮ್ಮ ದಮ್ಮಯ್ಯ ಇಂತಹ ದರಿದ್ರ ಸರ್ಕಾರವನ್ನು ಕಿತ್ತುಹಾಕಿ ಅಂತ ಸಾರ್ವಜನಿಕರಲ್ಲಿ ಮನವಿ ಮಾಡಿದರು.

 

TAGGED:Siddramaiahಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಬಸವರಾಜ ಬೊಮ್ಮಾಯಿಬಿಜೆಪಿಯಡಿಯೂರಪ್ಪಶ್ರೀರಾಮುಲುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories

You Might Also Like

priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
10 minutes ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
12 minutes ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
21 minutes ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
45 minutes ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
59 minutes ago
Nitin Nabin 1
Latest

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?