ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.
ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇದನ್ನೂ ಓದಿ: ಕರಂದ್ಲಾಜೆ ಕಾರು ಅಡ್ಡಗಟ್ಟಿ ಕಪ್ಪುಪಟ್ಟಿ ಪ್ರದರ್ಶನ
ಹೆದ್ದಾರಿಯಲ್ಲಿ ಬರುತಿದ್ದ ಟಾಟಾ ಇಂಡಿಕಾ ಕಾರಿಗೆ ಎದಿರಿನಿಂದ ಬಂದ ಟೊಯೋಟಾ ಕಾರು ಡಿಕ್ಕಿಯಾದ ಪರಿಣಾಮ ಎರಡು ಕಾರಿನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.