ಆನೇಕಲ್: ಆಟೋ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಬಾಗಲೂರಿನಲ್ಲಿ ನಡೆದಿದೆ.
ಮಾಲೂರು ಮೂಲದ ಅಬಿದ್(21), ಸೈಯದ್(20) ಹಾಗೂ ಧರ್ಮಪುರಿಯ ಪೂವರಸನ್(19) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಆಟೋ ಚಾಲಕ ಮೆಹಬೂಬ್(35) ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯವಿದೆ ಎಂದು ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡ್ತಾರೆ: ಹಾಲಪ್ಪ ಆಚಾರ್
ಬೈಕ್ ಮಾಲೂರಿನಿಂದ ಹೊಸೂರಿಗೆ ತೆರಳುತ್ತಿದ್ದು, ಬಾಗಲೂರಿನಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಹೊಸೂರು ಆಸ್ಪತ್ರೆಗೆ ಸಾಗಿಸಿದ್ದಾರೆ.