ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ಪ್ರಕರಣ – ಇಂದು 539 ಕೇಸ್, 17 ಸಾವು

Public TV
1 Min Read
CORONA VIRUS 3

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು 539 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 17 ಮಂದಿ ಸಾವನ್ನಪ್ಪಿದ್ದು, 591 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

corona report in 29 09 2021

ರಾಜ್ಯದಲ್ಲಿ ಒಟ್ಟು 12,365 ಸಕ್ರಿಯ ಪ್ರಕರಣಗಳು ಇದ್ದು, ಸಕ್ರಿಯ ಪ್ರಕರಣದಲ್ಲೂ ಕೂಡ ಇಳಿಕೆ ಕಂಡು ಬಂದಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,75,067 ಮಂದಿಗೆ ಕೊರೊನಾ ಬಂದಿದೆ. 29,24,693 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.48ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.3.15ರಷ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ: ಕಟೀಲ್

corona report in 29 09 2021 2

ಇಂದು ರಾಜ್ಯದಲ್ಲಿ ಒಟ್ಟು 7,89,853 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,11,538 ಸ್ಯಾಂಪಲ್ (ಆರ್‍ಟಿ ಪಿಸಿಆರ್ 86,507 + 25,031 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 239 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಮರಣ ಹೊಂದಿದ್ದಾರೆ. 141 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟಿಪ್ಪುವಿನ ವಂಶಸ್ಥರಾ?: ಕೆ.ಜಿ ಬೋಪಯ್ಯ

corona report in 29 09 2021 1ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಚಿಕ್ಕಬಳ್ಳಾಪುರ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 239, ಬೀದರ್ 3, ಚಾಮರಾಜನಗರ 2, ಚಿಕ್ಕಮಗಳೂರು 4, ಚಿತ್ರದುರ್ಗ 8, ದಕ್ಷಿಣ ಕನ್ನಡ 75, ದಾವಣಗೆರೆ 2, ಧಾರವಾಡ 5, ಹಾಸನ 21, ಹಾವೇರಿ 1, ಕಲಬುರಗಿ 2, ಕೊಡಗು 36, ಕೋಲಾರ 13, ಕೊಪ್ಪಳ 1, ಮಂಡ್ಯ 10, ಮೈಸೂರು 31, ರಾಮನಗರ 3, ಶಿವಮೊಗ್ಗ 14, ತುಮಕೂರು 22, ಉಡುಪಿ 6 ಮತ್ತು ಉತ್ತರ ಕನ್ನಡದಲ್ಲಿ 19, ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *