Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇತ್ರಾವತಿ ಸ್ನಾನಘಟ್ಟದಲ್ಲೇ ಮರಳು ದಂಧೆ- ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನೇತ್ರಾವತಿ ಸ್ನಾನಘಟ್ಟದಲ್ಲೇ ಮರಳು ದಂಧೆ- ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

Districts

ನೇತ್ರಾವತಿ ಸ್ನಾನಘಟ್ಟದಲ್ಲೇ ಮರಳು ದಂಧೆ- ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

Public TV
Last updated: October 1, 2021 4:31 pm
Public TV
Share
2 Min Read
MNG SAND
SHARE

-ಅಧಿಕಾರಿಗಳಿಗೆ ಕಣ್ಣಿದ್ದೂ ಕುರುಡು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಜಿಲ್ಲಾಡಳಿತ ಜನಸಾಮಾನ್ಯರಿಗೆ ನಿಗದಿತ ಬೆಲೆಯಲ್ಲಿ ಮರಳು ನೀಡಲು ಅದೆಷ್ಟೋ ವ್ಯವಸ್ಥೆ ಕಲ್ಪಿಸಿದರೂ ಕೂಡಾ ಅಕ್ರಮ ದಂಧೆಕೋರರು ಅವೆಲ್ಲದಕ್ಕೂ ಡೋಂಟ್ ಕೇರ್ ಎಂದು ಬಿಂದಾಸ್ ಆಗಿ ದಂಧೆ ನಡೆಸುತ್ತಿದ್ದಾರೆ.

RCR SAND 8 768x422 copy

ಜಿಲ್ಲೆಯ ಪ್ರಸಿದ್ಧ ತೀರ್ಥ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟಕ್ಕೆ ಕೂಗಳತೆ ದೂರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಡ್ರೆಜಿಂಗ್ ಮೆಷಿನ್, ಜೇಸಿಬಿ ಬಳಸಿ ನದಿಯ ಒಡಲು ಬರಿದು ಮಾಡುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದ್ದು, ಸುಮ್ನೆ ನಮಗೆ ಅದೆಲ್ಲ ಯಾಕೆ ಸಾರ್, ದಾಳಿ ನಡೆಸಲು ಮುಂದಾದರೆ ಮೇಲಿಂದ ಫೋನ್ ಬರುತ್ತೆ. ವಿಧಾನಸೌಧ ತನಕ ಅವರ ಕೈ ಇದೆ. ಏನು ಮಾಡಿದ್ರೂ ವೇಸ್ಟ್ ಅಂತಾರೆ ಪೊಲೀಸ್ ಸಿಬ್ಬಂದಿ. ಹೀಗೆ ಕೆಳಗಿಂದ ಮೇಲಿನವರೆಗೆ ಮಾಮೂಲಿ ಯಾಗೇ ನಡೀತಿರೋ ದಂಧೆಯನ್ನು ಮಟ್ಟ ಹಾಕಿ ನದಿಯನ್ನು ಉಳಿಸೋದ್ಯಾರು ಅನ್ನೋದು ಧರ್ಮಸ್ಥಳ ಜನರ ಪ್ರಶ್ನೆಯಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ರೇಪ್ – ಬೆಳ್ತಂಗಡಿ ಪೊಲೀಸರಿಂದ ಇಬ್ಬರು ಅರೆಸ್ಟ್

MNG SAND 2

ಧರ್ಮಸ್ಥಳದ ಸ್ನಾನಘಟ್ಟದಿಂದ ಎಡಭಾಗಕ್ಕೆ ಮುಂಡಾಜೆ-ಚಾರ್ಮಾಡಿ ಸಂಧಿಸುವ ರಸ್ತೆ ಹೋಗುತ್ತದೆ. ಇಲ್ಲಿ 100 ಮೀಟರ್ ಮುಂದಕ್ಕೆ ಹೋದರೆ ಸೂರ್ಯಕಮಲ್ ಲಾಡ್ಜ್ ಇದ್ದು ಇದರ ಅಂಗಳದಲ್ಲೇ ಅಕ್ರಮ ಮರಳುಗಾರಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಲಾಡ್ಜ್ ಮುಂಭಾಗ, ಹಿಂಭಾಗ ಎಲ್ಲೆಂದರಲ್ಲಿ ಟಿಪ್ಪರ್, ಜೇಸಿಬಿ ಸಾಲುಗಟ್ಟಿ ನಿಲ್ಲುತ್ತಿದ್ದು ಇಲ್ಲೇ ನೇತ್ರಾವತಿ ನದಿಯಿಂದ ಡ್ರೆಜಿಂಗ್ ಮೆಷಿನ್ ಬಳಸಿ ಮರಳು ತೆಗೆಯಲಾಗುತ್ತಿದೆ. ಹಾಗೆ ತೆಗೆದ ಮರಳನ್ನು ಟಿಪ್ಪರ್ ಗಳಲ್ಲಿ ರಾಜಾರೋಷವಾಗಿ ಸಾಗಾಟ ಮಾಡಲಾಗುತ್ತಿದೆ. ಇಲ್ಲಿಂದ ಬೆಳ್ತಂಗಡಿ, ಮೂಡಬಿದ್ರೆ, ಚಾರ್ಮಾಡಿ ಮಾರ್ಗವಾಗಿ ಚಿಕ್ಕಮಗಳೂರು, ಕಡಬ, ಮಂಗಳೂರು ಕಡೆಗೆ ಮರಳು ಸಾಗಾಟ ಮಾಡಲಾಗುತ್ತದೆ. ಹೀಗೆ ದಿನವೊಂದಕ್ಕೆ ಸುಮಾರು 100-150 ಟಿಪ್ಪರ್ ಗಳಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ದಂಧೆಕೋರರು ಅಧಿಕಾರಿಗಳ ಕೃಪಾಕಟಾಕ್ಷದಿಂದ ದುಡ್ಡಿನ ಕಂತೆ ಎಣಿಸುತ್ತಿದ್ದಾರೆ. ಸ್ನಾನಘಟ್ಟದ ಬಳಿಯಲ್ಲಿ ರಸ್ತೆಯಲ್ಲಿ ಘನವಾಹನ ಪ್ರವೇಶ ನಿಷೇಧಸಲಾಗಿದೆ ಎಂಬ ಬೋರ್ಡ್ ಹಾಕಿದ್ದರೂ ಭಾರೀ ಗಾತ್ರದ ಟಿಪ್ಪರ್ ಗಳು ರಸ್ತೆಯನ್ನು ಹಾಳುಗೆಡವುತ್ತಿದ್ದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

MNG SAND 4

ಸುಬ್ರಮಣ್ಯ ಸ್ನಾನಘಟ್ಟದ ಬಳಿಕ ನೇತ್ರಾವತಿಗೆ ಕಂಟಕ:
ಕೆಲವು ತಿಂಗಳ ಹಿಂದೆ ಕೊರೊನಾ ಲಾಕ್‍ಡೌನ್ ಅವಧಿಯಲ್ಲಿ ಸುಬ್ರಮಣ್ಯದ ಕುಮಾರಧಾರ ಸ್ನಾನಘಟ್ಟದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದುದು ಬೆಳಕಿಗೆ ಬಂದಿತ್ತು. ಪೊಲೀಸ್ ಇಲಾಖೆಯಿಂದ ಹಿಡಿದು ವಿವಿಧ ಇಲಾಖೆಗಳ ಅಧಿಕಾರಿಗಳು ದಂಧೆಯಲ್ಲಿ ಶಾಮೀಲಾಗಿದ್ದ ಆರೋಪ ಕೇಳಿಬಂದಿತ್ತು. ಸಾರ್ವಜನಿಕರ ಆಕ್ರೋಶದ ಬಳಿಕ ದಂಧೆಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂದ್ ಮಾಡಿದ್ದರು. ಈಗ ಮತ್ತೆ ಅಂತದ್ದೇ ಘಟನೆ ಧರ್ಮಸ್ಥಳದಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಗಣಿ ಇಲಾಖೆ ಅನ್ನೋದು ಇದೆಯೇ ಎನ್ನುವಷ್ಟು ಸಂದೇಹ ಜನರನ್ನು ಕಾಡಲಾರಂಭಿಸಿದೆ. ಸರ್ಕಾರಕ್ಕೆ ರಾಜಾಧನ ಪಾವತಿಸದೆ, ಲೀಸ್ ಪಡೆಯದೇ, ಯಾವೊಂದು ಅನುಮತಿಯೂ ಇಲ್ಲದೆ, ಲೈಸೆನ್ಸ್ ಅಗತ್ಯವೇ ಇಲ್ಲದೆ, ಸುಪ್ರೀಂಕೋರ್ಟ್ ನಿಷೇಧಿಸಿರುವ ಡ್ರೆಜಿಂಗ್ ಬಳಸಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ದಂಧೆ ನಡೆಯುತ್ತಿದ್ದರೆ ಅಧಿಕಾರಿಗಳು ದಾಳಿ ನಡೆಸದಂತೆ ಕಟ್ಟಿ ಹಾಕುತ್ತಿರುವ ಕೈ ಯಾವುದು ಅನ್ನೋದಕ್ಕೆ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರೇ ಉತ್ತರಿಸಬೇಕಿದೆ. ದಂಧೆ ಹೀಗೆ ಮುಂದುವರಿದರೆ ಲಕ್ಷಾಂತರ ಭಕ್ತರ ನಂಬಿಕೆಯಾಗಿರುವ ನೇತ್ರಾವತಿ ನದಿಗೆ ಮುಂದಿನ ದಿನಗಳಲ್ಲಿ ಕಂಟಕ ಎದುರಾಗಲಿರುವುದು ಸುಳ್ಳಲ್ಲ.  ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು 

TAGGED:dharmasthalaDistrict AdministrationNethravathiPublic TVSandSubrahmanyaಜಿಲ್ಲಾಡಳಿತಧರ್ಮಸ್ಥಳನೇತ್ರಾವತಿಪಬ್ಲಿಕ್ ಟಿವಿಮರಳುಸುಬ್ರಮಣ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
11 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
36 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
41 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
45 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?