Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿ ಉಳಿಯಲು ಬಿಟ್ರೆ ಜನ ಭಿಕ್ಷೆ ಬೇಡುವ ಸ್ಥಿತಿ ನಿರ್ಮಾಣ ಆಗುತ್ತೆ: ಸಿದ್ದರಾಮಯ್ಯ

Public TV
Last updated: October 2, 2021 1:41 pm
Public TV
Share
2 Min Read
siddaramaiah
SHARE

– ಸಂವಿಧಾನ ರಕ್ಷಣೆ ಮಾಡುವ ಬದ್ಧತೆ ಕಾಂಗ್ರೆಸ್ ಗೆ ಮಾತ್ರ ಇದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಉಳಿಯಲು ಬಿಟ್ಟರೆ ಜನ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಹಾತ್ಮಾ ಗಾಂಧೀಜಿ ಹಾಗೂ ಲಾಕ್ ಬಹದ್ದೂರ್ ಶಾಸ್ತ್ರಿ ದಿನಾಚಣೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಬರೀ ಸುಳ್ಳು ಹೇಳುತ್ತಾರೆ. ಅವರು ಏನು ಹೇಳಿದರೂ ನಾವು ಉಲ್ಟಾ ಅರ್ಥ ಮಾಡಿಕೊಳ್ಳಬೇಕು. ಅದಾನಿ, ಅಂಬಾನಿ ಆಸ್ತಿ ದುಪ್ಪಟ್ಟು ಆಗಿದೆ. ಗಾಂಧಿ ಕೊಂದವನನ್ನು ದೇಶಭಕ್ತರು ಎಂದು ಕರೆಯುತ್ತಾರೆ. ಇವರಿಗೆ ನಾಚಿಕೆ ಆಗಬೇಕು. ಇವರು ಎಮರ್ಜೆನ್ಸಿ ಘೋಷಣೆ ಮಾಡಿಲ್ಲ ಅಷ್ಟೇ ಆದರೆ ಅದು ಜಾರಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಪ್ರಜಾಪ್ರಭುತ್ವ ನಾಶ ಆಗುತ್ತಿದೆ. ಸಂವಿಧಾನಕ್ಕೆ ಗೌರವ ಇಲ್ಲದಂತೆ ಆಗಿದೆ. ಹತ್ತು ತಿಂಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಏನೂ ಆಗಿಲ್ಲ ಅನ್ನೋ ರೀತಿ ನಡೆದುಕೊಳ್ಳುತ್ತಿದ್ದಾರೆ. ಸಿಎಂ ರೈತರ ಹೋರಾಟವನ್ನು ಕಾಂಗ್ರೆಸ್ ಪ್ರೇರಿತ ಪ್ರತಿಭಟನೆ ಎಂದು ಕರೆದಿದ್ದಾರೆ. ಪ್ರಧಾನಿ ಮೋದಿಯವರನ್ನು ಉಳಿಯಲು ಬಿಟ್ಟರೆ ಜನ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರೈತರಿಗೆ ದಾಖಲೆ ನೀಡಲು ಸತಾಯಿಸುತ್ತಿದ್ದ ಅಧಿಕಾರಿಗಳಿಗೆ ತರಾಟೆ- ಸೂ….ಮಕ್ಕಳು ಎಂದ ರಮೇಶ್ ಕುಮಾರ್

ಸಂವಿಧಾನ ಉಳಿಸುತ್ತೇವೆ, ಇಂತಹ ಸರ್ಕಾರ ಕಿತ್ತು ಹಾಕುತ್ತೇವೆಂದು ನಾವು ಇಂದು ಪ್ರತಿಜ್ಞೆ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ ನೀಡಿದರು. ನಮ್ಮದು ಶ್ರೇಷ್ಠ ಸಂವಿಧಾನ ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಶ್ರೇಷ್ಠತೆ ಅಳ್ವಿಕೆ ಮಾಡುವವರ ಕೈಯಲ್ಲಿ ಇರುತ್ತೆ. ಈಗ ಕೆಟ್ಟವರ ಕೈಯ್ಯಲ್ಲಿ ಸಂವಿಧಾನ ಸಿಕ್ಕಿದೆ. ಇದನ್ನು ರಕ್ಷಣೆ ಮಾಡುವ ಜವಾಬ್ದಾರಿ ಕಾಂಗ್ರೆಸ್ ನಾಯಕರ ಮೇಲಿದೆ. ಕಾಂಗ್ರೆಸ್ ಗೆ ಮಾತ್ರ ಈ ಬದ್ಧತೆ ಇರುವುದು ಎಂದು ಹೇಳಿದರು.

ಗಾಂಧೀಜಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಇಳಿಯುವ ಮೊದಲು ಭಾರತವನ್ನು ಸುತ್ತಿದ್ದರು. ಜನರ ಸಾಮಾಜಿಕ ಮತ್ತು ಆರ್ಥಿಕ ಜೀವನ ಬಗ್ಗೆ ತಿಳಿಯಲು ದೇಶ ಸುತ್ತಿದ್ದರು. ನನ್ನ ಜನ ಬಡತನದಲ್ಲಿ ಇದ್ದಾರೆ ಹೀಗಾಗಿ ಅವರಿಗೆ ಊಟ ಬಟ್ಟೆ ಸಿಗುವವರೆಗೂ ನಾನು ಅರೆಬಟ್ಟೆ ಧರಿಸುತ್ತೇನೆಂದು ತೀರ್ಮಾನ ಮಾಡಿದ್ದರು. ನುಡಿದಂತೆ ನಡೆದ ಮಹಾನುಭಾವ ಮಹಾತ್ಮ ಗಾಂಧಿಜೀ. ಅವರು ಏನು ಹೇಳಿದರೋ ಅದರಂತೆ ನಡೆದುಕೊಂಡರು. ನೆಲ್ಸನ್ ಮಂಡೇಲಾ, ಮಾರ್ಟಿನ್ ಲೂಥರ್, ಓಬಮಾ ಸಹ ಮಹಾತ್ಮ ಗಾಂಧಿ ತತ್ವಗಳ ಮೇಲೆ ನಡೆದರು. ಮಹಾತ್ಮ ಗಾಂಧಿಜೀ ಕೇವಲ ಭಾರತಕ್ಕೆ ನಾಯಕ ಅಲ್ಲ. ವಿಶ್ವದ ನಾಯಕ ಎಂದರು. ಇದನ್ನೂ ಓದಿ: ಟೀಕೆಗಳು ಆರೋಪಗಳಿಗೆ ಮಾತ್ರ ಸೀಮಿತವಾಗಿವೆ: ಪ್ರಧಾನಿ ಮೋದಿ

ಸಂಪೂರ್ಣವಾಗಿ ಗಾಂಧಿ ಮಾರ್ಗದಲ್ಲಿ ನಡೆಯಲು ಸಾಧ್ಯವಿಲ್ಲ. ಹೀಗೆ ಹೇಳಿದರೆ ಹಿಪೋಕ್ರೆಸಿಗಳು ಆಗುತ್ತೇವೆ. ಕುಡಿಯುವುದು ಬೇಡ ಎಂದು ಗಾಂಧಿಜೀ ಹೇಳಿದ್ದರು. ಬಿಟ್ಟಿದ್ದೇವಾ? ಸತ್ಯ ಒಪ್ಪಿಕೊಳ್ಳಬೇಕು. ಆದಷ್ಟು ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನ ಮಾಡೋಣ ಈ ದೇಶ ಉಳಿಸುವ ಕೆಲಸ ಮಾಡೋಣ ಎಂದು ಕರೆ ನಿಡಿದರು.

ಲಾಲ್ ಬಹಾದ್ದೂರ್ ಶಾಸ್ತ್ರಿ ತಮ್ಮ ಮಗನಿಗೆ ಉನ್ನತ ಹುದ್ದೆ ಸಿಕ್ಕಿದ್ದರೆ ರಿಸೈನ್ ಮಾಡು ಎಂದು ಹೇಳಿದರು. ತಂದೆ ಮಗನಿಗೆ ಉನ್ನತ ಹುದ್ದೆ ಕೊಡಿಸಿದ್ದಾರೆ ಎಂದು ಟೀಕಿಸುತ್ತಾರೆ. ಅದು ನಿರಾಧಾರ ರೈಲ್ವೆ ದುರಂತ ಆದಾಗ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದರು. ಇದನ್ನು ಈಗ ನಾವು ನೋಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

TAGGED:gandhi jayantiKPCCPublic TVsiddaramaiahಕೆಪಿಸಿಸಿಪಬ್ಲಿಕ್ ಟಿವಿಮಹಾತ್ಮ ಗಾಂಧಿ ಜಯಂತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
2 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
15 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
18 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
21 hours ago

You Might Also Like

rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
14 minutes ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
27 minutes ago
Meghalaya Honeymoon
Latest

ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು

Public TV
By Public TV
1 hour ago
Kolar Srinivaspur Bandh Mango Price Drop
Districts

Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

Public TV
By Public TV
2 hours ago
Shubhanshu Shukla 3
Latest

ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

Public TV
By Public TV
2 hours ago
Kadugodi Rowdysheetar Murder copy
Bengaluru City

Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?