ಚಿಕ್ಕೋಡಿ/ಬೆಳಗಾವಿ: ಶೀಘ್ರದಲ್ಲೇ ಬಿಜೆಪಿಯಿಂದ ಕಾಂಗ್ರೆಸ್ ಗೆ 40 ಜನ ಶಾಸಕರು ಬರುತ್ತಾರೆ ಎಂದು ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಮೂರು ಜನ ಪ್ರಭಾವಿಗಳಿಗೆ ಸಚಿವ ಸ್ಥಾನ ಕೈ ತಪ್ಪಿಸಲಾಗಿದೆ. ಬಿಜೆಪಿಯಲ್ಲಿ ಈಗ ಆಂತರಿಕ ಕಚ್ಚಾಟ ಶುರುವಾಗಿದೆ. ಮೂವರು ಪ್ರಭಾವಿ ಶಾಸಕರೊಂದಿಗೆ ಒಟ್ಟು 40 ಜನ ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ರಾಜು ಕಾಗೆ ಹೊಸ ವಲಸೆ ಬಾಂಬ್ ಹಾಕಿದ್ದಾರೆ. ಇದನ್ನೂ ಓದಿ: ಸಿಂದಗಿ, ಹಾನಗಲ್ ಉಪ ಚುಣಾವಣೆ- ಇಂದು ಹೈಕಮಾಂಡ್ ಕೈ ಸೇರಲಿದೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಜನ ಶಾಪ ಹಾಕುತ್ತಿದ್ದಾರೆ. ನರೇಂದ್ರ ಮೋದಿಯವರ ವರ್ಚಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬಿಜೆಪಿ ಪಕ್ಷದ ಮೇಲಿನ ನಂಬಿಕೆಯನ್ನು ಜನ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷಕ್ಕೆ 40 ಜನ ಶಾಸಕರು ಬರುತ್ತಾರೆ ಎಂದು ರಾಜು ಕಾಗೆ ಹೇಳಿದ್ದಾರೆ.