ಸಿಂದಗಿ ಉಪಚುನಾವಣೆ- ನಾಳೆ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Public TV
1 Min Read
sindagi jds candidate najiya

ವಿಜಯಪುರ: ಸಿಂದಗಿ ಉಪಚುನಾವಣೆ ರಂಗೇರಿದೆ. ನಾಳೆ ಜಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ್ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಸಿಂದಗಿ ಪಟ್ಟಣದ ಹೊರವಲಯದಲ್ಲಿರುವ ಮಂಗಲ ಕಲ್ಯಾಣ ಮಂಟಪದಲ್ಲಿ ಕಾರ್ತಕರ್ತ ಸಭೆ ನಡೆಯಲಿದೆ. ಇದನ್ನೂ ಓದಿ: ಶಾರುಖ್ ಖಾನ್ ಪುತ್ರನ ಬಂಧನ- ರಮ್ಯಾಗೆ ಅನುಮಾನ

ಕಾರ್ಯಕರ್ತ ಸಭೆ ನಂತರ ಕುಮಾರಸ್ವಾಮಿ ಮತಯಾಚನೆ ಮಾಡಲಿದ್ದಾರೆ. ಬಿಜೆಪಿ ಗೆಲುವಿಗಾಗಿ ನನಗೆ ಟಿಕೆಟ್ ಸಿಕ್ಕಿಲ್ಲ, ನಮ್ಮ ಮಾವನವರು ಸೇರಿದಂತೆ ನಮ್ಮ ಕುಟುಂಬದವರು ಮೊದಲಿನಿಂದಲೂ ಜೆಡಿಎಸ್ ಸಕ್ರಿಯ ಕಾರ್ತಕರ್ತರು. ಹೀಗಾಗಿ ನಮಗೆ ಟಿಕೆಟ್ ನೀಡಿದ್ದಾರೆ. ಮತಕ್ಷೇತ್ರದಲ್ಲಿ ಜೆಡಿಎಸ್ ನ ಪಡೆಯೇ ಇದೆ. ನಮ್ಮ ಗೆಲವು ನಿಶ್ಚಿತ ಎಂದು ಜೆಡಿಎಸ್ ಅಭ್ಯರ್ಥಿ ನಾಜಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *