Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

Districts

ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

Public TV
Last updated: October 8, 2021 5:47 pm
Public TV
Share
3 Min Read
ELEPHANT
SHARE

ಮಂಡ್ಯ: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಎಂದರೆ ಜನರಿಗೆ ಥಟ್ ಎಂದು ನೆನಪಿಗೆ ಬರುವುದು ಆನೆಗಳು. ಅಂಬಾರಿ ಹೊರುವ ಅರ್ಜುನನ್ನು ಕಂಡರೆ ಜನರು ಎಷ್ಟು ಆಕರ್ಷಿತಗೊಳ್ಳುತ್ತಾರೋ ಅಷ್ಟೇ ಪ್ರಮಾಣದಲ್ಲಿ ಜಂಬೂ ಸವಾರಿ ಟ್ರೂಫ್‍ನಲ್ಲಿರುವ ಮತ್ತೊಂದು ಆನೆ ವಿಕ್ರಮ ಅಂದರೆ ಜನರಿಗೆ ಅಚ್ಚು-ಮೆಚ್ಚು. ಜನರ ಮೆಚ್ಚಿನ ಆನೆ ವಿಕ್ರಮನಿಗೆ ಮದವೇರಿರುವ ಕಾರಣ ಈ ಬಾರಿ ಜಂಬೂ ಸವಾರಿ ಮೆರವಣಿಗೆಯಿಂದ ಔಟ್ ಆಗಿದ್ದಾನೆ.

dasara jambu savari

ಕಳೆದ ಐದು ವರ್ಷಗಳಿಂದ ಸತತವಾಗಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಜರುಗುವ ಖಾಸಗಿ ದರ್ಬಾರ್‍ನ ಪೂಜಾ ವಿಧಿ ವಿಧಾನಗಳಲ್ಲಿ ಪಟ್ಟದ ಆನೆಯಾಗಿ ಜವಾಬ್ದಾರಿ ಹೊತ್ತಿದ್ದ ವಿಕ್ರಮ ಆನೆಗೆ ಇದೀಗ ಮದವೇರಿರುವ ಕಾರಣ ಈ ಬಾರಿಯ ದಸರಾ ಮಹೋತ್ಸವದ ಕಾರ್ಯಕ್ರಮದಿಂದ ದೂರ ಉಳಿಸಲಾಗಿದೆ. ವಿಕ್ರಮನ ಬದಲಿಗೆ ಗೋಪಾಲಸ್ವಾಮಿ ಆನೆಗೆ ಪಟ್ಟದ ಆನೆಯ ಸ್ಥಾನವನ್ನು ಈ ಬಾರಿ ನೀಡಲಾಗಿದೆ. 58 ವರ್ಷದ ವಿಕ್ರಮ ಶರೀರದ ಎತ್ತರ 2.89 ಮೀಟರ್ ಇದ್ದು, 3.43 ಮೀಟರ್ ಉದ್ದ, 3,820 ಕೆ.ಜಿ ತೂಕವಿರುವ ವಿಕ್ರಮ ಕಳೆದ 18 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದ್ದಾನೆ. ಇಲ್ಲಿಯವರೆಗೆ ಬಹಳ ಸೌಮ್ಯ ಸ್ವಭಾವದ ಆನೆ ಎಂಬ ಹೆಗ್ಗಳಿಕೆ ಹೊಂದಿದ್ದ ವಿಕ್ರಮನಿಗೆ ಇದೀಗ ಮದವೇರಿರುವ ಕಾರಣ ಬಹಳ ಕೋಪದಿಂದ ವರ್ತನೆ ಮಾಡುತ್ತಿದ್ದಾನೆ. ಈ ಮದ ಇಳಿಯಬೇಕು ಎಂದರೆ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಬೇಕು. ಹೀಗಾಗಿ ಇವನನ್ನು ಪ್ರತ್ಯೇಕವಾಗಿ ಅರಮನೆಯ ಆವರಣದಲ್ಲಿ ಕಟ್ಟಿಹಾಕಲಾಗಿದೆ. ಇದನ್ನೂ ಓದಿ: ಮನೆ ಮೇಲೆ ಕಲ್ಲು ತೂರಿರುವುದು ರಾಜಕೀಯ ಪ್ರೇರಿತವಲ್ಲ: ಪುಟ್ಟರಾಜು ಸ್ಪಷ್ಟನೆ

ELEPHANT 3

ದಸರಾ ಆನೆಗಳಲ್ಲಿ ಅಂಬಾರಿ ಆನೆ ಹೊರತುಪಡಿಸಿದರೆ, ಪಟ್ಟದ ಆನೆಯ ಪಾತ್ರ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ಪಟ್ಟದ ಆನೆಯಾಗಿ ಸೌಮ್ಯ ಸ್ವಭಾವದ ಆನೆಯನ್ನೇ ಆಯ್ಕೆ ಮಾಡಲಾಗುತ್ತದೆ. ಈ ಹಿಂದೆ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೆ.ಗುಡಿ ಆನೆ ಶಿಬಿರದಲ್ಲಿನ ಗಜೇಂದ್ರ ಆನೆ ಪಟ್ಟದ ಆನೆಯಾಗಿ ಜವಾಬ್ದಾರಿ ನಿಭಾಯಿಸುತ್ತಿತ್ತು. ಗಜೇಂದ್ರನಿಗೆ ಮದವೇರಿ ದಸರಾ ಆನೆ ಶ್ರೀರಾಮ ಹಾಗೂ ಮಾವುತ ಗಣಪತಿಯನ್ನು ಕೊಂದ ಹಿನ್ನೆಲೆ ಹಾಗೂ ಹೊಸ ಮಾವುತ ಶಂಕರ್ ಅನಾರೋಗ್ಯದಿಂದ ಮೃತಪಟ್ಟ ಕಾರಣ ಗಜೇಂದ್ರ ದಸರಾ ಮಹೋತ್ಸವದಿಂದ ದೂರವುಳಿಯ ಬೇಕಾಯಿತು.

170921kpn88

ಗಜೇಂದ್ರನಿಂದ ತೆರವಾದ ಪಟ್ಟದ ಆನೆ ಸ್ಥಾನವನ್ನು 2015ರಿಂದಲೂ ವಿಕ್ರಮ ನಿಭಾಯಿಸುತ್ತಿದ್ದು, ತನ್ನ ಸೌಮ್ಯ ಸ್ವಭಾವದಿಂದಲೇ ಮನ್ನಣೆಗಳಿಸಿದೆ. ಮದ ಇದ್ದರೂ ವರ್ತನೆಯಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಸಾಮಾನ್ಯ ಸ್ಥಿತಿಯಲ್ಲಿರುವಂತೆ ವರ್ತಿಸುತ್ತಿದೆ. ಇದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ, ಪಶುವೈದ್ಯರು, ಮಾವುತ, ಕಾವಾಡಿಗಳಿಗೂ ಸಮಾಧಾನವನ್ನುಂಟು ಮಾಡಿದೆ. ವಿಕ್ರಮನಿಗೆ ಅತ್ಯಂತ ಸಣ್ಣ ಪ್ರಮಾಣದಲ್ಲಿ ಮದ ಇರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಮಾವುತರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

ELEPHANT

ವಿಕ್ರಮನಿಗೆ ಸದ್ಯ ಸ್ಪಲ್ಪ ಪ್ರಮಾಣದಲ್ಲಿ ಮದ ಇದ್ದರು ಕಾರಣ ಗಂಡಾನೆ ಹತ್ತಿರ ಬಂದಾಗ ಹಾಗೂ ಶಬ್ದ ಕೇಳಿದಾಗ ಗಲಾಟೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದರ ಮದವನ್ನು ಕಡಿಮೆ ಮಾಡುವ ಉದ್ದೇಶದಿಂದ ವಿಕ್ರಮನಿಗೆ ವಿಶೇಷ ಆರೈಕೆ ಮಾಡಲಾಗುತ್ತಿದೆ. ಇದರ ದೇಹದ ಉಷ್ಣಾಂಶವನ್ನು ಕಡಿಮೆ ಮಾಡಲು ಇದಕ್ಕೆ ಪ್ರತಿ ದಿನ ನಾಲ್ಕು ಬಾರಿ ತಣ್ಣೀರಿನಲ್ಲಿ ಸ್ನಾನ ಮಾಡಿಸಿ, ಕುಸಲ್ಕಿ, ಮೊಸರನ್ನಾ ಈ ರೀತಿಯಾ ತಂಪಾದ ಆಹಾರ ಪದಾರ್ಥಗಳನ್ನು ನೀಡಲಾಗುತ್ತದ್ದು, ಬೇರೆ ಆನೆಗಳಿಗೆ ಕೊಡುತ್ತಿರುವ ಆಹಾರ ಪದಾರ್ಥಗಳನ್ನು ಈ ಆನೆಗೆ ನೀಡುತ್ತಿಲ್ಲ.

mys dasara 5 medium

ಒಟ್ಟಾರೆ ಸತತ ಐದು ವರ್ಷಗಳ ಕಾಲ ಪಟ್ಟದ ಆನೆಯ ಜವಾಬ್ದಾರಿ ಹೊತ್ತಿದ್ದ ವಿಕ್ರಮನಿಗೆ ಮದವೇರಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗಬಾರದು ಎಂದು ವಿಕ್ರಮನಿಗೆ ಈ ಬಾರಿ ದಸರಾದಿಂದ ಗೇಟ್ ಪಾಸ್ ನೀಡಲಾಗಿದೆ. ಮುಂದಿನ ದಸರಾ ವೇಳೆಗೆ ನಮ್ಮ ಮೆಚ್ಚಿನ ವಿಕ್ರಮ ಮೋಸ್ಟ್ ಎಲಿಜಬಲ್ ಆಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು ಎನ್ನುವುದೇ ನಮ್ಮ ಆಶಯವಾಗಿದೆ.

TAGGED:DasaramandyamysuruPublic TVVikram Elephantದಸರಾಪಬ್ಲಿಕ್ ಟಿವಿಮಂಡ್ಯಮೈಸೂರುವಿಕ್ರಮ ಆನೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
20 minutes ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
23 minutes ago
PBKS vs LSG IPL 2026 1
Cricket

ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Public TV
By Public TV
24 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ನಾಳೆ ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Public TV
By Public TV
54 minutes ago
01 14
Big Bulletin

ಬಿಗ್‌ ಬುಲೆಟಿನ್‌ 19 April 2026 ಭಾಗ-1

Public TV
By Public TV
1 hour ago
02 14
Big Bulletin

ಬಿಗ್‌ ಬುಲೆಟಿನ್‌ 19 April 2026 ಭಾಗ-2

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?